Homeಕರ್ನಾಟಕಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

- Advertisement -
- Advertisement -

ದಸರಾ ಉದ್ಘಾಟನಾ ಭಾಷಣದಲ್ಲಿ “ಮಹಿಳೆ ಮುಟ್ಟಾದಾಗ ಆಫೀಸಿಗೆ ಹೋಗೋದು ಬೇರೆ ದೇವಸ್ಥಾನಕ್ಕೆ ಹೋಗೋದು ಬೇರೆ” ಎಂದು ಹೇಳುವ ಮೂಲಕ ಮಹಿಳೆಯರ ಸಹಜ ಮುಟ್ಟನ್ನು ಅವಮಾನಿಸಿದ್ದ ಎಸ್.ಎಲ್ ಭೈರಪ್ಪನವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಸಾಹಿತಿ ಭೈರಪ್ಪನವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆಗಳು ಬಂದಿದ್ದು ಆಯ್ದ ಕೆಲವು ಇಲ್ಲಿವೆ.

ಎಡಗಡೆ ಮುಖ್ಯಮಂತ್ರಿ ಯಡಿಯೂರಪ್ಪ, ಬಲಗಡೆ ಕೇಂದ್ರ ಸಚಿವ ಸದಾನಂದರನ್ನು ಕೂರಿಸಿಕೊಂಡಿದ್ದ ಬೈರಪ್ಪ ನಾಡಿನ ಬಗ್ಗೆ ಕಾಳಜಿ ಇರುವ ಮನುಷ್ಯನೇ ಆಗಿದ್ದರೆ, ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಉತ್ತರ ಕರ್ನಾಟಕ, ಉತ್ತರ ಕನ್ನಡ, ಕರಾವಳಿಯ ಜನರ ಬದುಕಿನ ಬಗ್ಗೆ‌ ಮಾತನಾಡಬೇಕಿತ್ತು. ಅವರು ಬದುಕು ಕಟ್ಟಿಕೊಳ್ಳಲು ಸರ್ಕಾರ ಏನು ಮಾಡಬೇಕು ಎಂಬ ಸಲಹೆ ಕೊಡಬಹುದಿತ್ತು.

ಅಲ್ಲಿ ಕೂತು ಬೆಂಡೆತ್ತಬೇಕಾಗಿರುವುದು ಪ್ರವಾಹ ಪರಿಹಾರಕ್ಕೆಂದು ಚಿಕ್ಕಾಸೂ ಕೊಡದ ಕೇಂದ್ರ ಸರ್ಕಾರವನ್ನು. ವಿಚಾರವಾದಿಗಳು, ಮುಟ್ಟಾಗುವ ಮಹಿಳೆಯರ ಬಗ್ಗೆ ಮಾತಾಡಿದರೆ ಯಾರಿಗೆ ಏನು ಪ್ರಯೋಜನ?

“ನಾಡಹಬ್ಬ ಉದ್ಘಾಟಕರಾಗಿ ಯಾವ ವಿಷಯ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಿಲ್ಲದ ಬೈರಪ್ಪನವರಿಗೇನಾದರೂ, ಈ ಎಲ್ಲಾ ಘನಂದಾರಿ ಸಾಧನೆಗೆ ಜ್ಞಾನಪೀಠ ಕೊಟ್ಟರೆ ಅಲ್ಲಿಗೆ ಜ್ಞಾನಪೀಠದ ಮಾನ ಮೂರ್ಕಾಸಿಗೆ ಹರಾಜಾದಂತೆಯೇ ಸರಿ” ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಕಿಡಿಕಾರಿದ್ದಾರೆ.

ಮುಟ್ಟು ಎಂಬ ಪ್ರಕೃತಿ ವಿಸ್ಮಯ ಪುರುಷರ ದೇಹದಲ್ಲಿ ಆಗಿರುತ್ತಿದ್ದರೆ, ಇಲ್ಲ ಶಿಶ್ನವೇ ತಿಂಗಳಿಗೆ ನಾಲ್ಕೈದು ದಿನಗಳ ಕಾಲ ರಕ್ತ ಕಾರುವಂತೆ ಇದ್ದಿದ್ದರೆ ಅದಕ್ಕೆಂದೇ ಹಬ್ಬ, ವೃತಗಳು ಹುಟ್ಟಿರುತ್ತಿದ್ದವು. ಹಾಗಾಗಿ ಭೈರಪ್ಪನಂಥವರ ವಿರೋಧ ಕೇವಲ ಮುಟ್ಟಿಗಲ್ಲ ಬದಲಾಗಿ ಅದು ಪುರುಷ ಪ್ರಧಾನ ಸಮಾಜ ಮಹಿಳಾ ವಿರೋಧಿ ಧೋರಣೆಗಳ ಒಂದು ಭಾಗವಷ್ಟೇ. ಒಂದಂತೂ ಸತ್ಯ. ಮುಟ್ಟು ಪುರುಷರ ದೇಹದಲ್ಲಾಗಿರುತ್ತಿದ್ದರೂ ಮನೆಯಿಂದ ಆಚೆ ಹೆಣ್ಮಕ್ಕಳೇ ಹೋಗಬೇಕಾಗಿತ್ತು. ಮುಟ್ಟು ಪವಿತ್ರ. ಮುಟ್ಟಾದ ಪುರುಷರು Holy of Holies Periodನಲ್ಲಿರುವಾಗ ಮುಟ್ಟಾಗದ ಅಪವಿತ್ರ ಮಹಿಳೆಯರು ಪುರುಷರಿಂದ ದೂರವಿರಬೇಕೆಂದು ಕಟ್ಟಳೆಗಳನ್ನು ಮಾಡಿ ಮಹಿಳೆಯರನ್ನೇ ಮನೆಯಿಂದ ಹೊರಗಿಡುತ್ತಿದ್ದರು. ಪುರುಷ ಪ್ರಧಾನ ವ್ಯವಸ್ಥೆಯ ನೀಚತನಕ್ಕೆ ಪರಿಧಿಗಳಿಲ್ಲ. ಎಂದು ಆಲ್‌ಮೀಡಿಯಾ ಗ್ಲಾಡ್‌ಸನ್ ಅಭಿಪ್ರಾಯಪಟ್ಟಿದ್ದಾರೆ.

ಕರುಳಿನಲ್ಲಿ ಮಲವಿರುತ್ತದೆ. ಮೂತ್ರಾಶಯದಲ್ಲಿ ಮೂತ್ರ ಇರುತ್ತದೆ. ಅದನ್ನೆಲ್ಲ ಭರ್ತಿ ಇರಿಸಿಕೊಂಡು ದೇವಸ್ಥಾನಕ್ಕೆ ಹೋಗಬಹುದು. ಆದರೆ ಋತುಸ್ರಾವ ಅನುಭವಿಸುತ್ತಿರುವ ಹೆಣ್ಣುಮಗಳು ಮಾತ್ರ ದೇವಸ್ಥಾನ ಪ್ರವೇಶಿಸಕೂಡದು ಅಲ್ವಾ ಬೈರಪ್ಪನವರೇ?!
ಸಾಹಿತಿಯಾದವರಲ್ಲಿ ಜೀವಪರ ಸಂವೇದನೆ ಇರುತ್ತದೆ ಅಂದುಕೊಂಡಿದ್ದೆವು, ವಯಸ್ಸಾಗುತ್ತಿದ್ದಂತೆ ಬುದ್ಧಿ ಬೆಳೆಯುತ್ತದೆ ಅಂದುಕೊಂಡಿದ್ದೆವು! ತಪ್ಪು ನಮ್ಮದೇ…

ಒಬ್ಬ ಅತ್ಯಾಚಾರಿ ದೇವಸ್ಥಾನ ಪ್ರವೇಶಿಸಬಹುದು. ಕೊಲೆಗಡುಕ, ಕಳ್ಳ, ಭ್ರಷ್ಟ, ವಂಚಕ, ದರೋಡೆಕೋರ ದೇವಸ್ಥಾನ ಪ್ರವೇಶಿಸಬಹುದು. ಜಗತ್ತಿಗೆ ಜೀವ ಕೊಟ್ಟ ಹೆಣ್ಣುಮಗಳು ಮಾತ್ರ ಋತುಸ್ರಾವ ಕಾರಣಕ್ಕೆ ದೇವಸ್ಥಾನ ಪ್ರವೇಶಿಸಬಾರದು!.
ವಾವ್! ಅದ್ಭುತ ವಾದ ಬೈರಪ್ನೋರೆ!-
ಎಂದು  ಶ್ರೀನಿವಾಸ ಕಾರ್ಕಳರವರು ಬರೆದಿದ್ದಾರೆ.

ಅದೇ ರೀತಿ ಶ್ರೀನಿವಾಸ ಕಾರ್ಕಳರವರು ಮುಟ್ಟಿನ ಬಗ್ಗೆ ಬರೆದಿದ್ದ ಜಾಗೃತಿ ಹಾಡು ಕೂಡ ವೈರಲ್ ಆಗಿದೆ.

ಮುಟ್ಟುಮುಟ್ಟೆಂದೇಕೆ ಕೀಳಾಗಿ ಕಾಣುವಿರಿ
ಮುಟ್ಟಿನಿಂದಲ್ಲವೇ ನಮ್ಮೆಲ್ಲರ ಹುಟ್ಟು
ಮುಟ್ಟುಮುಟ್ಟೆಂದೇಕೆ ಕೀಳರಿಮೆ ಹೊಂದುವಿರಿ
ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು //

ಮುಟ್ಟು ಕಾಣದ ಹೆಣ್ಣು ಬಸಿರು ಹೊಂದುವುದಿಲ್ಲ
ತಾಯಿಯಾಗುವುದಿನ್ನು ಸಾಧ್ಯವೇನು?
ನಮ್ಮನ್ನು ಹೆತ್ತವಳು ಮುಟ್ಟಾಗದಿರುತಿದ್ರೆ
ಭೂಮಿಯಲಿ ನಾವು ಇರುತ್ತಿದ್ದೆವೇನು //

ಮುಟ್ಟುಸ್ರಾವಗಳೆಲ್ಲ ಪ್ರಕೃತಿಯ ಸಹಜ ಕ್ರಿಯೆ
ಬೆವರು ಬಾಧೆಗಳಂತೆ ಅಲ್ಲವೇನು?
ಮುಟ್ಟಾದ ಹೆಣ್ಣನ್ನು ದೂರ ಅಟ್ಟುವುದೇಕೆ
ಅವಳು ಮಾಡಿದ ಘೋರ ಪಾಪವೇನು //

ಜಗದ ಜೀವಿಗಳೆಲ್ಲ ದೈವ ಸೃಷ್ಟಿ ಆದರೆ
ಮುಟ್ಟು ಕೂಡಾ ಪವಿತ್ರ ಹೌದು ತಾನೇ?
ದೇವರದೇ ಸೃಷ್ಟಿಯು ಶುಭದ ಕಾರ್ಯಗಳಲ್ಲಿ
ವರ್ಜ್ಯ ಅನ್ನುವುದೆಲ್ಲ ತಪ್ಪು ತಾನೇ //

ಮುಟ್ಟಿನ ಕುರಿತಾಗಿ ಸತ್ಯ ಸಂಗತಿ ಅರಿತು
ಹೊಸ ದೃಷ್ಟಿಯನು ನಾವು ಹೊಂದಬೇಕು
ಕುರುಡು ನಂಬಿಕೆಗಳನು ಇಲ್ಲವಾಗಿಸಿ ನಾವು
ಮಾನವೀಯತೆಯಿಂದ ಬದುಕಬೇಕು //..

“ಮುಟ್ಟಾಗುವುದು ಅಪವಿತ್ರ ಅನ್ನೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಈ ಭೈರಪ್ಪನಿಗೆ ತನ್ನ ಮನೆಯಲ್ಲಿರುವ ಹೆಣ್ಮಕ್ಳು ನೆನಪಾಗುವುದೇ ಇಲ್ವಾ?” ಎಂದು ಮಹಾಲಿಂಗಪ್ಪ ಆಲಬಾಳರವರು ಪ್ರಶ್ನಿಸಿದ್ದಾರೆ.

“ಹೆಣ್ಣು ಮಕ್ಳ ಮುಟ್ಟಿನ ಸ್ರಾವ ಅವರ ಗರ್ಭಕೋಶದಲ್ಲಿ ಮಾತ್ರ ಇರುತ್ತೆ.
(ಕೆಲವು) ಗಂಡಸರಿಗೆ ಸದಾ ಕಾಲ ತಲೇಲೆ ಇರುತ್ತೆ. ಯಾರಪ್ಪಾ ಹೆಚ್ಚು ಮೈಲಿಗೆ ಈಗ?” ಎಂದು ಪ್ರೀತಿ ನಾಗರಾಜ್ ಪ್ರಶ್ನೆ ಹಾಕಿದ್ದಾರೆ..

“ಮುಟ್ಟಾದ ಹೊಲೆಯೊಳಗೆ ಹುಟ್ಟಿಹುದು ಜಗವೆಲ್ಲಾ
ಮುಟ್ಟಬೇಡವೆಂದು ತೊಲಗುವ ಹಾರುವನು
ಹುಟ್ಟಿದನು ಎಲ್ಲಿ ಸರ್ವಜ್ಞ?” ಎಂದು ನೀಲಾ ಕೆ ಗುಲಬರ್ಗಾ ರವರು ಬರೆದುಕೊಂಡಿದ್ದಾರೆ.

“ಭೈರಪ್ಪನವರೇ ನಮ್ಗೆ ‘ಕಾಯಕವೇ ಕೈಲಾಸ’
ಕೈಲಾಸದಂತ ಆಫೀಸ್ಗೆ ಮುಟ್ಟಾದಾಗ ನಾವು ಹೋಗೋದು ಬೇಡ.
ನಿಮ್ ಹೆಸರಲ್ಲಿ ತಿಂಗ್ಳಿಗೆ ಮೂರ್ ದಿನ ರಜೆ ಕೊಡಿಸ್ಬಿಡಿ ಪ್ಲೀಸ್” ಎಂದು ಚೈತ್ರ ಕೋಟುರುರವರು ಟ್ರೋಲ್ ಮಾಡಿದ್ದಾರೆ.

ತಕಳ್ರಪ್ಪಾ… ಮುಟ್ಟಲ್ಲೇ ಹುಟ್ಟಿದವರು ಮುಟ್ಟಿನ ಬಗ್ಗೆ ಮಾತಾಡುತ್ತಾರೆ! ಎಂದು ಕಾದಂಬಿನಿ ರಾವಿಯವರು ಕಿಚಾಯಿಸಿದ್ದಾರೆ.

ಹಿರಿಯ ಸಾಹಿತಿಯೊಬ್ಬರು ಬರೆದ ಈ ಹೇಳಿಕೆ ಸಾಕಷ್ಟು ಮೆಚ್ಚುಗೆ ಗಳಿಸಿದೆ. ಇದನ್ನು ಕಾದಂಬಿನಿ ರಾವಿಯವರು ಮೊದಲು ಷೇರ್ ಮಾಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಅಂತರ್ಜಾತೀಯ ವಿವಾಹ ಮಾಡಿಸಿದ ಸಂದರ್ಭದಲ್ಲಿ ಸಮಾಜದಲಿ ಆರಥಿಕತೆ ಪಕವವಾಗಿರಲಿಲ ಎಂದು ಹೇಳಿದ ಭೈರಪ್ಪನವರೆ ನಿಮ್ಮ ಬುದ್ಧಿಗೆ ಸವಲಪ ಸಗಣಿ ಹಾಕಿಕೊಳ್ಳಿ. ಬಸವಣ್ಣನವರು ಆ ಇಬ್ಬರು ಗಂಡು ಹೆಣ್ಣು ಪೃಕೃತಿ ಸಹಜ ಆಕರ್ಷಣೆಗೊಂಡಿದರಿಂದ ಅವರಿಬ್ಬರಿಗೂ ಮುತಸದಿಯ ಜಾಗೃತೆ ವಹಿಸಿ ಆಗಿನ ಕಾಲದ ಸಮಾಜ ಹಾಕಿಕೊಂಡ ಜಾತಿಯತೆಯ ಸಾಮಾಜಿಕ ಕಟ್ಟಳೆಯಿಂದ ಇವರಿಬ್ಬರಿಗೂ ತೊಂದರೆಯಾಗಬಾರದೆಂಬ ಕಳಕಳಿಯಿಂದ ಇಬ್ಬರಿಗೂ ಸಾಂಕೇತಿಕವಾಗಿ ಲಿಂಗ ದೀಕ್ಷೆ ಕೊಟ್ಟು ಸತಿಪತಿ ಗಳಾಗಿ ಬಾಳುವಂತೆ ಮದುವೆ ಮಾಡಿಸಿ ಜಾತ್ಯತೀತದ ಆದರ್ಶ ವನ್ನು ಎತ್ತಿ ಹಿಡಿದರು. ವಸ್ತು ಸ್ಥಿತಿ ವಿಷಯದ ಅಜಾನಿಗಳಾದ ನೀವು ನಿಮ್ಮ ಗೊಮುಖ ವಾಘೃದ ಮುಖವಾಡ ಹಾಕಿ ಕೊಂಡು ಕೈಗೆ ಮೈಕ್ ಮತ್ತು ನಿಂತು ಕೊಳಲು ಪುಕ್ಕಟೆಯ ವೇದಿಕೆ ಸಿಕಿದರಿಂದ ನಾನು ಹೇಳುವೆನೊ ಜನ ಅದನ್ನು ಕೇಳುತ್ತಾರೆ ಎಂಬ ಅಹಂನಿಂದ ಬಸವಣ್ಣನವರ ಮಾಡಿಸಿದ ಮದುವೆಯನ್ನು ಆರಥಿಕತೆ ರೂಪಕ್ಕೆ ಹೋಗಿ ಜೊಡಿಸಿದಿರಲ ನಿಮ್ಮ ಅಪೃಬುದತೆಗೆ ಛೀ ಮಾರಿ ಹಾಕುತಿದೆನೆ.
    ಹಾಗಾದರೆ ಇವತಿಗೆ ಆರಥಿಕತೆ ಪಕವವಾಗಿದೆ ಎನುವುದಾದರೆ ಒಬ್ಬರಿಗೂಬಬರಿಗೂ ಯಾವ ಆಕರ್ಷಣೆ ಇಲ್ಲದೇ ಕೇವಲ ಆರಥಿಕ ಆಕರ್ಷಣೆ ಗೊಸಕರ ಮದುವೆ ಯಾಗಬೇಕಾ. ಛೀ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...