Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...