Homeಕರ್ನಾಟಕಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

- Advertisement -
- Advertisement -

ದಸರಾ ಉದ್ಘಾಟನಾ ಭಾಷಣದಲ್ಲಿ “ಮಹಿಳೆ ಮುಟ್ಟಾದಾಗ ಆಫೀಸಿಗೆ ಹೋಗೋದು ಬೇರೆ ದೇವಸ್ಥಾನಕ್ಕೆ ಹೋಗೋದು ಬೇರೆ” ಎಂದು ಹೇಳುವ ಮೂಲಕ ಮಹಿಳೆಯರ ಸಹಜ ಮುಟ್ಟನ್ನು ಅವಮಾನಿಸಿದ್ದ ಎಸ್.ಎಲ್ ಭೈರಪ್ಪನವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಸಾಹಿತಿ ಭೈರಪ್ಪನವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆಗಳು ಬಂದಿದ್ದು ಆಯ್ದ ಕೆಲವು ಇಲ್ಲಿವೆ.

ಎಡಗಡೆ ಮುಖ್ಯಮಂತ್ರಿ ಯಡಿಯೂರಪ್ಪ, ಬಲಗಡೆ ಕೇಂದ್ರ ಸಚಿವ ಸದಾನಂದರನ್ನು ಕೂರಿಸಿಕೊಂಡಿದ್ದ ಬೈರಪ್ಪ ನಾಡಿನ ಬಗ್ಗೆ ಕಾಳಜಿ ಇರುವ ಮನುಷ್ಯನೇ ಆಗಿದ್ದರೆ, ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಉತ್ತರ ಕರ್ನಾಟಕ, ಉತ್ತರ ಕನ್ನಡ, ಕರಾವಳಿಯ ಜನರ ಬದುಕಿನ ಬಗ್ಗೆ‌ ಮಾತನಾಡಬೇಕಿತ್ತು. ಅವರು ಬದುಕು ಕಟ್ಟಿಕೊಳ್ಳಲು ಸರ್ಕಾರ ಏನು ಮಾಡಬೇಕು ಎಂಬ ಸಲಹೆ ಕೊಡಬಹುದಿತ್ತು.

ಅಲ್ಲಿ ಕೂತು ಬೆಂಡೆತ್ತಬೇಕಾಗಿರುವುದು ಪ್ರವಾಹ ಪರಿಹಾರಕ್ಕೆಂದು ಚಿಕ್ಕಾಸೂ ಕೊಡದ ಕೇಂದ್ರ ಸರ್ಕಾರವನ್ನು. ವಿಚಾರವಾದಿಗಳು, ಮುಟ್ಟಾಗುವ ಮಹಿಳೆಯರ ಬಗ್ಗೆ ಮಾತಾಡಿದರೆ ಯಾರಿಗೆ ಏನು ಪ್ರಯೋಜನ?

“ನಾಡಹಬ್ಬ ಉದ್ಘಾಟಕರಾಗಿ ಯಾವ ವಿಷಯ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಿಲ್ಲದ ಬೈರಪ್ಪನವರಿಗೇನಾದರೂ, ಈ ಎಲ್ಲಾ ಘನಂದಾರಿ ಸಾಧನೆಗೆ ಜ್ಞಾನಪೀಠ ಕೊಟ್ಟರೆ ಅಲ್ಲಿಗೆ ಜ್ಞಾನಪೀಠದ ಮಾನ ಮೂರ್ಕಾಸಿಗೆ ಹರಾಜಾದಂತೆಯೇ ಸರಿ” ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಕಿಡಿಕಾರಿದ್ದಾರೆ.

ಮುಟ್ಟು ಎಂಬ ಪ್ರಕೃತಿ ವಿಸ್ಮಯ ಪುರುಷರ ದೇಹದಲ್ಲಿ ಆಗಿರುತ್ತಿದ್ದರೆ, ಇಲ್ಲ ಶಿಶ್ನವೇ ತಿಂಗಳಿಗೆ ನಾಲ್ಕೈದು ದಿನಗಳ ಕಾಲ ರಕ್ತ ಕಾರುವಂತೆ ಇದ್ದಿದ್ದರೆ ಅದಕ್ಕೆಂದೇ ಹಬ್ಬ, ವೃತಗಳು ಹುಟ್ಟಿರುತ್ತಿದ್ದವು. ಹಾಗಾಗಿ ಭೈರಪ್ಪನಂಥವರ ವಿರೋಧ ಕೇವಲ ಮುಟ್ಟಿಗಲ್ಲ ಬದಲಾಗಿ ಅದು ಪುರುಷ ಪ್ರಧಾನ ಸಮಾಜ ಮಹಿಳಾ ವಿರೋಧಿ ಧೋರಣೆಗಳ ಒಂದು ಭಾಗವಷ್ಟೇ. ಒಂದಂತೂ ಸತ್ಯ. ಮುಟ್ಟು ಪುರುಷರ ದೇಹದಲ್ಲಾಗಿರುತ್ತಿದ್ದರೂ ಮನೆಯಿಂದ ಆಚೆ ಹೆಣ್ಮಕ್ಕಳೇ ಹೋಗಬೇಕಾಗಿತ್ತು. ಮುಟ್ಟು ಪವಿತ್ರ. ಮುಟ್ಟಾದ ಪುರುಷರು Holy of Holies Periodನಲ್ಲಿರುವಾಗ ಮುಟ್ಟಾಗದ ಅಪವಿತ್ರ ಮಹಿಳೆಯರು ಪುರುಷರಿಂದ ದೂರವಿರಬೇಕೆಂದು ಕಟ್ಟಳೆಗಳನ್ನು ಮಾಡಿ ಮಹಿಳೆಯರನ್ನೇ ಮನೆಯಿಂದ ಹೊರಗಿಡುತ್ತಿದ್ದರು. ಪುರುಷ ಪ್ರಧಾನ ವ್ಯವಸ್ಥೆಯ ನೀಚತನಕ್ಕೆ ಪರಿಧಿಗಳಿಲ್ಲ. ಎಂದು ಆಲ್‌ಮೀಡಿಯಾ ಗ್ಲಾಡ್‌ಸನ್ ಅಭಿಪ್ರಾಯಪಟ್ಟಿದ್ದಾರೆ.

ಕರುಳಿನಲ್ಲಿ ಮಲವಿರುತ್ತದೆ. ಮೂತ್ರಾಶಯದಲ್ಲಿ ಮೂತ್ರ ಇರುತ್ತದೆ. ಅದನ್ನೆಲ್ಲ ಭರ್ತಿ ಇರಿಸಿಕೊಂಡು ದೇವಸ್ಥಾನಕ್ಕೆ ಹೋಗಬಹುದು. ಆದರೆ ಋತುಸ್ರಾವ ಅನುಭವಿಸುತ್ತಿರುವ ಹೆಣ್ಣುಮಗಳು ಮಾತ್ರ ದೇವಸ್ಥಾನ ಪ್ರವೇಶಿಸಕೂಡದು ಅಲ್ವಾ ಬೈರಪ್ಪನವರೇ?!
ಸಾಹಿತಿಯಾದವರಲ್ಲಿ ಜೀವಪರ ಸಂವೇದನೆ ಇರುತ್ತದೆ ಅಂದುಕೊಂಡಿದ್ದೆವು, ವಯಸ್ಸಾಗುತ್ತಿದ್ದಂತೆ ಬುದ್ಧಿ ಬೆಳೆಯುತ್ತದೆ ಅಂದುಕೊಂಡಿದ್ದೆವು! ತಪ್ಪು ನಮ್ಮದೇ…

ಒಬ್ಬ ಅತ್ಯಾಚಾರಿ ದೇವಸ್ಥಾನ ಪ್ರವೇಶಿಸಬಹುದು. ಕೊಲೆಗಡುಕ, ಕಳ್ಳ, ಭ್ರಷ್ಟ, ವಂಚಕ, ದರೋಡೆಕೋರ ದೇವಸ್ಥಾನ ಪ್ರವೇಶಿಸಬಹುದು. ಜಗತ್ತಿಗೆ ಜೀವ ಕೊಟ್ಟ ಹೆಣ್ಣುಮಗಳು ಮಾತ್ರ ಋತುಸ್ರಾವ ಕಾರಣಕ್ಕೆ ದೇವಸ್ಥಾನ ಪ್ರವೇಶಿಸಬಾರದು!.
ವಾವ್! ಅದ್ಭುತ ವಾದ ಬೈರಪ್ನೋರೆ!-
ಎಂದು  ಶ್ರೀನಿವಾಸ ಕಾರ್ಕಳರವರು ಬರೆದಿದ್ದಾರೆ.

ಅದೇ ರೀತಿ ಶ್ರೀನಿವಾಸ ಕಾರ್ಕಳರವರು ಮುಟ್ಟಿನ ಬಗ್ಗೆ ಬರೆದಿದ್ದ ಜಾಗೃತಿ ಹಾಡು ಕೂಡ ವೈರಲ್ ಆಗಿದೆ.

ಮುಟ್ಟುಮುಟ್ಟೆಂದೇಕೆ ಕೀಳಾಗಿ ಕಾಣುವಿರಿ
ಮುಟ್ಟಿನಿಂದಲ್ಲವೇ ನಮ್ಮೆಲ್ಲರ ಹುಟ್ಟು
ಮುಟ್ಟುಮುಟ್ಟೆಂದೇಕೆ ಕೀಳರಿಮೆ ಹೊಂದುವಿರಿ
ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು //

ಮುಟ್ಟು ಕಾಣದ ಹೆಣ್ಣು ಬಸಿರು ಹೊಂದುವುದಿಲ್ಲ
ತಾಯಿಯಾಗುವುದಿನ್ನು ಸಾಧ್ಯವೇನು?
ನಮ್ಮನ್ನು ಹೆತ್ತವಳು ಮುಟ್ಟಾಗದಿರುತಿದ್ರೆ
ಭೂಮಿಯಲಿ ನಾವು ಇರುತ್ತಿದ್ದೆವೇನು //

ಮುಟ್ಟುಸ್ರಾವಗಳೆಲ್ಲ ಪ್ರಕೃತಿಯ ಸಹಜ ಕ್ರಿಯೆ
ಬೆವರು ಬಾಧೆಗಳಂತೆ ಅಲ್ಲವೇನು?
ಮುಟ್ಟಾದ ಹೆಣ್ಣನ್ನು ದೂರ ಅಟ್ಟುವುದೇಕೆ
ಅವಳು ಮಾಡಿದ ಘೋರ ಪಾಪವೇನು //

ಜಗದ ಜೀವಿಗಳೆಲ್ಲ ದೈವ ಸೃಷ್ಟಿ ಆದರೆ
ಮುಟ್ಟು ಕೂಡಾ ಪವಿತ್ರ ಹೌದು ತಾನೇ?
ದೇವರದೇ ಸೃಷ್ಟಿಯು ಶುಭದ ಕಾರ್ಯಗಳಲ್ಲಿ
ವರ್ಜ್ಯ ಅನ್ನುವುದೆಲ್ಲ ತಪ್ಪು ತಾನೇ //

ಮುಟ್ಟಿನ ಕುರಿತಾಗಿ ಸತ್ಯ ಸಂಗತಿ ಅರಿತು
ಹೊಸ ದೃಷ್ಟಿಯನು ನಾವು ಹೊಂದಬೇಕು
ಕುರುಡು ನಂಬಿಕೆಗಳನು ಇಲ್ಲವಾಗಿಸಿ ನಾವು
ಮಾನವೀಯತೆಯಿಂದ ಬದುಕಬೇಕು //..

“ಮುಟ್ಟಾಗುವುದು ಅಪವಿತ್ರ ಅನ್ನೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಈ ಭೈರಪ್ಪನಿಗೆ ತನ್ನ ಮನೆಯಲ್ಲಿರುವ ಹೆಣ್ಮಕ್ಳು ನೆನಪಾಗುವುದೇ ಇಲ್ವಾ?” ಎಂದು ಮಹಾಲಿಂಗಪ್ಪ ಆಲಬಾಳರವರು ಪ್ರಶ್ನಿಸಿದ್ದಾರೆ.

“ಹೆಣ್ಣು ಮಕ್ಳ ಮುಟ್ಟಿನ ಸ್ರಾವ ಅವರ ಗರ್ಭಕೋಶದಲ್ಲಿ ಮಾತ್ರ ಇರುತ್ತೆ.
(ಕೆಲವು) ಗಂಡಸರಿಗೆ ಸದಾ ಕಾಲ ತಲೇಲೆ ಇರುತ್ತೆ. ಯಾರಪ್ಪಾ ಹೆಚ್ಚು ಮೈಲಿಗೆ ಈಗ?” ಎಂದು ಪ್ರೀತಿ ನಾಗರಾಜ್ ಪ್ರಶ್ನೆ ಹಾಕಿದ್ದಾರೆ..

“ಮುಟ್ಟಾದ ಹೊಲೆಯೊಳಗೆ ಹುಟ್ಟಿಹುದು ಜಗವೆಲ್ಲಾ
ಮುಟ್ಟಬೇಡವೆಂದು ತೊಲಗುವ ಹಾರುವನು
ಹುಟ್ಟಿದನು ಎಲ್ಲಿ ಸರ್ವಜ್ಞ?” ಎಂದು ನೀಲಾ ಕೆ ಗುಲಬರ್ಗಾ ರವರು ಬರೆದುಕೊಂಡಿದ್ದಾರೆ.

“ಭೈರಪ್ಪನವರೇ ನಮ್ಗೆ ‘ಕಾಯಕವೇ ಕೈಲಾಸ’
ಕೈಲಾಸದಂತ ಆಫೀಸ್ಗೆ ಮುಟ್ಟಾದಾಗ ನಾವು ಹೋಗೋದು ಬೇಡ.
ನಿಮ್ ಹೆಸರಲ್ಲಿ ತಿಂಗ್ಳಿಗೆ ಮೂರ್ ದಿನ ರಜೆ ಕೊಡಿಸ್ಬಿಡಿ ಪ್ಲೀಸ್” ಎಂದು ಚೈತ್ರ ಕೋಟುರುರವರು ಟ್ರೋಲ್ ಮಾಡಿದ್ದಾರೆ.

ತಕಳ್ರಪ್ಪಾ… ಮುಟ್ಟಲ್ಲೇ ಹುಟ್ಟಿದವರು ಮುಟ್ಟಿನ ಬಗ್ಗೆ ಮಾತಾಡುತ್ತಾರೆ! ಎಂದು ಕಾದಂಬಿನಿ ರಾವಿಯವರು ಕಿಚಾಯಿಸಿದ್ದಾರೆ.

ಹಿರಿಯ ಸಾಹಿತಿಯೊಬ್ಬರು ಬರೆದ ಈ ಹೇಳಿಕೆ ಸಾಕಷ್ಟು ಮೆಚ್ಚುಗೆ ಗಳಿಸಿದೆ. ಇದನ್ನು ಕಾದಂಬಿನಿ ರಾವಿಯವರು ಮೊದಲು ಷೇರ್ ಮಾಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಅಂತರ್ಜಾತೀಯ ವಿವಾಹ ಮಾಡಿಸಿದ ಸಂದರ್ಭದಲ್ಲಿ ಸಮಾಜದಲಿ ಆರಥಿಕತೆ ಪಕವವಾಗಿರಲಿಲ ಎಂದು ಹೇಳಿದ ಭೈರಪ್ಪನವರೆ ನಿಮ್ಮ ಬುದ್ಧಿಗೆ ಸವಲಪ ಸಗಣಿ ಹಾಕಿಕೊಳ್ಳಿ. ಬಸವಣ್ಣನವರು ಆ ಇಬ್ಬರು ಗಂಡು ಹೆಣ್ಣು ಪೃಕೃತಿ ಸಹಜ ಆಕರ್ಷಣೆಗೊಂಡಿದರಿಂದ ಅವರಿಬ್ಬರಿಗೂ ಮುತಸದಿಯ ಜಾಗೃತೆ ವಹಿಸಿ ಆಗಿನ ಕಾಲದ ಸಮಾಜ ಹಾಕಿಕೊಂಡ ಜಾತಿಯತೆಯ ಸಾಮಾಜಿಕ ಕಟ್ಟಳೆಯಿಂದ ಇವರಿಬ್ಬರಿಗೂ ತೊಂದರೆಯಾಗಬಾರದೆಂಬ ಕಳಕಳಿಯಿಂದ ಇಬ್ಬರಿಗೂ ಸಾಂಕೇತಿಕವಾಗಿ ಲಿಂಗ ದೀಕ್ಷೆ ಕೊಟ್ಟು ಸತಿಪತಿ ಗಳಾಗಿ ಬಾಳುವಂತೆ ಮದುವೆ ಮಾಡಿಸಿ ಜಾತ್ಯತೀತದ ಆದರ್ಶ ವನ್ನು ಎತ್ತಿ ಹಿಡಿದರು. ವಸ್ತು ಸ್ಥಿತಿ ವಿಷಯದ ಅಜಾನಿಗಳಾದ ನೀವು ನಿಮ್ಮ ಗೊಮುಖ ವಾಘೃದ ಮುಖವಾಡ ಹಾಕಿ ಕೊಂಡು ಕೈಗೆ ಮೈಕ್ ಮತ್ತು ನಿಂತು ಕೊಳಲು ಪುಕ್ಕಟೆಯ ವೇದಿಕೆ ಸಿಕಿದರಿಂದ ನಾನು ಹೇಳುವೆನೊ ಜನ ಅದನ್ನು ಕೇಳುತ್ತಾರೆ ಎಂಬ ಅಹಂನಿಂದ ಬಸವಣ್ಣನವರ ಮಾಡಿಸಿದ ಮದುವೆಯನ್ನು ಆರಥಿಕತೆ ರೂಪಕ್ಕೆ ಹೋಗಿ ಜೊಡಿಸಿದಿರಲ ನಿಮ್ಮ ಅಪೃಬುದತೆಗೆ ಛೀ ಮಾರಿ ಹಾಕುತಿದೆನೆ.
    ಹಾಗಾದರೆ ಇವತಿಗೆ ಆರಥಿಕತೆ ಪಕವವಾಗಿದೆ ಎನುವುದಾದರೆ ಒಬ್ಬರಿಗೂಬಬರಿಗೂ ಯಾವ ಆಕರ್ಷಣೆ ಇಲ್ಲದೇ ಕೇವಲ ಆರಥಿಕ ಆಕರ್ಷಣೆ ಗೊಸಕರ ಮದುವೆ ಯಾಗಬೇಕಾ. ಛೀ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...