Homeಮುಖಪುಟಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

ಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

- Advertisement -
- Advertisement -

| ಡಾ.ಅನುಸೂಯ ಕಾಂಬಳೆ |

ಸಂವಿಧಾನದಲ್ಲಿ ಧರ್ಮಶಾಸ್ತ್ರವಿಲ್ಲ, ಇನ್ನು ಮುಂದೆ ಹೆಂಡತಿಯಿಂದ ಸಹಿ ಪಡೆದುಕೊಂಡು ಮುಟ್ಟಬೇಕಾಗುತ್ತದೆ ಎಂಬ ಎಸ್.ಎಲ್.ಭೈರಪ್ಪನವರ ಮಾತುಗಳಿಗೆ ಹಲವು ಬರಹಗಾರ್ತಿಯರು ಪ್ರತಿಕ್ರಿಯಿಸಿದ್ದನ್ನು ಹಿಂದೆಯೇ ಪ್ರಕಟಿಸಿದ್ದೆವು. ಅದರ ಮುಂದುವರಿಕೆಯಾಗಿ ಪ್ರಾಧ್ಯಾಪಕಿ, ಕವಯತ್ರಿ ಮತ್ತು ಚಿಂತಕರಾದ ಡಾ.ಅನಸೂಯ ಕಾಂಬಳೆಯವರ ಬರಹ ಇಲ್ಲಿದೆ.

ಪರಂಪರೆಯ ಪ್ರಜ್ಞೆ ಮತ್ತು ರಾಷ್ಟ್ರೀಯತೆ ಎರಡು ಭಿನ್ನವಾದವು. ಭೈರಪ್ಪನವರ ಮಾತಿಗೆ ಪ್ರತಿಕ್ರಿಯಿಸುವುದು ಅಂತ ವಿಶೇಷ ಅನಿಸುವುದಿಲ್ಲ. ಧರ್ಮಶಾಸ್ತ್ರವೇ ರಾಷ್ಟ್ರೀಯ ಗ್ರಂಥವಾಗಬೇಕೆಂದು ಏಕೆ ಹೇಳುತ್ತಿದ್ದಾರೆ ಎನ್ನುವುದು ಸಾಮಾನ್ಯರಿಗೂ ತಿಳಿಯುವ ಸಂಗತಿ. ಅವರು ಹೇಳುವ ಧರ್ಮ ರಾಷ್ಟ್ರವನ್ನು ಪ್ರತಿನಿಧಿಸುವ ಧರ್ಮವಲ್ಲ. ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಅನ್ವಯಿಸುವುದು ಮತ್ತು ಅಧಿಕಾರವನ್ನು ಅವರಿಗೆ ನಿಗದಿಗೊಳಿಸುವರಿಂದ ಹೇಳುತ್ತಿರುವ ರಾಜಕಾರಣದ ಭಾಗವೇ ಆಗಿದೆ ಹೊರತು ಪರಂಪರೆಯ ಪ್ರಶ್ನೆ ಅಲ್ಲ. ಬ್ರಾಹ್ಮಣರಿಗೆ ಅಧಿಕಾರ ಇರಬೇಕು, ಭಾರತದ ಬಹುಸಂಖ್ಯಾತರು ಸೇವಕರು ಆಗಿರಬೇಕು ಎಂದು ಹೇಳಲು ಧೈರ್ಯವಿಲ್ಲದೆ ಪರಂಪರೆ ಹೆಸರಿನ ಸಂಕೇತದ ಮೂಲಕ ಸೂಚಿಸುತ್ತಿದ್ದಾರೆ.
ಭೈರಪ್ಪನವರು ಹೇಳುವ ಧರ್ಮ ಭಾರತೀಯರ ಭಾವೈಕ್ಯತೆಯನ್ನು ಹೊಂದಿಲ್ಲ. ವರ್ಣ, ಜಾತಿ, ಲಿಂಗ ನೆಲೆಯಲ್ಲಿ ಅಧಿಕಾರದ ವಿಭಜನೆ ಮಾಡುತ್ತಾ ಮನುಷ್ಯ ಮನುಷ್ಯರ ನಡುವೆ ಬೇಧ ಸಂಸ್ಕೃತಿಯನ್ನು ಬಿತ್ತುತ್ತದೆ. ಮೇಲು – ಕೀಳು ಎನ್ನುವ ಶ್ರೇಣೀಕರಣದ ಮೂಲಕ ಒಡೆದು ಆಳುವ ನೀತಿಯನ್ನು ಅನುಸರಿಸುತ್ತವೆ. ಇದೇ ಪರಂಪರೆ ಅನ್ನುವುದಾದರೆ ಬೈರಪ್ಪನವರು ಹೇಳುತ್ತಿರುವುದು ಏನನ್ನು? ನಮ್ಮ ಸಂವಿಧಾನ ವಿಶ್ವ ಮಾನವ ತತ್ವಗಳನ್ನು ಹೊಂದಿದೆ. ಅದರ ಪ್ರಸ್ತಾವನೆಯಲ್ಲಿ “ನಾವು” ಅನ್ನುವ ಪದವೇ ಭಾರತೀಯರ ಭವ್ಯ ಪರಂಪರೆ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೇಳುತ್ತಿಲ್ಲವೆ? ನಮ್ಮ ಸಂವಿಧಾನದ ಆತ್ಮವಾದ ಸಮಾನತೆ, ಸ್ವಾತಂತ್ರ, ಭ್ರಾತೃತ್ವ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಮಾನವನಲ್ಲಿ ಇರಬೇಕಾದ ಮೂಲಭೂತ ಗುಣಗಳನ್ನು ಬೇರೆ ಬೇರೆ ದೇಶಗಳಿಂದ ಎರವಲು ತಂದವುಗಳೆಂದು ಹೇಳಲಾದೀತೆ? ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಮಾನವತಾವಾದವು ಭೈರಪ್ಪನವರು ಹೇಳುವ ಸಾಂಸ್ಥಿಕ ಧರ್ಮದಲ್ಲಿ ಇದೆಯೇ? ಮನುಷ್ಯನ ಸ್ವಾವಲಂಬನೆ, ಸ್ವಾಯತ್ತತೆಯನ್ನು ನಾಶಮಾಡುವ ಆತನ ಸಹಜ ಶಕ್ತಿಯನ್ನು ನಾಶ ಮಾಡಿ ನಿಷ್ಕ್ರಿಯಗೊಳಿಸುವ, ಜನರನ್ನು ಸದಾ ಭಯ ಮತ್ತು ಆತಂಕದಲ್ಲಿ ಇಡುವ ಮೌಢ್ಯವನ್ನು ಬಿತ್ತುತ್ತ ಅಧಿಕಾರ ಮತ್ತು ಆದಾಯದ ಮೂಲಗಳಿಂದ ವಂಚಿಸುವ ಭಾರತದ ಬಹುಜನ ಸಮುದಾಯವನ್ನು ಸೇವಕರನ್ನಾಗಿಸುವ ಧರ್ಮಶಾಸ್ತ್ರ ರಾಷ್ಟ್ರೀಯ ಗ್ರಂಥವಾದರೆ ಭಾರತೀಯತೆಯ, ಪ್ರಜಾಪ್ರಭುತ್ವದ ನಾಶವೇ ಆಗುತ್ತದೆ. ಬೈರಪ್ಪನವರ ಧರ್ಮಶಾಸ್ತ್ರ ಗ್ರಂಥವು ದೈವ ಕೇಂದ್ರಿತವಾದುದೇ ಹೊರತು ಮಾನವ ಕೇಂದ್ರಿತ ಅಲ್ಲ. ನಮ್ಮ ಸಂವಿಧಾನವು ಮನುಷ್ಯನ ಮೂಲಕ ನೋಡುವ ಮಾನವತಾವಾದವನ್ನು ಕಟ್ಟಿಕೊಡುವ ಮೂಲಕ ಮನುಷ್ಯನಿಗೆ ಅಪಾರ ಗೌರವ- ಘನತೆಯನ್ನು ತಂದು ಕೊಟ್ಟಿದೆ. ಅದಕ್ಕಾಗಿಯೇ ಭೈರಪ್ಪ ಮತ್ತು ಭೈರಪ್ಪರಂತ ಮೂಲಭೂತವಾದಿಗಳು ಪರಂಪರೆಯ ಹೆಸರಿನಲ್ಲಿ ಅದನ್ನು ವಿರೋಧಿಸುತ್ತಿದ್ದಾರೆ. ಉಗ್ರ ಮಹಿಳಾ ವಿರೋಧಿಯಾದ ಭೈರಪ್ಪನವರು ಮಹಿಳೆಯ ದೇಹದ ಮೇಲೆ ಪುರುಷಾಧಿಕಾರವನ್ನು ಸ್ಥಾಪಿಸಿದ್ದ ಮನುಸ್ಮೃತಿ ಬೆಂಬಲಿಸುತ್ತಿದ್ದಾರೆ. ಸಂವಿಧಾನವು ಮಹಿಳೆಗೆ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡುವ ಮೂಲಕ ಅವಳಿಗೆ ಗೌರವದ ಬದುಕು ನೀಡಿದೆ. ತಮ್ಮ ಬರಹ ಮತ್ತು ಮಾತಿನ ಮೂಲಕವೇ ಭೈರಪ್ಪನವರು ಮಹಿಳೆಯರನ್ನು ಅವಮಾನಿಸುವ ಮೂಲಕ ಅವಳ ಹಕ್ಕು ಮತ್ತು ಅಧಿಕಾರವನ್ನು ನಿರಾಕರಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...