Homeಮುಖಪುಟಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

ಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

- Advertisement -
- Advertisement -

| ಡಾ.ಅನುಸೂಯ ಕಾಂಬಳೆ |

ಸಂವಿಧಾನದಲ್ಲಿ ಧರ್ಮಶಾಸ್ತ್ರವಿಲ್ಲ, ಇನ್ನು ಮುಂದೆ ಹೆಂಡತಿಯಿಂದ ಸಹಿ ಪಡೆದುಕೊಂಡು ಮುಟ್ಟಬೇಕಾಗುತ್ತದೆ ಎಂಬ ಎಸ್.ಎಲ್.ಭೈರಪ್ಪನವರ ಮಾತುಗಳಿಗೆ ಹಲವು ಬರಹಗಾರ್ತಿಯರು ಪ್ರತಿಕ್ರಿಯಿಸಿದ್ದನ್ನು ಹಿಂದೆಯೇ ಪ್ರಕಟಿಸಿದ್ದೆವು. ಅದರ ಮುಂದುವರಿಕೆಯಾಗಿ ಪ್ರಾಧ್ಯಾಪಕಿ, ಕವಯತ್ರಿ ಮತ್ತು ಚಿಂತಕರಾದ ಡಾ.ಅನಸೂಯ ಕಾಂಬಳೆಯವರ ಬರಹ ಇಲ್ಲಿದೆ.

ಪರಂಪರೆಯ ಪ್ರಜ್ಞೆ ಮತ್ತು ರಾಷ್ಟ್ರೀಯತೆ ಎರಡು ಭಿನ್ನವಾದವು. ಭೈರಪ್ಪನವರ ಮಾತಿಗೆ ಪ್ರತಿಕ್ರಿಯಿಸುವುದು ಅಂತ ವಿಶೇಷ ಅನಿಸುವುದಿಲ್ಲ. ಧರ್ಮಶಾಸ್ತ್ರವೇ ರಾಷ್ಟ್ರೀಯ ಗ್ರಂಥವಾಗಬೇಕೆಂದು ಏಕೆ ಹೇಳುತ್ತಿದ್ದಾರೆ ಎನ್ನುವುದು ಸಾಮಾನ್ಯರಿಗೂ ತಿಳಿಯುವ ಸಂಗತಿ. ಅವರು ಹೇಳುವ ಧರ್ಮ ರಾಷ್ಟ್ರವನ್ನು ಪ್ರತಿನಿಧಿಸುವ ಧರ್ಮವಲ್ಲ. ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಅನ್ವಯಿಸುವುದು ಮತ್ತು ಅಧಿಕಾರವನ್ನು ಅವರಿಗೆ ನಿಗದಿಗೊಳಿಸುವರಿಂದ ಹೇಳುತ್ತಿರುವ ರಾಜಕಾರಣದ ಭಾಗವೇ ಆಗಿದೆ ಹೊರತು ಪರಂಪರೆಯ ಪ್ರಶ್ನೆ ಅಲ್ಲ. ಬ್ರಾಹ್ಮಣರಿಗೆ ಅಧಿಕಾರ ಇರಬೇಕು, ಭಾರತದ ಬಹುಸಂಖ್ಯಾತರು ಸೇವಕರು ಆಗಿರಬೇಕು ಎಂದು ಹೇಳಲು ಧೈರ್ಯವಿಲ್ಲದೆ ಪರಂಪರೆ ಹೆಸರಿನ ಸಂಕೇತದ ಮೂಲಕ ಸೂಚಿಸುತ್ತಿದ್ದಾರೆ.
ಭೈರಪ್ಪನವರು ಹೇಳುವ ಧರ್ಮ ಭಾರತೀಯರ ಭಾವೈಕ್ಯತೆಯನ್ನು ಹೊಂದಿಲ್ಲ. ವರ್ಣ, ಜಾತಿ, ಲಿಂಗ ನೆಲೆಯಲ್ಲಿ ಅಧಿಕಾರದ ವಿಭಜನೆ ಮಾಡುತ್ತಾ ಮನುಷ್ಯ ಮನುಷ್ಯರ ನಡುವೆ ಬೇಧ ಸಂಸ್ಕೃತಿಯನ್ನು ಬಿತ್ತುತ್ತದೆ. ಮೇಲು – ಕೀಳು ಎನ್ನುವ ಶ್ರೇಣೀಕರಣದ ಮೂಲಕ ಒಡೆದು ಆಳುವ ನೀತಿಯನ್ನು ಅನುಸರಿಸುತ್ತವೆ. ಇದೇ ಪರಂಪರೆ ಅನ್ನುವುದಾದರೆ ಬೈರಪ್ಪನವರು ಹೇಳುತ್ತಿರುವುದು ಏನನ್ನು? ನಮ್ಮ ಸಂವಿಧಾನ ವಿಶ್ವ ಮಾನವ ತತ್ವಗಳನ್ನು ಹೊಂದಿದೆ. ಅದರ ಪ್ರಸ್ತಾವನೆಯಲ್ಲಿ “ನಾವು” ಅನ್ನುವ ಪದವೇ ಭಾರತೀಯರ ಭವ್ಯ ಪರಂಪರೆ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೇಳುತ್ತಿಲ್ಲವೆ? ನಮ್ಮ ಸಂವಿಧಾನದ ಆತ್ಮವಾದ ಸಮಾನತೆ, ಸ್ವಾತಂತ್ರ, ಭ್ರಾತೃತ್ವ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಮಾನವನಲ್ಲಿ ಇರಬೇಕಾದ ಮೂಲಭೂತ ಗುಣಗಳನ್ನು ಬೇರೆ ಬೇರೆ ದೇಶಗಳಿಂದ ಎರವಲು ತಂದವುಗಳೆಂದು ಹೇಳಲಾದೀತೆ? ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಮಾನವತಾವಾದವು ಭೈರಪ್ಪನವರು ಹೇಳುವ ಸಾಂಸ್ಥಿಕ ಧರ್ಮದಲ್ಲಿ ಇದೆಯೇ? ಮನುಷ್ಯನ ಸ್ವಾವಲಂಬನೆ, ಸ್ವಾಯತ್ತತೆಯನ್ನು ನಾಶಮಾಡುವ ಆತನ ಸಹಜ ಶಕ್ತಿಯನ್ನು ನಾಶ ಮಾಡಿ ನಿಷ್ಕ್ರಿಯಗೊಳಿಸುವ, ಜನರನ್ನು ಸದಾ ಭಯ ಮತ್ತು ಆತಂಕದಲ್ಲಿ ಇಡುವ ಮೌಢ್ಯವನ್ನು ಬಿತ್ತುತ್ತ ಅಧಿಕಾರ ಮತ್ತು ಆದಾಯದ ಮೂಲಗಳಿಂದ ವಂಚಿಸುವ ಭಾರತದ ಬಹುಜನ ಸಮುದಾಯವನ್ನು ಸೇವಕರನ್ನಾಗಿಸುವ ಧರ್ಮಶಾಸ್ತ್ರ ರಾಷ್ಟ್ರೀಯ ಗ್ರಂಥವಾದರೆ ಭಾರತೀಯತೆಯ, ಪ್ರಜಾಪ್ರಭುತ್ವದ ನಾಶವೇ ಆಗುತ್ತದೆ. ಬೈರಪ್ಪನವರ ಧರ್ಮಶಾಸ್ತ್ರ ಗ್ರಂಥವು ದೈವ ಕೇಂದ್ರಿತವಾದುದೇ ಹೊರತು ಮಾನವ ಕೇಂದ್ರಿತ ಅಲ್ಲ. ನಮ್ಮ ಸಂವಿಧಾನವು ಮನುಷ್ಯನ ಮೂಲಕ ನೋಡುವ ಮಾನವತಾವಾದವನ್ನು ಕಟ್ಟಿಕೊಡುವ ಮೂಲಕ ಮನುಷ್ಯನಿಗೆ ಅಪಾರ ಗೌರವ- ಘನತೆಯನ್ನು ತಂದು ಕೊಟ್ಟಿದೆ. ಅದಕ್ಕಾಗಿಯೇ ಭೈರಪ್ಪ ಮತ್ತು ಭೈರಪ್ಪರಂತ ಮೂಲಭೂತವಾದಿಗಳು ಪರಂಪರೆಯ ಹೆಸರಿನಲ್ಲಿ ಅದನ್ನು ವಿರೋಧಿಸುತ್ತಿದ್ದಾರೆ. ಉಗ್ರ ಮಹಿಳಾ ವಿರೋಧಿಯಾದ ಭೈರಪ್ಪನವರು ಮಹಿಳೆಯ ದೇಹದ ಮೇಲೆ ಪುರುಷಾಧಿಕಾರವನ್ನು ಸ್ಥಾಪಿಸಿದ್ದ ಮನುಸ್ಮೃತಿ ಬೆಂಬಲಿಸುತ್ತಿದ್ದಾರೆ. ಸಂವಿಧಾನವು ಮಹಿಳೆಗೆ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡುವ ಮೂಲಕ ಅವಳಿಗೆ ಗೌರವದ ಬದುಕು ನೀಡಿದೆ. ತಮ್ಮ ಬರಹ ಮತ್ತು ಮಾತಿನ ಮೂಲಕವೇ ಭೈರಪ್ಪನವರು ಮಹಿಳೆಯರನ್ನು ಅವಮಾನಿಸುವ ಮೂಲಕ ಅವಳ ಹಕ್ಕು ಮತ್ತು ಅಧಿಕಾರವನ್ನು ನಿರಾಕರಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....