Homeಮುಖಪುಟಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

ಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

- Advertisement -
- Advertisement -

| ಡಾ.ಅನುಸೂಯ ಕಾಂಬಳೆ |

ಸಂವಿಧಾನದಲ್ಲಿ ಧರ್ಮಶಾಸ್ತ್ರವಿಲ್ಲ, ಇನ್ನು ಮುಂದೆ ಹೆಂಡತಿಯಿಂದ ಸಹಿ ಪಡೆದುಕೊಂಡು ಮುಟ್ಟಬೇಕಾಗುತ್ತದೆ ಎಂಬ ಎಸ್.ಎಲ್.ಭೈರಪ್ಪನವರ ಮಾತುಗಳಿಗೆ ಹಲವು ಬರಹಗಾರ್ತಿಯರು ಪ್ರತಿಕ್ರಿಯಿಸಿದ್ದನ್ನು ಹಿಂದೆಯೇ ಪ್ರಕಟಿಸಿದ್ದೆವು. ಅದರ ಮುಂದುವರಿಕೆಯಾಗಿ ಪ್ರಾಧ್ಯಾಪಕಿ, ಕವಯತ್ರಿ ಮತ್ತು ಚಿಂತಕರಾದ ಡಾ.ಅನಸೂಯ ಕಾಂಬಳೆಯವರ ಬರಹ ಇಲ್ಲಿದೆ.

ಪರಂಪರೆಯ ಪ್ರಜ್ಞೆ ಮತ್ತು ರಾಷ್ಟ್ರೀಯತೆ ಎರಡು ಭಿನ್ನವಾದವು. ಭೈರಪ್ಪನವರ ಮಾತಿಗೆ ಪ್ರತಿಕ್ರಿಯಿಸುವುದು ಅಂತ ವಿಶೇಷ ಅನಿಸುವುದಿಲ್ಲ. ಧರ್ಮಶಾಸ್ತ್ರವೇ ರಾಷ್ಟ್ರೀಯ ಗ್ರಂಥವಾಗಬೇಕೆಂದು ಏಕೆ ಹೇಳುತ್ತಿದ್ದಾರೆ ಎನ್ನುವುದು ಸಾಮಾನ್ಯರಿಗೂ ತಿಳಿಯುವ ಸಂಗತಿ. ಅವರು ಹೇಳುವ ಧರ್ಮ ರಾಷ್ಟ್ರವನ್ನು ಪ್ರತಿನಿಧಿಸುವ ಧರ್ಮವಲ್ಲ. ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಅನ್ವಯಿಸುವುದು ಮತ್ತು ಅಧಿಕಾರವನ್ನು ಅವರಿಗೆ ನಿಗದಿಗೊಳಿಸುವರಿಂದ ಹೇಳುತ್ತಿರುವ ರಾಜಕಾರಣದ ಭಾಗವೇ ಆಗಿದೆ ಹೊರತು ಪರಂಪರೆಯ ಪ್ರಶ್ನೆ ಅಲ್ಲ. ಬ್ರಾಹ್ಮಣರಿಗೆ ಅಧಿಕಾರ ಇರಬೇಕು, ಭಾರತದ ಬಹುಸಂಖ್ಯಾತರು ಸೇವಕರು ಆಗಿರಬೇಕು ಎಂದು ಹೇಳಲು ಧೈರ್ಯವಿಲ್ಲದೆ ಪರಂಪರೆ ಹೆಸರಿನ ಸಂಕೇತದ ಮೂಲಕ ಸೂಚಿಸುತ್ತಿದ್ದಾರೆ.
ಭೈರಪ್ಪನವರು ಹೇಳುವ ಧರ್ಮ ಭಾರತೀಯರ ಭಾವೈಕ್ಯತೆಯನ್ನು ಹೊಂದಿಲ್ಲ. ವರ್ಣ, ಜಾತಿ, ಲಿಂಗ ನೆಲೆಯಲ್ಲಿ ಅಧಿಕಾರದ ವಿಭಜನೆ ಮಾಡುತ್ತಾ ಮನುಷ್ಯ ಮನುಷ್ಯರ ನಡುವೆ ಬೇಧ ಸಂಸ್ಕೃತಿಯನ್ನು ಬಿತ್ತುತ್ತದೆ. ಮೇಲು – ಕೀಳು ಎನ್ನುವ ಶ್ರೇಣೀಕರಣದ ಮೂಲಕ ಒಡೆದು ಆಳುವ ನೀತಿಯನ್ನು ಅನುಸರಿಸುತ್ತವೆ. ಇದೇ ಪರಂಪರೆ ಅನ್ನುವುದಾದರೆ ಬೈರಪ್ಪನವರು ಹೇಳುತ್ತಿರುವುದು ಏನನ್ನು? ನಮ್ಮ ಸಂವಿಧಾನ ವಿಶ್ವ ಮಾನವ ತತ್ವಗಳನ್ನು ಹೊಂದಿದೆ. ಅದರ ಪ್ರಸ್ತಾವನೆಯಲ್ಲಿ “ನಾವು” ಅನ್ನುವ ಪದವೇ ಭಾರತೀಯರ ಭವ್ಯ ಪರಂಪರೆ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೇಳುತ್ತಿಲ್ಲವೆ? ನಮ್ಮ ಸಂವಿಧಾನದ ಆತ್ಮವಾದ ಸಮಾನತೆ, ಸ್ವಾತಂತ್ರ, ಭ್ರಾತೃತ್ವ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಮಾನವನಲ್ಲಿ ಇರಬೇಕಾದ ಮೂಲಭೂತ ಗುಣಗಳನ್ನು ಬೇರೆ ಬೇರೆ ದೇಶಗಳಿಂದ ಎರವಲು ತಂದವುಗಳೆಂದು ಹೇಳಲಾದೀತೆ? ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಮಾನವತಾವಾದವು ಭೈರಪ್ಪನವರು ಹೇಳುವ ಸಾಂಸ್ಥಿಕ ಧರ್ಮದಲ್ಲಿ ಇದೆಯೇ? ಮನುಷ್ಯನ ಸ್ವಾವಲಂಬನೆ, ಸ್ವಾಯತ್ತತೆಯನ್ನು ನಾಶಮಾಡುವ ಆತನ ಸಹಜ ಶಕ್ತಿಯನ್ನು ನಾಶ ಮಾಡಿ ನಿಷ್ಕ್ರಿಯಗೊಳಿಸುವ, ಜನರನ್ನು ಸದಾ ಭಯ ಮತ್ತು ಆತಂಕದಲ್ಲಿ ಇಡುವ ಮೌಢ್ಯವನ್ನು ಬಿತ್ತುತ್ತ ಅಧಿಕಾರ ಮತ್ತು ಆದಾಯದ ಮೂಲಗಳಿಂದ ವಂಚಿಸುವ ಭಾರತದ ಬಹುಜನ ಸಮುದಾಯವನ್ನು ಸೇವಕರನ್ನಾಗಿಸುವ ಧರ್ಮಶಾಸ್ತ್ರ ರಾಷ್ಟ್ರೀಯ ಗ್ರಂಥವಾದರೆ ಭಾರತೀಯತೆಯ, ಪ್ರಜಾಪ್ರಭುತ್ವದ ನಾಶವೇ ಆಗುತ್ತದೆ. ಬೈರಪ್ಪನವರ ಧರ್ಮಶಾಸ್ತ್ರ ಗ್ರಂಥವು ದೈವ ಕೇಂದ್ರಿತವಾದುದೇ ಹೊರತು ಮಾನವ ಕೇಂದ್ರಿತ ಅಲ್ಲ. ನಮ್ಮ ಸಂವಿಧಾನವು ಮನುಷ್ಯನ ಮೂಲಕ ನೋಡುವ ಮಾನವತಾವಾದವನ್ನು ಕಟ್ಟಿಕೊಡುವ ಮೂಲಕ ಮನುಷ್ಯನಿಗೆ ಅಪಾರ ಗೌರವ- ಘನತೆಯನ್ನು ತಂದು ಕೊಟ್ಟಿದೆ. ಅದಕ್ಕಾಗಿಯೇ ಭೈರಪ್ಪ ಮತ್ತು ಭೈರಪ್ಪರಂತ ಮೂಲಭೂತವಾದಿಗಳು ಪರಂಪರೆಯ ಹೆಸರಿನಲ್ಲಿ ಅದನ್ನು ವಿರೋಧಿಸುತ್ತಿದ್ದಾರೆ. ಉಗ್ರ ಮಹಿಳಾ ವಿರೋಧಿಯಾದ ಭೈರಪ್ಪನವರು ಮಹಿಳೆಯ ದೇಹದ ಮೇಲೆ ಪುರುಷಾಧಿಕಾರವನ್ನು ಸ್ಥಾಪಿಸಿದ್ದ ಮನುಸ್ಮೃತಿ ಬೆಂಬಲಿಸುತ್ತಿದ್ದಾರೆ. ಸಂವಿಧಾನವು ಮಹಿಳೆಗೆ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡುವ ಮೂಲಕ ಅವಳಿಗೆ ಗೌರವದ ಬದುಕು ನೀಡಿದೆ. ತಮ್ಮ ಬರಹ ಮತ್ತು ಮಾತಿನ ಮೂಲಕವೇ ಭೈರಪ್ಪನವರು ಮಹಿಳೆಯರನ್ನು ಅವಮಾನಿಸುವ ಮೂಲಕ ಅವಳ ಹಕ್ಕು ಮತ್ತು ಅಧಿಕಾರವನ್ನು ನಿರಾಕರಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...