Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...