Homeಅಂಕಣಗಳುಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

ಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

- Advertisement -
- Advertisement -

| ಯಾಹೂ |

ನೋಡಿದ ಕೂಡಲೆ ಅಖಿಲ ಭಾರತ ಮಟ್ಟದ ಮುಠ್ಠಾಳನಂತೆ ಕಾಣುವ ಅಮಿತ್ ಶಾ ಎಂಬ ಭಾಷಾ ಬೃಹಸ್ಪತಿ ಹಿಂದಿ ಭಾಷೆಯನ್ನು ಇಂಡಿಯಾದ ಮೇಲೆ ಹೇರುವ ಮಾತನಾಡಿದ್ದಾನಲ್ಲಾ. ಯಾವ ಭಾಷೆಯೂ ಸರಿಯಾಗಿ ಬರದ ಈತನ ಹಿಂದಿ ಹೇರಿಕೆ ಮಾತಿಗೆ ಕರ್ನಾಟಕದ ಕನ್ನಡ ಸಂಘಗಳು ಜೇನುಗೂಡಿಗೆ ಕಲ್ಲು ಬೀರಿದಂತೆ ರ್ವಯ್ಯನೆ ಬೀದಿಗೆ ಬರುತ್ತವೆಂದು ನಿರೀಕ್ಷಿಸಿದ್ದ ಕನ್ನಡಿಗರಿಗೆ ಆಘಾತವಾಗಿದೆಯಂತಲ್ಲಾ. ಹಾಗಾದರೆ ಎಲ್ಲಿ ಹೋದವು? ಬೆಂಗಳೂರಿನ ಆದಾಯ ಹಂಚಿಕೊಳ್ಳುವಲ್ಲಿ ಹೊಡೆದಾಡಿ ಇಬ್ಬಾಗವಾದ ಬಣಗಳು ಅದ್ಯಾವಾಗ ಉಸಿರೆಳೆದವು ಎಂದು ಹುಡುಕಲಾಗಿ ಅವೆಲ್ಲಾ ಉಂಡ ಉಬ್ಬಸದಲ್ಲಿ ನರಳುತ್ತಿವೆಯೇ ಹೊರತು, ಉಸಿರೆಳೆದಿಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಈ ನಡುವೆ ಬಹುಭಾಷೆ ನಟ ಕಮಲ್‍ಹಾಸನ್ ಶಾ ಎಂಬ ಸುಲ್ತಾನನ ಕರೆಗೆ ಸೆಡ್ಡು ಹೊಡೆದಿರುವುದಲ್ಲದೆ ಮತ್ತೊಮ್ಮೆ ಇಂತಹ ಹೇಳಿಕೆ ಕೊಟ್ಟರೆ ಜಲ್ಲಿಕಲ್ಲು ಬೀರಬೇಕಾಗುತ್ತದೆಂದು ಎಚ್ಚರಿಕೆ ಕೊಟ್ಟಿದ್ದಾರಲ್ಲಾ. ಶಾ ಮಾತಿಗೆ ಹ್ವಟ್ಯಾಳ ನಾಗರಾಜ, ನಾರಾಯಣಗೌಡ, ಪ್ರವೀಣ ಶೆಟ್ಟಿ ತಕ್ಕ ಉತ್ತರ ಕೊಡುತ್ತಾರೆಂದು ಕಾದ ಮುಖ್ಯಮಂತ್ರಿ ಎಡೂರಪ್ಪನವರೆ ಮುಂದಾಗಿ ಕನ್ನಡಪರ ದನಿ ಎತ್ತಿ ಮಯೂರನಂತೆ ಘರ್ಜಿಸಿದ್ದಾರಲ್ಲಾ, ಥೂತ್ತೇರಿ….!

ಯಾರು ಏನೇ ಹೇಳಲಿ ಕನ್ನಡ ಭಾಷೆ ನಶಿಸುತ್ತಿದೆಯಂತಲ್ಲಾ. ಸಿಟಿಗಳಲ್ಲಿನ ನಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಅಕ್ಷರ ಮಾಯವಾಗಿದೆ. ಕರ್ನಾಟಕದ ರಸ್ತೆ ಬದಿಯ ಮೈಲಿ ಕಲ್ಲುಗಳಲ್ಲಿ ಕನ್ನಡ ಮಾಯವಾಗಿದೆ. ಹಳ್ಳಿಗಾಡಿನ ಹೊಟೇಲು ಕೂಡ ತಿಂಡಿ ಚೀಟಿಯನ್ನು ಇಂಗ್ಲಿಷ್‍ನಲ್ಲೇ ಮುದ್ರಿಸಿವೆ. ಬಸ್ಸುಗಳಲ್ಲೂ ಕೂಡ ಸೂಚನಾ ಫಲಕಗಳು ಇಂಗ್ಲಿಷ್‍ನಲ್ಲಿವೆ. ನಮ್ಮ ಅಕ್ಷರಗಳು ಕಣ್ಣಿಂದ ಮರೆಯಾದರೆ, ಮುಂದೆ ಅವನ್ನು ನಾವು ಗುರುತು ಹಿಡಿಯಲಾಗುವುದಿಲ್ಲ. ಇನ್ನ ಕಾನ್ವೆಂಟ್ ಮಕ್ಕಳು ಮನೆಯಲ್ಲಿ ಇಂಗ್ಲಿಷ್ ಕಲಿಯುತ್ತಿದ್ದರೆ ತಂದೆ ತಾಯಿಗಳಿಗೆ ಎಲ್ಲಿಲ್ಲದ ಪುಲಕ. ನಾವು ಬರೆದ ಪುಸ್ತಕ ಲೇಖನವನ್ನ ನಮ್ಮ ಮನೆ ಮಕ್ಕಳೇ ಓದುತ್ತಿಲ್ಲ. ಅದಕ್ಕೆ ಸತ್ತ ಸಾಹಿತಿಯ ಮನೆಯವರು ಆ ಪುಸ್ತಕಗಳನ್ನ ಯಾರಾದರೂ ತೆಗೆದುಕೊಂಡು ಹೋಗಿ ಎಂದು ಬೇಡುತ್ತಿರುವುದು. ಹೀಗೆ ಕನ್ನಡದ ಜೊತೆ ಸಾಹಿತಿಗಳೂ ಕೊನೆಯುಸಿರೆಳೆಯುತ್ತಿರುವ ಸಮಯ ನೋಡಿಯೇ ಅಮಿತ್ ಶಾ ಹಾಗಂದಿರುವುದು. ಅವನ ಮಾತಿಗೆ ನಾರಾಯಣಗೌಡ ಏನು ಹೇಳುತ್ತಾನೆಂದು ಹುಡುಕಿದರೆ, ಆತ ಡಿಕೆಸಿ ಅರೆಸ್ಟಾಗಿರುವುದನ್ನ ಅರಗಿಸಿಕೊಳ್ಳಲಾರದೆ ಅಳುತ್ತಾ ಕೂತಿದ್ದಾನಂತಲ್ಲಾ, ಥೂತ್ತೇರಿ!!

ಅಳಿಯನ ಆತ್ಮಹತ್ಯೆ ಸುದ್ದಿ ಕೇಳಿದಾಗಲೂ ಸಾವಧಾನವಾಗಿ ಎದ್ದ ಎಸ್ಸೆಂ ಕೃಷ್ಣರು ಕನ್ನಡಿ ಮುಂದೆ ನಿಂತು ವಿಗ್ ಧರಿಸಿಕೊಂಡು ತಮ್ಮ ಸೊಗಸಿಗೆ ಚ್ಯುತಿ ಬಾರದಂತೆ ವೇಶ ಧರಿಸಿ ನಡೆದ ದುರಂತವನ್ನು ತಾಳ್ಮೆಯಿಂದ ನಿಭಾಯಿಸಿ, ಅಳುಬುರುಕರ ಮನಗೆದ್ದ ಕೃಷ್ಣ ಸ್ಮಾರ್ಟ್ ಸಿಟಿಗಳು ಹೇಗಿರಬೇಕೆಂದು ಮೋದಿಗೆ ಎರಡು ಪುಟದ ಪತ್ರ ಬರೆದಿದ್ದಾರಂತಲ್ಲಾ. ದುಃಖದಲ್ಲೂ ಸಿಟಿಯನ್ನು ಸೊಗಸಾಗಿ ನಿರ್ಮಿಸುವ ಕನಸು ಕಾಣುತ್ತಿರುವ ಕೃಷ್ಣರು ಮೋದಿಗೆ ಎರಡು ಪುಟದ ಪತ್ರ ಬರೆಯುವ ಬದಲು ಸಿದ್ಧಾರ್ಥನಿಗೆ ಒಂದು ಪುಟದ ಧೈರ್ಯದ ಸಾಲು ಬರೆಯಬಹುದಿತ್ತೆಂಬುದು ಮಂಡ್ಯದ ಮುಗ್ದರ ಸಲಹೆಯಾಗಿದೆಯಲ್ಲಾ

ಏನೆಂದರೆ, “ಸಿದ್ಧಾರ್ಥ ಆದ್ದದ್ದಾಯ್ತು. ನನ್ನ ಸಂಪತ್ತು ಈ ಮೋದಿಯ ನೋಟು ಬ್ಯಾನು, ಜಿಎಸ್‍ಟಿ ಮತ್ತು ಬೇಟೆ ನಾಯಿಗಳಂತಹ ಇನ್‍ಕಮ್ ಟ್ಯಾಕ್ಸ್ ಸಿಬ್ಬಂದಿಯಿಂದ ಮುಳುಗಿಹೋಯ್ತು. ಹೋಗಲಿ ಬಿಡು, ಅದೇನು ನಾನು ಮದ್ದೂರಿನ ಗದ್ದೆ ಹುತ್ತು ಸಂಪಾದಿಸಿದ್ದಲ್ಲ. ನೀನು ಎಲ್ಲವನ್ನು ಮಾರಿ ಸಾಲ ತೀರಿಸಿ ನಿಮ್ಮಪ್ಪನ ಎಸ್ಟೇಟ್ ಉಳಿಸಿಕೊಂಡು ಬದುಕು. ಈ ದೇಶದಲ್ಲಿ ನಿರ್ಗತಿಕರು ಭಿಕ್ಷುಕರು, ಕುಷ್ಟ ರೋಗಿಗಳೂ ಸಹಿತ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಬೇಕಿದ್ದರೆ ನಿನಗೆ ಕಪ್ಪು ಹಣ ಕೊಟ್ಟವರೇ ಮಾಡಿಕೊಳ್ಳಲಿ. ನೀನು ಧೈರ್ಯವಾಗಿ ಬಾ, ಮಾತನಾಡೋಣ” ಎಂದು ಬರೆದಿದ್ದರೆ ಸಿದ್ಧಾರ್ಥ ಮರಳಿ ಬರುತ್ತಿದ್ದರಂತಲ್ಲಾ, ಥೂತ್ತೇರಿ!!

ಮನುಷ್ಯನಿಗೆ ವಯಸ್ಸಾದಂತೆ ಬುದ್ಧಿ ಮಾಗುತ್ತದೆ. ಮಾತಿನಲ್ಲಿ ತೂಕ ಬರುತ್ತದೆ. ಆದರೆ ಸಿದ್ದರಾಮಯ್ಯನ ಎದುರಾಳಿಯಾದ ಈಶ್ವರಪ್ಪನ ಅವತಾರ ನೋಡಿದರೆ ಕುರುಬರು ಹೋಗಲಿ, ಕರ್ನಾಟಕದ ಮಾನವಂತರ ಜೊತೆಗೆ ಸಾಬರೂ ಕೂಡ ಹೆದರುತ್ತಿದ್ದಾರಂತಲ್ಲಾ. ಈತನ ಮಾತು ನೋಡಿದರೆ ನಿಜಕ್ಕೂ ಈಶ್ವರಪ್ಪನೇ ಪಾಕಿಸ್ತಾನಕ್ಕೆ ಯೋಗ್ಯವಾದ ಪ್ರಜೆ. ಅಲ್ಲಿ ಯಾವ ಎಗ್ಗೂ ಇಲ್ಲದೆ ಮತಾಂಧತೆಯ ಮಾತನಾಡಬಹುದು. ಅನ್ಯ ಧರ್ಮೀಯರನ್ನ ಹೀಯಾಳಿಸಬಹುದು. ತನ್ನ ಮಾತಿನ ಪರಿಣಾಮ ಗ್ರಹಿಸಿ ವೈದ್ಯರಲ್ಲಿಗೆ ಹೋಗುವುದರ ಬದಲು ತಾನು ಕೆಲಸ ಮಾಡುವ ಪಾರ್ಟಿ ಆಫೀಸಿಗೆ ಹೋಗಬಹುದು. ಆದ್ದರಿಂದ ಈಶ್ವರಪ್ಪ ಪಾಕೀಸ್ತಾನಕ್ಕೆ ಹೋಗಿ ನೆಲೆಸಲು ಬಹುಯೋಗ್ಯವಾದ ಪ್ರಜೆ ಎಂದು ಇಸ್ಮಾಯಿಲ್ ಖಾನ್ ಹೇಳುತ್ತಿದ್ದಾರಂತಲ್ಲಾ. ಶಿವಮೊಗ್ಗದ ದುರಂತ ನೋಡಿ, ಅಲ್ಲಿ ಈಗ ಪ್ರಖ್ಯಾತ ಮನೋವೈದ್ಯರಿಲ್ಲ. ಅಶೋಕ್ ಪೈ ಇದ್ದಿದ್ದರೆ ಈಶ್ವರಪ್ಪನ ಮೆದುಳು ಮತ್ತು ನಾಲಿಗೆ ನಡುವೆ ಒಂದು ನಿಷ್‍ತಂತು ಅಂಗವನ್ನು ಅಳವಡಿಸಿ ಮಾತಿಗೆ ಮಿತಿಯಿರುವಂತೆ, ತೂಕ ಬರುವಂತೆ ಮಾಡಬಹುದಿತ್ತು. ಆದರೆ ಎಲ್ಲವೂ ಕೈಮೀರಿ ಹೋಗಿದೆ. ಇವತ್ತು ಮುಸ್ಲಿಮರ ಮೇಲೆ ಕೆರಳಿರುವ ಈಶ್ವರಿ, ಮುಂದೆ ದಲಿತರು, ಅಲೆಮಾರಿಗಳು ಮತ್ತೂ ತಿರುಗಿಬಿದ್ದು ಸಾದ ಲಿಂಗಾಯಿತರ ಮೇಲೆ ಎಗರಬಹುದು. ಒಟ್ಟಿನಲ್ಲಿ ಪರಿಸ್ಥಿತಿ ಗಂಭೀರವಾಗಿದೆಯಂತಲ್ಲಾ, ಥೂತ್ತೇರಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...