Homeಮುಖಪುಟಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

ಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

- Advertisement -
- Advertisement -

| ಡಾ.ಅನುಸೂಯ ಕಾಂಬಳೆ |

ಸಂವಿಧಾನದಲ್ಲಿ ಧರ್ಮಶಾಸ್ತ್ರವಿಲ್ಲ, ಇನ್ನು ಮುಂದೆ ಹೆಂಡತಿಯಿಂದ ಸಹಿ ಪಡೆದುಕೊಂಡು ಮುಟ್ಟಬೇಕಾಗುತ್ತದೆ ಎಂಬ ಎಸ್.ಎಲ್.ಭೈರಪ್ಪನವರ ಮಾತುಗಳಿಗೆ ಹಲವು ಬರಹಗಾರ್ತಿಯರು ಪ್ರತಿಕ್ರಿಯಿಸಿದ್ದನ್ನು ಹಿಂದೆಯೇ ಪ್ರಕಟಿಸಿದ್ದೆವು. ಅದರ ಮುಂದುವರಿಕೆಯಾಗಿ ಪ್ರಾಧ್ಯಾಪಕಿ, ಕವಯತ್ರಿ ಮತ್ತು ಚಿಂತಕರಾದ ಡಾ.ಅನಸೂಯ ಕಾಂಬಳೆಯವರ ಬರಹ ಇಲ್ಲಿದೆ.

ಪರಂಪರೆಯ ಪ್ರಜ್ಞೆ ಮತ್ತು ರಾಷ್ಟ್ರೀಯತೆ ಎರಡು ಭಿನ್ನವಾದವು. ಭೈರಪ್ಪನವರ ಮಾತಿಗೆ ಪ್ರತಿಕ್ರಿಯಿಸುವುದು ಅಂತ ವಿಶೇಷ ಅನಿಸುವುದಿಲ್ಲ. ಧರ್ಮಶಾಸ್ತ್ರವೇ ರಾಷ್ಟ್ರೀಯ ಗ್ರಂಥವಾಗಬೇಕೆಂದು ಏಕೆ ಹೇಳುತ್ತಿದ್ದಾರೆ ಎನ್ನುವುದು ಸಾಮಾನ್ಯರಿಗೂ ತಿಳಿಯುವ ಸಂಗತಿ. ಅವರು ಹೇಳುವ ಧರ್ಮ ರಾಷ್ಟ್ರವನ್ನು ಪ್ರತಿನಿಧಿಸುವ ಧರ್ಮವಲ್ಲ. ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಅನ್ವಯಿಸುವುದು ಮತ್ತು ಅಧಿಕಾರವನ್ನು ಅವರಿಗೆ ನಿಗದಿಗೊಳಿಸುವರಿಂದ ಹೇಳುತ್ತಿರುವ ರಾಜಕಾರಣದ ಭಾಗವೇ ಆಗಿದೆ ಹೊರತು ಪರಂಪರೆಯ ಪ್ರಶ್ನೆ ಅಲ್ಲ. ಬ್ರಾಹ್ಮಣರಿಗೆ ಅಧಿಕಾರ ಇರಬೇಕು, ಭಾರತದ ಬಹುಸಂಖ್ಯಾತರು ಸೇವಕರು ಆಗಿರಬೇಕು ಎಂದು ಹೇಳಲು ಧೈರ್ಯವಿಲ್ಲದೆ ಪರಂಪರೆ ಹೆಸರಿನ ಸಂಕೇತದ ಮೂಲಕ ಸೂಚಿಸುತ್ತಿದ್ದಾರೆ.
ಭೈರಪ್ಪನವರು ಹೇಳುವ ಧರ್ಮ ಭಾರತೀಯರ ಭಾವೈಕ್ಯತೆಯನ್ನು ಹೊಂದಿಲ್ಲ. ವರ್ಣ, ಜಾತಿ, ಲಿಂಗ ನೆಲೆಯಲ್ಲಿ ಅಧಿಕಾರದ ವಿಭಜನೆ ಮಾಡುತ್ತಾ ಮನುಷ್ಯ ಮನುಷ್ಯರ ನಡುವೆ ಬೇಧ ಸಂಸ್ಕೃತಿಯನ್ನು ಬಿತ್ತುತ್ತದೆ. ಮೇಲು – ಕೀಳು ಎನ್ನುವ ಶ್ರೇಣೀಕರಣದ ಮೂಲಕ ಒಡೆದು ಆಳುವ ನೀತಿಯನ್ನು ಅನುಸರಿಸುತ್ತವೆ. ಇದೇ ಪರಂಪರೆ ಅನ್ನುವುದಾದರೆ ಬೈರಪ್ಪನವರು ಹೇಳುತ್ತಿರುವುದು ಏನನ್ನು? ನಮ್ಮ ಸಂವಿಧಾನ ವಿಶ್ವ ಮಾನವ ತತ್ವಗಳನ್ನು ಹೊಂದಿದೆ. ಅದರ ಪ್ರಸ್ತಾವನೆಯಲ್ಲಿ “ನಾವು” ಅನ್ನುವ ಪದವೇ ಭಾರತೀಯರ ಭವ್ಯ ಪರಂಪರೆ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೇಳುತ್ತಿಲ್ಲವೆ? ನಮ್ಮ ಸಂವಿಧಾನದ ಆತ್ಮವಾದ ಸಮಾನತೆ, ಸ್ವಾತಂತ್ರ, ಭ್ರಾತೃತ್ವ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಮಾನವನಲ್ಲಿ ಇರಬೇಕಾದ ಮೂಲಭೂತ ಗುಣಗಳನ್ನು ಬೇರೆ ಬೇರೆ ದೇಶಗಳಿಂದ ಎರವಲು ತಂದವುಗಳೆಂದು ಹೇಳಲಾದೀತೆ? ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಮಾನವತಾವಾದವು ಭೈರಪ್ಪನವರು ಹೇಳುವ ಸಾಂಸ್ಥಿಕ ಧರ್ಮದಲ್ಲಿ ಇದೆಯೇ? ಮನುಷ್ಯನ ಸ್ವಾವಲಂಬನೆ, ಸ್ವಾಯತ್ತತೆಯನ್ನು ನಾಶಮಾಡುವ ಆತನ ಸಹಜ ಶಕ್ತಿಯನ್ನು ನಾಶ ಮಾಡಿ ನಿಷ್ಕ್ರಿಯಗೊಳಿಸುವ, ಜನರನ್ನು ಸದಾ ಭಯ ಮತ್ತು ಆತಂಕದಲ್ಲಿ ಇಡುವ ಮೌಢ್ಯವನ್ನು ಬಿತ್ತುತ್ತ ಅಧಿಕಾರ ಮತ್ತು ಆದಾಯದ ಮೂಲಗಳಿಂದ ವಂಚಿಸುವ ಭಾರತದ ಬಹುಜನ ಸಮುದಾಯವನ್ನು ಸೇವಕರನ್ನಾಗಿಸುವ ಧರ್ಮಶಾಸ್ತ್ರ ರಾಷ್ಟ್ರೀಯ ಗ್ರಂಥವಾದರೆ ಭಾರತೀಯತೆಯ, ಪ್ರಜಾಪ್ರಭುತ್ವದ ನಾಶವೇ ಆಗುತ್ತದೆ. ಬೈರಪ್ಪನವರ ಧರ್ಮಶಾಸ್ತ್ರ ಗ್ರಂಥವು ದೈವ ಕೇಂದ್ರಿತವಾದುದೇ ಹೊರತು ಮಾನವ ಕೇಂದ್ರಿತ ಅಲ್ಲ. ನಮ್ಮ ಸಂವಿಧಾನವು ಮನುಷ್ಯನ ಮೂಲಕ ನೋಡುವ ಮಾನವತಾವಾದವನ್ನು ಕಟ್ಟಿಕೊಡುವ ಮೂಲಕ ಮನುಷ್ಯನಿಗೆ ಅಪಾರ ಗೌರವ- ಘನತೆಯನ್ನು ತಂದು ಕೊಟ್ಟಿದೆ. ಅದಕ್ಕಾಗಿಯೇ ಭೈರಪ್ಪ ಮತ್ತು ಭೈರಪ್ಪರಂತ ಮೂಲಭೂತವಾದಿಗಳು ಪರಂಪರೆಯ ಹೆಸರಿನಲ್ಲಿ ಅದನ್ನು ವಿರೋಧಿಸುತ್ತಿದ್ದಾರೆ. ಉಗ್ರ ಮಹಿಳಾ ವಿರೋಧಿಯಾದ ಭೈರಪ್ಪನವರು ಮಹಿಳೆಯ ದೇಹದ ಮೇಲೆ ಪುರುಷಾಧಿಕಾರವನ್ನು ಸ್ಥಾಪಿಸಿದ್ದ ಮನುಸ್ಮೃತಿ ಬೆಂಬಲಿಸುತ್ತಿದ್ದಾರೆ. ಸಂವಿಧಾನವು ಮಹಿಳೆಗೆ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡುವ ಮೂಲಕ ಅವಳಿಗೆ ಗೌರವದ ಬದುಕು ನೀಡಿದೆ. ತಮ್ಮ ಬರಹ ಮತ್ತು ಮಾತಿನ ಮೂಲಕವೇ ಭೈರಪ್ಪನವರು ಮಹಿಳೆಯರನ್ನು ಅವಮಾನಿಸುವ ಮೂಲಕ ಅವಳ ಹಕ್ಕು ಮತ್ತು ಅಧಿಕಾರವನ್ನು ನಿರಾಕರಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...