Homeಮುಖಪುಟಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

ಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

- Advertisement -
- Advertisement -

| ಡಾ.ಅನುಸೂಯ ಕಾಂಬಳೆ |

ಸಂವಿಧಾನದಲ್ಲಿ ಧರ್ಮಶಾಸ್ತ್ರವಿಲ್ಲ, ಇನ್ನು ಮುಂದೆ ಹೆಂಡತಿಯಿಂದ ಸಹಿ ಪಡೆದುಕೊಂಡು ಮುಟ್ಟಬೇಕಾಗುತ್ತದೆ ಎಂಬ ಎಸ್.ಎಲ್.ಭೈರಪ್ಪನವರ ಮಾತುಗಳಿಗೆ ಹಲವು ಬರಹಗಾರ್ತಿಯರು ಪ್ರತಿಕ್ರಿಯಿಸಿದ್ದನ್ನು ಹಿಂದೆಯೇ ಪ್ರಕಟಿಸಿದ್ದೆವು. ಅದರ ಮುಂದುವರಿಕೆಯಾಗಿ ಪ್ರಾಧ್ಯಾಪಕಿ, ಕವಯತ್ರಿ ಮತ್ತು ಚಿಂತಕರಾದ ಡಾ.ಅನಸೂಯ ಕಾಂಬಳೆಯವರ ಬರಹ ಇಲ್ಲಿದೆ.

ಪರಂಪರೆಯ ಪ್ರಜ್ಞೆ ಮತ್ತು ರಾಷ್ಟ್ರೀಯತೆ ಎರಡು ಭಿನ್ನವಾದವು. ಭೈರಪ್ಪನವರ ಮಾತಿಗೆ ಪ್ರತಿಕ್ರಿಯಿಸುವುದು ಅಂತ ವಿಶೇಷ ಅನಿಸುವುದಿಲ್ಲ. ಧರ್ಮಶಾಸ್ತ್ರವೇ ರಾಷ್ಟ್ರೀಯ ಗ್ರಂಥವಾಗಬೇಕೆಂದು ಏಕೆ ಹೇಳುತ್ತಿದ್ದಾರೆ ಎನ್ನುವುದು ಸಾಮಾನ್ಯರಿಗೂ ತಿಳಿಯುವ ಸಂಗತಿ. ಅವರು ಹೇಳುವ ಧರ್ಮ ರಾಷ್ಟ್ರವನ್ನು ಪ್ರತಿನಿಧಿಸುವ ಧರ್ಮವಲ್ಲ. ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಅನ್ವಯಿಸುವುದು ಮತ್ತು ಅಧಿಕಾರವನ್ನು ಅವರಿಗೆ ನಿಗದಿಗೊಳಿಸುವರಿಂದ ಹೇಳುತ್ತಿರುವ ರಾಜಕಾರಣದ ಭಾಗವೇ ಆಗಿದೆ ಹೊರತು ಪರಂಪರೆಯ ಪ್ರಶ್ನೆ ಅಲ್ಲ. ಬ್ರಾಹ್ಮಣರಿಗೆ ಅಧಿಕಾರ ಇರಬೇಕು, ಭಾರತದ ಬಹುಸಂಖ್ಯಾತರು ಸೇವಕರು ಆಗಿರಬೇಕು ಎಂದು ಹೇಳಲು ಧೈರ್ಯವಿಲ್ಲದೆ ಪರಂಪರೆ ಹೆಸರಿನ ಸಂಕೇತದ ಮೂಲಕ ಸೂಚಿಸುತ್ತಿದ್ದಾರೆ.
ಭೈರಪ್ಪನವರು ಹೇಳುವ ಧರ್ಮ ಭಾರತೀಯರ ಭಾವೈಕ್ಯತೆಯನ್ನು ಹೊಂದಿಲ್ಲ. ವರ್ಣ, ಜಾತಿ, ಲಿಂಗ ನೆಲೆಯಲ್ಲಿ ಅಧಿಕಾರದ ವಿಭಜನೆ ಮಾಡುತ್ತಾ ಮನುಷ್ಯ ಮನುಷ್ಯರ ನಡುವೆ ಬೇಧ ಸಂಸ್ಕೃತಿಯನ್ನು ಬಿತ್ತುತ್ತದೆ. ಮೇಲು – ಕೀಳು ಎನ್ನುವ ಶ್ರೇಣೀಕರಣದ ಮೂಲಕ ಒಡೆದು ಆಳುವ ನೀತಿಯನ್ನು ಅನುಸರಿಸುತ್ತವೆ. ಇದೇ ಪರಂಪರೆ ಅನ್ನುವುದಾದರೆ ಬೈರಪ್ಪನವರು ಹೇಳುತ್ತಿರುವುದು ಏನನ್ನು? ನಮ್ಮ ಸಂವಿಧಾನ ವಿಶ್ವ ಮಾನವ ತತ್ವಗಳನ್ನು ಹೊಂದಿದೆ. ಅದರ ಪ್ರಸ್ತಾವನೆಯಲ್ಲಿ “ನಾವು” ಅನ್ನುವ ಪದವೇ ಭಾರತೀಯರ ಭವ್ಯ ಪರಂಪರೆ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೇಳುತ್ತಿಲ್ಲವೆ? ನಮ್ಮ ಸಂವಿಧಾನದ ಆತ್ಮವಾದ ಸಮಾನತೆ, ಸ್ವಾತಂತ್ರ, ಭ್ರಾತೃತ್ವ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಮಾನವನಲ್ಲಿ ಇರಬೇಕಾದ ಮೂಲಭೂತ ಗುಣಗಳನ್ನು ಬೇರೆ ಬೇರೆ ದೇಶಗಳಿಂದ ಎರವಲು ತಂದವುಗಳೆಂದು ಹೇಳಲಾದೀತೆ? ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಮಾನವತಾವಾದವು ಭೈರಪ್ಪನವರು ಹೇಳುವ ಸಾಂಸ್ಥಿಕ ಧರ್ಮದಲ್ಲಿ ಇದೆಯೇ? ಮನುಷ್ಯನ ಸ್ವಾವಲಂಬನೆ, ಸ್ವಾಯತ್ತತೆಯನ್ನು ನಾಶಮಾಡುವ ಆತನ ಸಹಜ ಶಕ್ತಿಯನ್ನು ನಾಶ ಮಾಡಿ ನಿಷ್ಕ್ರಿಯಗೊಳಿಸುವ, ಜನರನ್ನು ಸದಾ ಭಯ ಮತ್ತು ಆತಂಕದಲ್ಲಿ ಇಡುವ ಮೌಢ್ಯವನ್ನು ಬಿತ್ತುತ್ತ ಅಧಿಕಾರ ಮತ್ತು ಆದಾಯದ ಮೂಲಗಳಿಂದ ವಂಚಿಸುವ ಭಾರತದ ಬಹುಜನ ಸಮುದಾಯವನ್ನು ಸೇವಕರನ್ನಾಗಿಸುವ ಧರ್ಮಶಾಸ್ತ್ರ ರಾಷ್ಟ್ರೀಯ ಗ್ರಂಥವಾದರೆ ಭಾರತೀಯತೆಯ, ಪ್ರಜಾಪ್ರಭುತ್ವದ ನಾಶವೇ ಆಗುತ್ತದೆ. ಬೈರಪ್ಪನವರ ಧರ್ಮಶಾಸ್ತ್ರ ಗ್ರಂಥವು ದೈವ ಕೇಂದ್ರಿತವಾದುದೇ ಹೊರತು ಮಾನವ ಕೇಂದ್ರಿತ ಅಲ್ಲ. ನಮ್ಮ ಸಂವಿಧಾನವು ಮನುಷ್ಯನ ಮೂಲಕ ನೋಡುವ ಮಾನವತಾವಾದವನ್ನು ಕಟ್ಟಿಕೊಡುವ ಮೂಲಕ ಮನುಷ್ಯನಿಗೆ ಅಪಾರ ಗೌರವ- ಘನತೆಯನ್ನು ತಂದು ಕೊಟ್ಟಿದೆ. ಅದಕ್ಕಾಗಿಯೇ ಭೈರಪ್ಪ ಮತ್ತು ಭೈರಪ್ಪರಂತ ಮೂಲಭೂತವಾದಿಗಳು ಪರಂಪರೆಯ ಹೆಸರಿನಲ್ಲಿ ಅದನ್ನು ವಿರೋಧಿಸುತ್ತಿದ್ದಾರೆ. ಉಗ್ರ ಮಹಿಳಾ ವಿರೋಧಿಯಾದ ಭೈರಪ್ಪನವರು ಮಹಿಳೆಯ ದೇಹದ ಮೇಲೆ ಪುರುಷಾಧಿಕಾರವನ್ನು ಸ್ಥಾಪಿಸಿದ್ದ ಮನುಸ್ಮೃತಿ ಬೆಂಬಲಿಸುತ್ತಿದ್ದಾರೆ. ಸಂವಿಧಾನವು ಮಹಿಳೆಗೆ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡುವ ಮೂಲಕ ಅವಳಿಗೆ ಗೌರವದ ಬದುಕು ನೀಡಿದೆ. ತಮ್ಮ ಬರಹ ಮತ್ತು ಮಾತಿನ ಮೂಲಕವೇ ಭೈರಪ್ಪನವರು ಮಹಿಳೆಯರನ್ನು ಅವಮಾನಿಸುವ ಮೂಲಕ ಅವಳ ಹಕ್ಕು ಮತ್ತು ಅಧಿಕಾರವನ್ನು ನಿರಾಕರಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...