Homeಅಂಕಣಗಳುಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

ಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

- Advertisement -
- Advertisement -

ಗೌರಿ ಲಂಕೇಶ್|

ಭೈರಪ್ಪನವರ ಸಾಹಿತ್ಯ ಮತ್ತು ಜೀವನ ದರ್ಶನಗಳ ಬಗ್ಗೆ ವಸ್ತುನಿಷ್ಠವಾಗಿ ಚರ್ಚಿಸುವ ಅಗತ್ಯತೆ ಇದ್ದೇ ಇದೆ. ಯಾಕೆಂದರೆ ಭೈರಪ್ಪನವರ ಸಾಹಿತ್ಯಿಕ ಜನಪ್ರಿಯತೆಯನ್ನೇ ಅವರು ಎತ್ತಿ ಹಿಡಿಯುವ ಬ್ರಾಹ್ಮಣೀಯ ಮೌಲ್ಯಗಳಿಗೆ ಸಿಗುತ್ತಿರುವ ಜನಮನ್ನಣೆ ಎಂದು ಕೆಲವರು ಅರ್ಥೈಸುತ್ತಿದ್ದಾರೆ. ಇಲ್ಲಿ ಆರಂಭದಲ್ಲೇ ಒಂದೆರಡು ವಿಷಯಗಳನ್ನು ಸ್ಪಷ್ಟಪಡಿಸುವ ಅಗತ್ಯವಿದೆ. ನಾನು ಭೈರಪ್ಪನವರ ಸಾಹಿತ್ಯಿಕ ಪ್ರತಿಭೆಯನ್ನು ನಿರಾಕರಿಸುವುದಿಲ್ಲ. ಅವರು ಬಳಸುವ ಭಾಷೆ ನನಗೆ ವಿಭಿನ್ನವಾಗಿ ಕಂಡರೂ ಅವರು ಪಾತ್ರಗಳನ್ನು, ಸಂದರ್ಭಗಳನ್ನು ಮತ್ತು ಸನ್ನಿವೇಶಗಳನ್ನು ಸಮಗ್ರವಾಗಿ ಚಿತ್ರಿಸುವಲ್ಲಿ ಎಷ್ಟು ಯಶಸ್ವಿಯಾಗುತ್ತಾರೆಂದರೆ ಅವರ ಕೃತಿಗಳು ಸುಲಭವಾಗಿ ಓದಿಸಿಕೊಂಡು ಹೋಗುತ್ತವೆ. ಅಂತಹ ಕೃತಿಗಳಲ್ಲಿ ಅವರ `ಗೃಹಭಂಗ’ ಒಂದು. ಇತ್ತೀಚೆಗೆ ನಾನು ಮತ್ತೊಮ್ಮೆ ಇದನ್ನು ಓದಿದಾಗ ಬೆರಗಾಗಿದ್ದೆ. ಇಂತಹ ಉತ್ತಮ ಕೃತಿ ಬರೆದ ಭೈರಪ್ಪನವರು ಅದು ಹೇಗೆ `ಕವಲು’ ತರಹದ ಕೆಟ್ಟ ಕಾದಂಬರಿ ಬರೆಯಲು ಸಾಧ್ಯ ಎಂದು ನನಗೆ ಅಚ್ಚರಿ ಆಗಿತ್ತು.

ಇರಲಿ, ಭೈರಪ್ಪನವರ ಸಮಗ್ರ ಸಾಹಿತ್ಯಕ್ಕೆ ಬರುವುದಾದರೆ ಅವರ ಕೃತಿಗಳನ್ನು ಓದಿ ಮುಗಿಸಿದನಂತರ ಸಾಮಾನ್ಯ ಓದುಗರಲ್ಲಿ ಒಂದು ಒಳ್ಳೆಯ ಕತೆಯನ್ನು ಓದಿದ ಅನುಭವವಾಗುತ್ತದೆಯೇ ಹೊರತು ಆ ಕತೆಯ ಆಳದಲ್ಲಿ ಅಡಗಿರುವ ಅವರ ಜನವಿರೋಧಿ ಮತ್ತು ಮಹಿಳಾ ವಿರೋಧಿ ನಿಲುವುಗಳಾಗಲಿ ಅಥವಾ ಪುರೋಹಿತಶಾಹಿಯನ್ನು ಎತ್ತಿಹಿಡಿಯುವ ಅವರ ಸಿದ್ಧಾಂತವಾಗಲಿ ಓದುಗರ ಗ್ರಹಿಕೆಗೆ ಸಿಗುವುದಿಲ್ಲ. ಅದಕ್ಕೆ ಉತ್ತಮ ಉದಾಹರಣೆ `ವಂಶವೃಕ್ಷ.’
`ವಂಶವೃಕ್ಷ’ ಕಾದಂಬರಿಯಲ್ಲಿ `ಕವಲು’ ಕಾದಂಬರಿಯಲ್ಲಿರುವಂತಹ ಪೇಲವ ಪಾತ್ರಗಳಾಗಲಿ, ಅಸೂಕ್ಷ್ಮ ಭಾವಸಂಬಂಧಗಳಾಗಲಿ, ಸರಳ ರೇಖೆಯಂಥ ಕಾರ್ಡ್‍ಬೋರ್ಡ್ ವ್ಯಕ್ತಿತ್ವಗಳಾಗಲೀ ಇಲ್ಲ. ಆದ್ದರಿಂದ ಮೇಲುನೋಟಕ್ಕೆ ಇದೊಂದು ಒಳ್ಳೆಯ ಕೃತಿಯಂತೆ ಸಾಮಾನ್ಯ ಓದುಗರಿಗೆ ಭಾಸವಾಗುತ್ತದೆ. ಅದರಲ್ಲೂ ಕಾತ್ಯಾಯಿನಿ ಎಂಬ ಯುವ ವಿಧವೆ ಬ್ರಾಹ್ಮಣೀಯ ಕಟ್ಟುಪಾಡುಗಳನ್ನು ವಿರೋಧಿಸಿ ಹೊಸ ಬದುಕು ಕಂಡುಕೊಳ್ಳುವ ಪ್ರಯತ್ನವೂ ಕ್ರಾಂತಿಕಾರಿಯಾಗಿಯೇ ಕಾಣಿಸುತ್ತದೆ. ಅಷ್ಟೇ ಮುಖ್ಯವಾಗಿ ಕಾದಂಬರಿಯ ಅಂತ್ಯದಲ್ಲಿ ಆಕೆಯ ಸಂಪ್ರದಾಯಸ್ಥ ಮಾವ ಶ್ರೋತ್ರಿಗೇ ತನ್ನ ಹುಟ್ಟು ಪರಿಶುದ್ಧವಾಗಿರಲಿಲ್ಲವಾದ್ದರಿಂದ ವಂಶ ಎಂಬ ವೃಕ್ಷದ ಪವಿತ್ರತೆಯೆ ಅರ್ಥಹೀನವಾಗಿ ಕಾಣಿಸುವುದೂ ಚಾರಿತ್ರಿಕವಾಗಿ ಭಾಸವಾಗುತ್ತದೆ. ಆದರೆ ಆಳದಲ್ಲಿ `ವಂಶವೃಕ್ಷ’ ಕಾದಂಬರಿ ಏನನ್ನು ಹೇಳುತ್ತಿದೆ ಎಂದು ನೋಡುವುದು ಮುಖ್ಯವಾಗುತ್ತದೆ, ಯಾಕೆಂದರೆ ಬ್ರಾಹ್ಮಣಿಕೆಯ ಕಟ್ಟುಪಾಡುಗಳನ್ನು ವಿರೋಧಿಸುವ ಕಾತ್ಯಾಯಿನಿ `ಸತತ ಗರ್ಭಪಾತಕ್ಕೆ’ ತುತ್ತಾಗುತ್ತಾಳೆ; ತಾನು ತಪ್ಪು ಮಾಡಿದೆ, ಪಾಪ ಮಾಡಿದೆ ಎಂಬ ಕೊರಗಿನಲ್ಲೇ ಸಾಯುತ್ತಾಳೆ. ಅದರರ್ಥ, ಮಹಿಳೆಯರು ಸಂಪ್ರದಾಯವನ್ನು ಮುರಿದರೆ, ಕಟ್ಟುಪಾಡುಗಳನ್ನು ವಿರೋಧಿಸಿದರೆ ಅವರು ಎಂದೂ ಸಂತೋಷದಿಂದಿರಲು ಸಾಧ್ಯವಿಲ್ಲ ಎಂಬ ನಿಲುವನ್ನು ಭೈರಪ್ಪ ಚೆಂದವಾಗಿ ರೂಪಿಸಿದ್ದಾರೆ ಎಂದಲ್ಲವೆ?

ಹಾಗೆಯೇ ಆಕೆಯ ಮಾವ ಶ್ರೋತ್ರಿಗೆ ತಾನು ಕಾತ್ಯಾಯಿನಿಗೆ ಅನ್ಯಾಯ ಮಾಡಿದೆ ಎಂಬ ಭಾವನೆ ಕಾಡುತ್ತದೆಯೇ ಹೊರತು ಸಂಪ್ರದಾಯ, ವಂಶದ ಪವಿತ್ರತೆ, ಕಟ್ಟುಪಾಡುಗಳೆಲ್ಲ ನಿರುಪಯುಕ್ತ ಎಂದೆನಿಸುವುದೇ ಇಲ್ಲ. ಯಾಕೆಂದರೆ ಅವನು ಅದ್ಯಾವುಗಳನ್ನು ವಿರೋಧಿಸುವ ಗೋಜಿಗೇ ಹೋಗುವುದಿಲ್ಲ. ಬದಲಾಗಿ ಅದೇ ಸಂಪ್ರದಾಯಕ್ಕೆ ಕಟ್ಟುಬಿದ್ದು ಸಾಯುವ ಹೊಸ್ತಿಲಲ್ಲಿರುವ ಕಾತ್ಯಾಯಿನಿಯ ಬಾಯಿಗೆ ಗಂಗಾಜಲವನ್ನು ಹಾಕಿಸುತ್ತಾನೆ ಮತ್ತು ಸನ್ಯಾಸವನ್ನು ಅರಸುತ್ತಾ ಅದ್ಯಾವುದೋ `ಪುಣ್ಯ’ ಕ್ಷೇತ್ರಕ್ಕೆ ಹೊರಡುತ್ತಾನೆ. ಅಂದರೆ ಕಾತ್ಯಾಯಿನಿ ಮತ್ತು ಶ್ರೋತ್ರಿ- ಇಬ್ಬರಲ್ಲೂ ಬ್ರಾಹ್ಮಣಿಕೆ ಕಟ್ಟುಪಾಡುಗಳನ್ನು ಮೀರಿದ್ದಕ್ಕೆ ಪಾಪಪ್ರಜ್ಞೆ ಹುಟ್ಟುತ್ತದೆಯೇ ವಿನಃ ವಿಮೋಚನಾ ಭಾವವಲ್ಲ. ಆದ್ದರಿಂದ ಸಾಹಿತ್ಯಿಕವಾಗಿ `ವಂಶವೃಕ್ಷ’ ಕುರಿತ ವಿಮರ್ಶೆ ಏನೇ ಇದ್ದರೂ ಅದರ ತಾತ್ವಿಕ ದರ್ಶನ ಈ ಬ್ರಾಹ್ಮಣೀಯ ಕಟ್ಟುಪಾಡನ್ನು ಮೀರುವುದರಿಂದ ಉಂಟಾಗುವ `ಪಾಪಪ್ರಜ್ಞೆ’ಯೇ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ.

ಈ ಬ್ರಾಹ್ಮಣಿಕೆಯ ಎತ್ತಿಹಿಡಿಯುವಿಕೆ ಕೇವಲ `ವಂಶವೃಕ್ಷ’ದಲ್ಲಿ ಮಾತ್ರ ಸಂಭವಿಸುವುದಿಲ್ಲ. ಭೈರಪ್ಪನವರ `ದಾಟು’ ಕಾದಂಬರಿಯಲ್ಲೂ ಅಬ್ರಾಹ್ಮಣನನ್ನು ಸತ್ಯಭಾಮೆ ಪ್ರೀತಿಸಿದ್ದಕ್ಕೆ ಇಡೀ ಹಳ್ಳಿಯೇ ಸರ್ವನಾಶವಾಗುತ್ತದೆ. `ತಬ್ಬಲಿಯು ನೀನಾದೆ ಮಗನೆ’ಯಲ್ಲೂ ನಾಯಕ ತಬ್ಬಲಿಯಾಗುವುದು ಹಿಂದೂ ಧರ್ಮದ ಕಟ್ಟಳೆಯನ್ನು ಮೀರಿದ್ದಕ್ಕೆ. ಹೀಗೆ ಭೈರಪ್ಪನವರು ಕಾತ್ಯಾಯಿನಿಯರ ಮತ್ತು ಸತ್ಯಭಾಮೆಯರ `ಮಹಿಳಾ ಪ್ರಜ್ಞೆ’ಯನ್ನು ಸೋಲಿಸುತ್ತಾ ಬ್ರಾಹ್ಮಣಿಕೆಯ ವಿಜಯದ ಕಥೆಗಳನ್ನೇ ಹೇಳುತ್ತಾ ಬಂದಿದ್ದಾರೆ.

ಭೈರಪ್ಪನವರು ಹಲವಾರು ಬಾರಿ ಸಾಹಿತ್ಯ ಸೃಷ್ಟಿಯ ಬಗ್ಗೆ ಮಾತನಾಡುವಾಗ ತಾವು ಸಿದ್ಧಾಂತಕ್ಕಿಂತ `ಸತ್ಯ ಮತ್ತು ಸೌಂದರ್ಯ’ಕ್ಕೆ ಬದ್ಧ ಎಂದು ಹೇಳಿದ್ದಾರೆ. ಮಾತ್ರವಲ್ಲ ಲೇಖಕ ಸಿದ್ಧಾಂತಕ್ಕೆ ಬದ್ಧನಾದಾಗ ಉತ್ತಮ ಸಾಹಿತ್ಯ ಸೃಷ್ಟಿಯಾಗುವುದಿಲ್ಲ ಎಂದೆಲ್ಲ ಪ್ರತಿಪಾದಿಸಿದ್ದಾರೆ.
ಆದರೆ ಭೈರಪ್ಪನವರು `ಗೃಹಭಂಗ’ ಮತ್ತು `ಪರ್ವ’ ಎಂಬ ಎರಡು ಕೃತಿಗಳನ್ನು ಬಿಟ್ಟರೆ ಮಿಕ್ಕಂತೆ ಬರೆದಿರುವುದೆಲ್ಲ ತಾವು ನಂಬಿರುವ ಸಿದ್ಧಾಂತದ ಪ್ರಚಾರಕ್ಕಾಗಿಯೇ. ಆದ್ದರಿಂದಲೇ ಅವೆಲ್ಲ ಕೆಟ್ಟ ಕೃತಿಗಳಾಗಿವೆ. ಆರೆಸ್ಸೆಸ್ ಸಿದ್ಧಾಂತ ಮಾತ್ರವಲ್ಲದೆ ಆ ಸಂಘಟನೆಯ ವೈಭವೀಕರಣವನ್ನೇ ವಸ್ತುವಾಗಿಟ್ಟುಕೊಂಡ ಅವರ ಮೊದಲ ಕಾದಂಬರಿಯಾದ `ಗೃಹಶ್ರೀ’ಯಿಂದ ಹಿಡಿದು ಇತ್ತೀಚೆಗೆ ಮುಸ್ಲಿಮರನ್ನು ತುಚ್ಛವಾಗಿ ಚಿತ್ರಿಸಲೆಂದೇ ಬರೆದ `ಆವರಣ’ ಮತ್ತು ಸ್ವಾಭಿಮಾನಿ ಮಹಿಳೆಯರ ಬಗ್ಗೆ ಬ್ರಾಹ್ಮಣೀಯ ಪುರುಷಾಧಿಪತ್ಯದ ತಿರಸ್ಕಾರದಿಂದ ಹುಟ್ಟಿಕೊಂಡ `ಕವಲು’ ಎಲ್ಲವೂ ಅವರು ನಂಬಿರುವ ಹಿಂದೂತ್ವ ಸಿದ್ಧಾಂತಹ ಕರಪತ್ರಗಳಷ್ಟೇ ಎಂದರೆ ತಪ್ಪಾಗಲಾರದು.

ಭೈರಪ್ಪನವರ ಈ ಮತಾಂಧಕ್ಕೆ ಕಾರಣ ಇಲ್ಲದಿಲ್ಲ. ಅವರು ತಮ್ಮ ಬದುಕು ಮತ್ತು ಅನುಭವಕ್ಕೆ ನಿಷ್ಠರಾಗಿ ಬರೆದಾಗ `ಗೃಹಭಂಗ’ ಸೃಷ್ಟಿಯಾಗುತ್ತದೆ. ಯಾವಾಗ ಅವರು ಬದುಕು ಮತ್ತು ಅನುಭವಕ್ಕೆ ನಿಷ್ಠರಾಗದೆ ತಮ್ಮ ಮೆದುಳು ಮತ್ತು ಹೃದಯದಲ್ಲಿ ಇರುವ ಮನು ಮಹರ್ಷಿಯನ್ನು ಆವಾಹಿಸಿಕೊಳ್ಳುತ್ತಾರೋ (ಅನಂತಮೂರ್ತಿಯವರು ಹೇಳಿದ್ದಂತೆ) ಹೈಸ್ಕೂಲ್ ಮಟ್ಟದ ಡಿಬೆಟ್ ತರಹ ಬಾಲಿಶ ಸ್ವರೂಪದ, ಯಾವುದೇ ಸಾಹಿತ್ಯಿಕ ಮೌಲ್ಯವನ್ನು ಹೊಂದಿರದ ಕೃತಿಗಳನ್ನು ಸೃಷ್ಟಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...