Homeಅಂಕಣಗಳುಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

ಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

- Advertisement -
- Advertisement -

| ಯಾಹೂ |

ನೋಡಿದ ಕೂಡಲೆ ಅಖಿಲ ಭಾರತ ಮಟ್ಟದ ಮುಠ್ಠಾಳನಂತೆ ಕಾಣುವ ಅಮಿತ್ ಶಾ ಎಂಬ ಭಾಷಾ ಬೃಹಸ್ಪತಿ ಹಿಂದಿ ಭಾಷೆಯನ್ನು ಇಂಡಿಯಾದ ಮೇಲೆ ಹೇರುವ ಮಾತನಾಡಿದ್ದಾನಲ್ಲಾ. ಯಾವ ಭಾಷೆಯೂ ಸರಿಯಾಗಿ ಬರದ ಈತನ ಹಿಂದಿ ಹೇರಿಕೆ ಮಾತಿಗೆ ಕರ್ನಾಟಕದ ಕನ್ನಡ ಸಂಘಗಳು ಜೇನುಗೂಡಿಗೆ ಕಲ್ಲು ಬೀರಿದಂತೆ ರ್ವಯ್ಯನೆ ಬೀದಿಗೆ ಬರುತ್ತವೆಂದು ನಿರೀಕ್ಷಿಸಿದ್ದ ಕನ್ನಡಿಗರಿಗೆ ಆಘಾತವಾಗಿದೆಯಂತಲ್ಲಾ. ಹಾಗಾದರೆ ಎಲ್ಲಿ ಹೋದವು? ಬೆಂಗಳೂರಿನ ಆದಾಯ ಹಂಚಿಕೊಳ್ಳುವಲ್ಲಿ ಹೊಡೆದಾಡಿ ಇಬ್ಬಾಗವಾದ ಬಣಗಳು ಅದ್ಯಾವಾಗ ಉಸಿರೆಳೆದವು ಎಂದು ಹುಡುಕಲಾಗಿ ಅವೆಲ್ಲಾ ಉಂಡ ಉಬ್ಬಸದಲ್ಲಿ ನರಳುತ್ತಿವೆಯೇ ಹೊರತು, ಉಸಿರೆಳೆದಿಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಈ ನಡುವೆ ಬಹುಭಾಷೆ ನಟ ಕಮಲ್‍ಹಾಸನ್ ಶಾ ಎಂಬ ಸುಲ್ತಾನನ ಕರೆಗೆ ಸೆಡ್ಡು ಹೊಡೆದಿರುವುದಲ್ಲದೆ ಮತ್ತೊಮ್ಮೆ ಇಂತಹ ಹೇಳಿಕೆ ಕೊಟ್ಟರೆ ಜಲ್ಲಿಕಲ್ಲು ಬೀರಬೇಕಾಗುತ್ತದೆಂದು ಎಚ್ಚರಿಕೆ ಕೊಟ್ಟಿದ್ದಾರಲ್ಲಾ. ಶಾ ಮಾತಿಗೆ ಹ್ವಟ್ಯಾಳ ನಾಗರಾಜ, ನಾರಾಯಣಗೌಡ, ಪ್ರವೀಣ ಶೆಟ್ಟಿ ತಕ್ಕ ಉತ್ತರ ಕೊಡುತ್ತಾರೆಂದು ಕಾದ ಮುಖ್ಯಮಂತ್ರಿ ಎಡೂರಪ್ಪನವರೆ ಮುಂದಾಗಿ ಕನ್ನಡಪರ ದನಿ ಎತ್ತಿ ಮಯೂರನಂತೆ ಘರ್ಜಿಸಿದ್ದಾರಲ್ಲಾ, ಥೂತ್ತೇರಿ….!

ಯಾರು ಏನೇ ಹೇಳಲಿ ಕನ್ನಡ ಭಾಷೆ ನಶಿಸುತ್ತಿದೆಯಂತಲ್ಲಾ. ಸಿಟಿಗಳಲ್ಲಿನ ನಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಅಕ್ಷರ ಮಾಯವಾಗಿದೆ. ಕರ್ನಾಟಕದ ರಸ್ತೆ ಬದಿಯ ಮೈಲಿ ಕಲ್ಲುಗಳಲ್ಲಿ ಕನ್ನಡ ಮಾಯವಾಗಿದೆ. ಹಳ್ಳಿಗಾಡಿನ ಹೊಟೇಲು ಕೂಡ ತಿಂಡಿ ಚೀಟಿಯನ್ನು ಇಂಗ್ಲಿಷ್‍ನಲ್ಲೇ ಮುದ್ರಿಸಿವೆ. ಬಸ್ಸುಗಳಲ್ಲೂ ಕೂಡ ಸೂಚನಾ ಫಲಕಗಳು ಇಂಗ್ಲಿಷ್‍ನಲ್ಲಿವೆ. ನಮ್ಮ ಅಕ್ಷರಗಳು ಕಣ್ಣಿಂದ ಮರೆಯಾದರೆ, ಮುಂದೆ ಅವನ್ನು ನಾವು ಗುರುತು ಹಿಡಿಯಲಾಗುವುದಿಲ್ಲ. ಇನ್ನ ಕಾನ್ವೆಂಟ್ ಮಕ್ಕಳು ಮನೆಯಲ್ಲಿ ಇಂಗ್ಲಿಷ್ ಕಲಿಯುತ್ತಿದ್ದರೆ ತಂದೆ ತಾಯಿಗಳಿಗೆ ಎಲ್ಲಿಲ್ಲದ ಪುಲಕ. ನಾವು ಬರೆದ ಪುಸ್ತಕ ಲೇಖನವನ್ನ ನಮ್ಮ ಮನೆ ಮಕ್ಕಳೇ ಓದುತ್ತಿಲ್ಲ. ಅದಕ್ಕೆ ಸತ್ತ ಸಾಹಿತಿಯ ಮನೆಯವರು ಆ ಪುಸ್ತಕಗಳನ್ನ ಯಾರಾದರೂ ತೆಗೆದುಕೊಂಡು ಹೋಗಿ ಎಂದು ಬೇಡುತ್ತಿರುವುದು. ಹೀಗೆ ಕನ್ನಡದ ಜೊತೆ ಸಾಹಿತಿಗಳೂ ಕೊನೆಯುಸಿರೆಳೆಯುತ್ತಿರುವ ಸಮಯ ನೋಡಿಯೇ ಅಮಿತ್ ಶಾ ಹಾಗಂದಿರುವುದು. ಅವನ ಮಾತಿಗೆ ನಾರಾಯಣಗೌಡ ಏನು ಹೇಳುತ್ತಾನೆಂದು ಹುಡುಕಿದರೆ, ಆತ ಡಿಕೆಸಿ ಅರೆಸ್ಟಾಗಿರುವುದನ್ನ ಅರಗಿಸಿಕೊಳ್ಳಲಾರದೆ ಅಳುತ್ತಾ ಕೂತಿದ್ದಾನಂತಲ್ಲಾ, ಥೂತ್ತೇರಿ!!

ಅಳಿಯನ ಆತ್ಮಹತ್ಯೆ ಸುದ್ದಿ ಕೇಳಿದಾಗಲೂ ಸಾವಧಾನವಾಗಿ ಎದ್ದ ಎಸ್ಸೆಂ ಕೃಷ್ಣರು ಕನ್ನಡಿ ಮುಂದೆ ನಿಂತು ವಿಗ್ ಧರಿಸಿಕೊಂಡು ತಮ್ಮ ಸೊಗಸಿಗೆ ಚ್ಯುತಿ ಬಾರದಂತೆ ವೇಶ ಧರಿಸಿ ನಡೆದ ದುರಂತವನ್ನು ತಾಳ್ಮೆಯಿಂದ ನಿಭಾಯಿಸಿ, ಅಳುಬುರುಕರ ಮನಗೆದ್ದ ಕೃಷ್ಣ ಸ್ಮಾರ್ಟ್ ಸಿಟಿಗಳು ಹೇಗಿರಬೇಕೆಂದು ಮೋದಿಗೆ ಎರಡು ಪುಟದ ಪತ್ರ ಬರೆದಿದ್ದಾರಂತಲ್ಲಾ. ದುಃಖದಲ್ಲೂ ಸಿಟಿಯನ್ನು ಸೊಗಸಾಗಿ ನಿರ್ಮಿಸುವ ಕನಸು ಕಾಣುತ್ತಿರುವ ಕೃಷ್ಣರು ಮೋದಿಗೆ ಎರಡು ಪುಟದ ಪತ್ರ ಬರೆಯುವ ಬದಲು ಸಿದ್ಧಾರ್ಥನಿಗೆ ಒಂದು ಪುಟದ ಧೈರ್ಯದ ಸಾಲು ಬರೆಯಬಹುದಿತ್ತೆಂಬುದು ಮಂಡ್ಯದ ಮುಗ್ದರ ಸಲಹೆಯಾಗಿದೆಯಲ್ಲಾ

ಏನೆಂದರೆ, “ಸಿದ್ಧಾರ್ಥ ಆದ್ದದ್ದಾಯ್ತು. ನನ್ನ ಸಂಪತ್ತು ಈ ಮೋದಿಯ ನೋಟು ಬ್ಯಾನು, ಜಿಎಸ್‍ಟಿ ಮತ್ತು ಬೇಟೆ ನಾಯಿಗಳಂತಹ ಇನ್‍ಕಮ್ ಟ್ಯಾಕ್ಸ್ ಸಿಬ್ಬಂದಿಯಿಂದ ಮುಳುಗಿಹೋಯ್ತು. ಹೋಗಲಿ ಬಿಡು, ಅದೇನು ನಾನು ಮದ್ದೂರಿನ ಗದ್ದೆ ಹುತ್ತು ಸಂಪಾದಿಸಿದ್ದಲ್ಲ. ನೀನು ಎಲ್ಲವನ್ನು ಮಾರಿ ಸಾಲ ತೀರಿಸಿ ನಿಮ್ಮಪ್ಪನ ಎಸ್ಟೇಟ್ ಉಳಿಸಿಕೊಂಡು ಬದುಕು. ಈ ದೇಶದಲ್ಲಿ ನಿರ್ಗತಿಕರು ಭಿಕ್ಷುಕರು, ಕುಷ್ಟ ರೋಗಿಗಳೂ ಸಹಿತ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಬೇಕಿದ್ದರೆ ನಿನಗೆ ಕಪ್ಪು ಹಣ ಕೊಟ್ಟವರೇ ಮಾಡಿಕೊಳ್ಳಲಿ. ನೀನು ಧೈರ್ಯವಾಗಿ ಬಾ, ಮಾತನಾಡೋಣ” ಎಂದು ಬರೆದಿದ್ದರೆ ಸಿದ್ಧಾರ್ಥ ಮರಳಿ ಬರುತ್ತಿದ್ದರಂತಲ್ಲಾ, ಥೂತ್ತೇರಿ!!

ಮನುಷ್ಯನಿಗೆ ವಯಸ್ಸಾದಂತೆ ಬುದ್ಧಿ ಮಾಗುತ್ತದೆ. ಮಾತಿನಲ್ಲಿ ತೂಕ ಬರುತ್ತದೆ. ಆದರೆ ಸಿದ್ದರಾಮಯ್ಯನ ಎದುರಾಳಿಯಾದ ಈಶ್ವರಪ್ಪನ ಅವತಾರ ನೋಡಿದರೆ ಕುರುಬರು ಹೋಗಲಿ, ಕರ್ನಾಟಕದ ಮಾನವಂತರ ಜೊತೆಗೆ ಸಾಬರೂ ಕೂಡ ಹೆದರುತ್ತಿದ್ದಾರಂತಲ್ಲಾ. ಈತನ ಮಾತು ನೋಡಿದರೆ ನಿಜಕ್ಕೂ ಈಶ್ವರಪ್ಪನೇ ಪಾಕಿಸ್ತಾನಕ್ಕೆ ಯೋಗ್ಯವಾದ ಪ್ರಜೆ. ಅಲ್ಲಿ ಯಾವ ಎಗ್ಗೂ ಇಲ್ಲದೆ ಮತಾಂಧತೆಯ ಮಾತನಾಡಬಹುದು. ಅನ್ಯ ಧರ್ಮೀಯರನ್ನ ಹೀಯಾಳಿಸಬಹುದು. ತನ್ನ ಮಾತಿನ ಪರಿಣಾಮ ಗ್ರಹಿಸಿ ವೈದ್ಯರಲ್ಲಿಗೆ ಹೋಗುವುದರ ಬದಲು ತಾನು ಕೆಲಸ ಮಾಡುವ ಪಾರ್ಟಿ ಆಫೀಸಿಗೆ ಹೋಗಬಹುದು. ಆದ್ದರಿಂದ ಈಶ್ವರಪ್ಪ ಪಾಕೀಸ್ತಾನಕ್ಕೆ ಹೋಗಿ ನೆಲೆಸಲು ಬಹುಯೋಗ್ಯವಾದ ಪ್ರಜೆ ಎಂದು ಇಸ್ಮಾಯಿಲ್ ಖಾನ್ ಹೇಳುತ್ತಿದ್ದಾರಂತಲ್ಲಾ. ಶಿವಮೊಗ್ಗದ ದುರಂತ ನೋಡಿ, ಅಲ್ಲಿ ಈಗ ಪ್ರಖ್ಯಾತ ಮನೋವೈದ್ಯರಿಲ್ಲ. ಅಶೋಕ್ ಪೈ ಇದ್ದಿದ್ದರೆ ಈಶ್ವರಪ್ಪನ ಮೆದುಳು ಮತ್ತು ನಾಲಿಗೆ ನಡುವೆ ಒಂದು ನಿಷ್‍ತಂತು ಅಂಗವನ್ನು ಅಳವಡಿಸಿ ಮಾತಿಗೆ ಮಿತಿಯಿರುವಂತೆ, ತೂಕ ಬರುವಂತೆ ಮಾಡಬಹುದಿತ್ತು. ಆದರೆ ಎಲ್ಲವೂ ಕೈಮೀರಿ ಹೋಗಿದೆ. ಇವತ್ತು ಮುಸ್ಲಿಮರ ಮೇಲೆ ಕೆರಳಿರುವ ಈಶ್ವರಿ, ಮುಂದೆ ದಲಿತರು, ಅಲೆಮಾರಿಗಳು ಮತ್ತೂ ತಿರುಗಿಬಿದ್ದು ಸಾದ ಲಿಂಗಾಯಿತರ ಮೇಲೆ ಎಗರಬಹುದು. ಒಟ್ಟಿನಲ್ಲಿ ಪರಿಸ್ಥಿತಿ ಗಂಭೀರವಾಗಿದೆಯಂತಲ್ಲಾ, ಥೂತ್ತೇರಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...