Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...