Homeಕರ್ನಾಟಕಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

- Advertisement -
- Advertisement -

ದಸರಾ ಉದ್ಘಾಟನಾ ಭಾಷಣದಲ್ಲಿ “ಮಹಿಳೆ ಮುಟ್ಟಾದಾಗ ಆಫೀಸಿಗೆ ಹೋಗೋದು ಬೇರೆ ದೇವಸ್ಥಾನಕ್ಕೆ ಹೋಗೋದು ಬೇರೆ” ಎಂದು ಹೇಳುವ ಮೂಲಕ ಮಹಿಳೆಯರ ಸಹಜ ಮುಟ್ಟನ್ನು ಅವಮಾನಿಸಿದ್ದ ಎಸ್.ಎಲ್ ಭೈರಪ್ಪನವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಸಾಹಿತಿ ಭೈರಪ್ಪನವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆಗಳು ಬಂದಿದ್ದು ಆಯ್ದ ಕೆಲವು ಇಲ್ಲಿವೆ.

ಎಡಗಡೆ ಮುಖ್ಯಮಂತ್ರಿ ಯಡಿಯೂರಪ್ಪ, ಬಲಗಡೆ ಕೇಂದ್ರ ಸಚಿವ ಸದಾನಂದರನ್ನು ಕೂರಿಸಿಕೊಂಡಿದ್ದ ಬೈರಪ್ಪ ನಾಡಿನ ಬಗ್ಗೆ ಕಾಳಜಿ ಇರುವ ಮನುಷ್ಯನೇ ಆಗಿದ್ದರೆ, ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಉತ್ತರ ಕರ್ನಾಟಕ, ಉತ್ತರ ಕನ್ನಡ, ಕರಾವಳಿಯ ಜನರ ಬದುಕಿನ ಬಗ್ಗೆ‌ ಮಾತನಾಡಬೇಕಿತ್ತು. ಅವರು ಬದುಕು ಕಟ್ಟಿಕೊಳ್ಳಲು ಸರ್ಕಾರ ಏನು ಮಾಡಬೇಕು ಎಂಬ ಸಲಹೆ ಕೊಡಬಹುದಿತ್ತು.

ಅಲ್ಲಿ ಕೂತು ಬೆಂಡೆತ್ತಬೇಕಾಗಿರುವುದು ಪ್ರವಾಹ ಪರಿಹಾರಕ್ಕೆಂದು ಚಿಕ್ಕಾಸೂ ಕೊಡದ ಕೇಂದ್ರ ಸರ್ಕಾರವನ್ನು. ವಿಚಾರವಾದಿಗಳು, ಮುಟ್ಟಾಗುವ ಮಹಿಳೆಯರ ಬಗ್ಗೆ ಮಾತಾಡಿದರೆ ಯಾರಿಗೆ ಏನು ಪ್ರಯೋಜನ?

“ನಾಡಹಬ್ಬ ಉದ್ಘಾಟಕರಾಗಿ ಯಾವ ವಿಷಯ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಿಲ್ಲದ ಬೈರಪ್ಪನವರಿಗೇನಾದರೂ, ಈ ಎಲ್ಲಾ ಘನಂದಾರಿ ಸಾಧನೆಗೆ ಜ್ಞಾನಪೀಠ ಕೊಟ್ಟರೆ ಅಲ್ಲಿಗೆ ಜ್ಞಾನಪೀಠದ ಮಾನ ಮೂರ್ಕಾಸಿಗೆ ಹರಾಜಾದಂತೆಯೇ ಸರಿ” ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಕಿಡಿಕಾರಿದ್ದಾರೆ.

ಮುಟ್ಟು ಎಂಬ ಪ್ರಕೃತಿ ವಿಸ್ಮಯ ಪುರುಷರ ದೇಹದಲ್ಲಿ ಆಗಿರುತ್ತಿದ್ದರೆ, ಇಲ್ಲ ಶಿಶ್ನವೇ ತಿಂಗಳಿಗೆ ನಾಲ್ಕೈದು ದಿನಗಳ ಕಾಲ ರಕ್ತ ಕಾರುವಂತೆ ಇದ್ದಿದ್ದರೆ ಅದಕ್ಕೆಂದೇ ಹಬ್ಬ, ವೃತಗಳು ಹುಟ್ಟಿರುತ್ತಿದ್ದವು. ಹಾಗಾಗಿ ಭೈರಪ್ಪನಂಥವರ ವಿರೋಧ ಕೇವಲ ಮುಟ್ಟಿಗಲ್ಲ ಬದಲಾಗಿ ಅದು ಪುರುಷ ಪ್ರಧಾನ ಸಮಾಜ ಮಹಿಳಾ ವಿರೋಧಿ ಧೋರಣೆಗಳ ಒಂದು ಭಾಗವಷ್ಟೇ. ಒಂದಂತೂ ಸತ್ಯ. ಮುಟ್ಟು ಪುರುಷರ ದೇಹದಲ್ಲಾಗಿರುತ್ತಿದ್ದರೂ ಮನೆಯಿಂದ ಆಚೆ ಹೆಣ್ಮಕ್ಕಳೇ ಹೋಗಬೇಕಾಗಿತ್ತು. ಮುಟ್ಟು ಪವಿತ್ರ. ಮುಟ್ಟಾದ ಪುರುಷರು Holy of Holies Periodನಲ್ಲಿರುವಾಗ ಮುಟ್ಟಾಗದ ಅಪವಿತ್ರ ಮಹಿಳೆಯರು ಪುರುಷರಿಂದ ದೂರವಿರಬೇಕೆಂದು ಕಟ್ಟಳೆಗಳನ್ನು ಮಾಡಿ ಮಹಿಳೆಯರನ್ನೇ ಮನೆಯಿಂದ ಹೊರಗಿಡುತ್ತಿದ್ದರು. ಪುರುಷ ಪ್ರಧಾನ ವ್ಯವಸ್ಥೆಯ ನೀಚತನಕ್ಕೆ ಪರಿಧಿಗಳಿಲ್ಲ. ಎಂದು ಆಲ್‌ಮೀಡಿಯಾ ಗ್ಲಾಡ್‌ಸನ್ ಅಭಿಪ್ರಾಯಪಟ್ಟಿದ್ದಾರೆ.

ಕರುಳಿನಲ್ಲಿ ಮಲವಿರುತ್ತದೆ. ಮೂತ್ರಾಶಯದಲ್ಲಿ ಮೂತ್ರ ಇರುತ್ತದೆ. ಅದನ್ನೆಲ್ಲ ಭರ್ತಿ ಇರಿಸಿಕೊಂಡು ದೇವಸ್ಥಾನಕ್ಕೆ ಹೋಗಬಹುದು. ಆದರೆ ಋತುಸ್ರಾವ ಅನುಭವಿಸುತ್ತಿರುವ ಹೆಣ್ಣುಮಗಳು ಮಾತ್ರ ದೇವಸ್ಥಾನ ಪ್ರವೇಶಿಸಕೂಡದು ಅಲ್ವಾ ಬೈರಪ್ಪನವರೇ?!
ಸಾಹಿತಿಯಾದವರಲ್ಲಿ ಜೀವಪರ ಸಂವೇದನೆ ಇರುತ್ತದೆ ಅಂದುಕೊಂಡಿದ್ದೆವು, ವಯಸ್ಸಾಗುತ್ತಿದ್ದಂತೆ ಬುದ್ಧಿ ಬೆಳೆಯುತ್ತದೆ ಅಂದುಕೊಂಡಿದ್ದೆವು! ತಪ್ಪು ನಮ್ಮದೇ…

ಒಬ್ಬ ಅತ್ಯಾಚಾರಿ ದೇವಸ್ಥಾನ ಪ್ರವೇಶಿಸಬಹುದು. ಕೊಲೆಗಡುಕ, ಕಳ್ಳ, ಭ್ರಷ್ಟ, ವಂಚಕ, ದರೋಡೆಕೋರ ದೇವಸ್ಥಾನ ಪ್ರವೇಶಿಸಬಹುದು. ಜಗತ್ತಿಗೆ ಜೀವ ಕೊಟ್ಟ ಹೆಣ್ಣುಮಗಳು ಮಾತ್ರ ಋತುಸ್ರಾವ ಕಾರಣಕ್ಕೆ ದೇವಸ್ಥಾನ ಪ್ರವೇಶಿಸಬಾರದು!.
ವಾವ್! ಅದ್ಭುತ ವಾದ ಬೈರಪ್ನೋರೆ!-
ಎಂದು  ಶ್ರೀನಿವಾಸ ಕಾರ್ಕಳರವರು ಬರೆದಿದ್ದಾರೆ.

ಅದೇ ರೀತಿ ಶ್ರೀನಿವಾಸ ಕಾರ್ಕಳರವರು ಮುಟ್ಟಿನ ಬಗ್ಗೆ ಬರೆದಿದ್ದ ಜಾಗೃತಿ ಹಾಡು ಕೂಡ ವೈರಲ್ ಆಗಿದೆ.

ಮುಟ್ಟುಮುಟ್ಟೆಂದೇಕೆ ಕೀಳಾಗಿ ಕಾಣುವಿರಿ
ಮುಟ್ಟಿನಿಂದಲ್ಲವೇ ನಮ್ಮೆಲ್ಲರ ಹುಟ್ಟು
ಮುಟ್ಟುಮುಟ್ಟೆಂದೇಕೆ ಕೀಳರಿಮೆ ಹೊಂದುವಿರಿ
ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು //

ಮುಟ್ಟು ಕಾಣದ ಹೆಣ್ಣು ಬಸಿರು ಹೊಂದುವುದಿಲ್ಲ
ತಾಯಿಯಾಗುವುದಿನ್ನು ಸಾಧ್ಯವೇನು?
ನಮ್ಮನ್ನು ಹೆತ್ತವಳು ಮುಟ್ಟಾಗದಿರುತಿದ್ರೆ
ಭೂಮಿಯಲಿ ನಾವು ಇರುತ್ತಿದ್ದೆವೇನು //

ಮುಟ್ಟುಸ್ರಾವಗಳೆಲ್ಲ ಪ್ರಕೃತಿಯ ಸಹಜ ಕ್ರಿಯೆ
ಬೆವರು ಬಾಧೆಗಳಂತೆ ಅಲ್ಲವೇನು?
ಮುಟ್ಟಾದ ಹೆಣ್ಣನ್ನು ದೂರ ಅಟ್ಟುವುದೇಕೆ
ಅವಳು ಮಾಡಿದ ಘೋರ ಪಾಪವೇನು //

ಜಗದ ಜೀವಿಗಳೆಲ್ಲ ದೈವ ಸೃಷ್ಟಿ ಆದರೆ
ಮುಟ್ಟು ಕೂಡಾ ಪವಿತ್ರ ಹೌದು ತಾನೇ?
ದೇವರದೇ ಸೃಷ್ಟಿಯು ಶುಭದ ಕಾರ್ಯಗಳಲ್ಲಿ
ವರ್ಜ್ಯ ಅನ್ನುವುದೆಲ್ಲ ತಪ್ಪು ತಾನೇ //

ಮುಟ್ಟಿನ ಕುರಿತಾಗಿ ಸತ್ಯ ಸಂಗತಿ ಅರಿತು
ಹೊಸ ದೃಷ್ಟಿಯನು ನಾವು ಹೊಂದಬೇಕು
ಕುರುಡು ನಂಬಿಕೆಗಳನು ಇಲ್ಲವಾಗಿಸಿ ನಾವು
ಮಾನವೀಯತೆಯಿಂದ ಬದುಕಬೇಕು //..

“ಮುಟ್ಟಾಗುವುದು ಅಪವಿತ್ರ ಅನ್ನೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಈ ಭೈರಪ್ಪನಿಗೆ ತನ್ನ ಮನೆಯಲ್ಲಿರುವ ಹೆಣ್ಮಕ್ಳು ನೆನಪಾಗುವುದೇ ಇಲ್ವಾ?” ಎಂದು ಮಹಾಲಿಂಗಪ್ಪ ಆಲಬಾಳರವರು ಪ್ರಶ್ನಿಸಿದ್ದಾರೆ.

“ಹೆಣ್ಣು ಮಕ್ಳ ಮುಟ್ಟಿನ ಸ್ರಾವ ಅವರ ಗರ್ಭಕೋಶದಲ್ಲಿ ಮಾತ್ರ ಇರುತ್ತೆ.
(ಕೆಲವು) ಗಂಡಸರಿಗೆ ಸದಾ ಕಾಲ ತಲೇಲೆ ಇರುತ್ತೆ. ಯಾರಪ್ಪಾ ಹೆಚ್ಚು ಮೈಲಿಗೆ ಈಗ?” ಎಂದು ಪ್ರೀತಿ ನಾಗರಾಜ್ ಪ್ರಶ್ನೆ ಹಾಕಿದ್ದಾರೆ..

“ಮುಟ್ಟಾದ ಹೊಲೆಯೊಳಗೆ ಹುಟ್ಟಿಹುದು ಜಗವೆಲ್ಲಾ
ಮುಟ್ಟಬೇಡವೆಂದು ತೊಲಗುವ ಹಾರುವನು
ಹುಟ್ಟಿದನು ಎಲ್ಲಿ ಸರ್ವಜ್ಞ?” ಎಂದು ನೀಲಾ ಕೆ ಗುಲಬರ್ಗಾ ರವರು ಬರೆದುಕೊಂಡಿದ್ದಾರೆ.

“ಭೈರಪ್ಪನವರೇ ನಮ್ಗೆ ‘ಕಾಯಕವೇ ಕೈಲಾಸ’
ಕೈಲಾಸದಂತ ಆಫೀಸ್ಗೆ ಮುಟ್ಟಾದಾಗ ನಾವು ಹೋಗೋದು ಬೇಡ.
ನಿಮ್ ಹೆಸರಲ್ಲಿ ತಿಂಗ್ಳಿಗೆ ಮೂರ್ ದಿನ ರಜೆ ಕೊಡಿಸ್ಬಿಡಿ ಪ್ಲೀಸ್” ಎಂದು ಚೈತ್ರ ಕೋಟುರುರವರು ಟ್ರೋಲ್ ಮಾಡಿದ್ದಾರೆ.

ತಕಳ್ರಪ್ಪಾ… ಮುಟ್ಟಲ್ಲೇ ಹುಟ್ಟಿದವರು ಮುಟ್ಟಿನ ಬಗ್ಗೆ ಮಾತಾಡುತ್ತಾರೆ! ಎಂದು ಕಾದಂಬಿನಿ ರಾವಿಯವರು ಕಿಚಾಯಿಸಿದ್ದಾರೆ.

ಹಿರಿಯ ಸಾಹಿತಿಯೊಬ್ಬರು ಬರೆದ ಈ ಹೇಳಿಕೆ ಸಾಕಷ್ಟು ಮೆಚ್ಚುಗೆ ಗಳಿಸಿದೆ. ಇದನ್ನು ಕಾದಂಬಿನಿ ರಾವಿಯವರು ಮೊದಲು ಷೇರ್ ಮಾಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಅಂತರ್ಜಾತೀಯ ವಿವಾಹ ಮಾಡಿಸಿದ ಸಂದರ್ಭದಲ್ಲಿ ಸಮಾಜದಲಿ ಆರಥಿಕತೆ ಪಕವವಾಗಿರಲಿಲ ಎಂದು ಹೇಳಿದ ಭೈರಪ್ಪನವರೆ ನಿಮ್ಮ ಬುದ್ಧಿಗೆ ಸವಲಪ ಸಗಣಿ ಹಾಕಿಕೊಳ್ಳಿ. ಬಸವಣ್ಣನವರು ಆ ಇಬ್ಬರು ಗಂಡು ಹೆಣ್ಣು ಪೃಕೃತಿ ಸಹಜ ಆಕರ್ಷಣೆಗೊಂಡಿದರಿಂದ ಅವರಿಬ್ಬರಿಗೂ ಮುತಸದಿಯ ಜಾಗೃತೆ ವಹಿಸಿ ಆಗಿನ ಕಾಲದ ಸಮಾಜ ಹಾಕಿಕೊಂಡ ಜಾತಿಯತೆಯ ಸಾಮಾಜಿಕ ಕಟ್ಟಳೆಯಿಂದ ಇವರಿಬ್ಬರಿಗೂ ತೊಂದರೆಯಾಗಬಾರದೆಂಬ ಕಳಕಳಿಯಿಂದ ಇಬ್ಬರಿಗೂ ಸಾಂಕೇತಿಕವಾಗಿ ಲಿಂಗ ದೀಕ್ಷೆ ಕೊಟ್ಟು ಸತಿಪತಿ ಗಳಾಗಿ ಬಾಳುವಂತೆ ಮದುವೆ ಮಾಡಿಸಿ ಜಾತ್ಯತೀತದ ಆದರ್ಶ ವನ್ನು ಎತ್ತಿ ಹಿಡಿದರು. ವಸ್ತು ಸ್ಥಿತಿ ವಿಷಯದ ಅಜಾನಿಗಳಾದ ನೀವು ನಿಮ್ಮ ಗೊಮುಖ ವಾಘೃದ ಮುಖವಾಡ ಹಾಕಿ ಕೊಂಡು ಕೈಗೆ ಮೈಕ್ ಮತ್ತು ನಿಂತು ಕೊಳಲು ಪುಕ್ಕಟೆಯ ವೇದಿಕೆ ಸಿಕಿದರಿಂದ ನಾನು ಹೇಳುವೆನೊ ಜನ ಅದನ್ನು ಕೇಳುತ್ತಾರೆ ಎಂಬ ಅಹಂನಿಂದ ಬಸವಣ್ಣನವರ ಮಾಡಿಸಿದ ಮದುವೆಯನ್ನು ಆರಥಿಕತೆ ರೂಪಕ್ಕೆ ಹೋಗಿ ಜೊಡಿಸಿದಿರಲ ನಿಮ್ಮ ಅಪೃಬುದತೆಗೆ ಛೀ ಮಾರಿ ಹಾಕುತಿದೆನೆ.
    ಹಾಗಾದರೆ ಇವತಿಗೆ ಆರಥಿಕತೆ ಪಕವವಾಗಿದೆ ಎನುವುದಾದರೆ ಒಬ್ಬರಿಗೂಬಬರಿಗೂ ಯಾವ ಆಕರ್ಷಣೆ ಇಲ್ಲದೇ ಕೇವಲ ಆರಥಿಕ ಆಕರ್ಷಣೆ ಗೊಸಕರ ಮದುವೆ ಯಾಗಬೇಕಾ. ಛೀ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...