Homeಅಂಕಣಗಳುಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

ಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

- Advertisement -
- Advertisement -

| ಯಾಹೂ |

ನೋಡಿದ ಕೂಡಲೆ ಅಖಿಲ ಭಾರತ ಮಟ್ಟದ ಮುಠ್ಠಾಳನಂತೆ ಕಾಣುವ ಅಮಿತ್ ಶಾ ಎಂಬ ಭಾಷಾ ಬೃಹಸ್ಪತಿ ಹಿಂದಿ ಭಾಷೆಯನ್ನು ಇಂಡಿಯಾದ ಮೇಲೆ ಹೇರುವ ಮಾತನಾಡಿದ್ದಾನಲ್ಲಾ. ಯಾವ ಭಾಷೆಯೂ ಸರಿಯಾಗಿ ಬರದ ಈತನ ಹಿಂದಿ ಹೇರಿಕೆ ಮಾತಿಗೆ ಕರ್ನಾಟಕದ ಕನ್ನಡ ಸಂಘಗಳು ಜೇನುಗೂಡಿಗೆ ಕಲ್ಲು ಬೀರಿದಂತೆ ರ್ವಯ್ಯನೆ ಬೀದಿಗೆ ಬರುತ್ತವೆಂದು ನಿರೀಕ್ಷಿಸಿದ್ದ ಕನ್ನಡಿಗರಿಗೆ ಆಘಾತವಾಗಿದೆಯಂತಲ್ಲಾ. ಹಾಗಾದರೆ ಎಲ್ಲಿ ಹೋದವು? ಬೆಂಗಳೂರಿನ ಆದಾಯ ಹಂಚಿಕೊಳ್ಳುವಲ್ಲಿ ಹೊಡೆದಾಡಿ ಇಬ್ಬಾಗವಾದ ಬಣಗಳು ಅದ್ಯಾವಾಗ ಉಸಿರೆಳೆದವು ಎಂದು ಹುಡುಕಲಾಗಿ ಅವೆಲ್ಲಾ ಉಂಡ ಉಬ್ಬಸದಲ್ಲಿ ನರಳುತ್ತಿವೆಯೇ ಹೊರತು, ಉಸಿರೆಳೆದಿಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಈ ನಡುವೆ ಬಹುಭಾಷೆ ನಟ ಕಮಲ್‍ಹಾಸನ್ ಶಾ ಎಂಬ ಸುಲ್ತಾನನ ಕರೆಗೆ ಸೆಡ್ಡು ಹೊಡೆದಿರುವುದಲ್ಲದೆ ಮತ್ತೊಮ್ಮೆ ಇಂತಹ ಹೇಳಿಕೆ ಕೊಟ್ಟರೆ ಜಲ್ಲಿಕಲ್ಲು ಬೀರಬೇಕಾಗುತ್ತದೆಂದು ಎಚ್ಚರಿಕೆ ಕೊಟ್ಟಿದ್ದಾರಲ್ಲಾ. ಶಾ ಮಾತಿಗೆ ಹ್ವಟ್ಯಾಳ ನಾಗರಾಜ, ನಾರಾಯಣಗೌಡ, ಪ್ರವೀಣ ಶೆಟ್ಟಿ ತಕ್ಕ ಉತ್ತರ ಕೊಡುತ್ತಾರೆಂದು ಕಾದ ಮುಖ್ಯಮಂತ್ರಿ ಎಡೂರಪ್ಪನವರೆ ಮುಂದಾಗಿ ಕನ್ನಡಪರ ದನಿ ಎತ್ತಿ ಮಯೂರನಂತೆ ಘರ್ಜಿಸಿದ್ದಾರಲ್ಲಾ, ಥೂತ್ತೇರಿ….!

ಯಾರು ಏನೇ ಹೇಳಲಿ ಕನ್ನಡ ಭಾಷೆ ನಶಿಸುತ್ತಿದೆಯಂತಲ್ಲಾ. ಸಿಟಿಗಳಲ್ಲಿನ ನಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಅಕ್ಷರ ಮಾಯವಾಗಿದೆ. ಕರ್ನಾಟಕದ ರಸ್ತೆ ಬದಿಯ ಮೈಲಿ ಕಲ್ಲುಗಳಲ್ಲಿ ಕನ್ನಡ ಮಾಯವಾಗಿದೆ. ಹಳ್ಳಿಗಾಡಿನ ಹೊಟೇಲು ಕೂಡ ತಿಂಡಿ ಚೀಟಿಯನ್ನು ಇಂಗ್ಲಿಷ್‍ನಲ್ಲೇ ಮುದ್ರಿಸಿವೆ. ಬಸ್ಸುಗಳಲ್ಲೂ ಕೂಡ ಸೂಚನಾ ಫಲಕಗಳು ಇಂಗ್ಲಿಷ್‍ನಲ್ಲಿವೆ. ನಮ್ಮ ಅಕ್ಷರಗಳು ಕಣ್ಣಿಂದ ಮರೆಯಾದರೆ, ಮುಂದೆ ಅವನ್ನು ನಾವು ಗುರುತು ಹಿಡಿಯಲಾಗುವುದಿಲ್ಲ. ಇನ್ನ ಕಾನ್ವೆಂಟ್ ಮಕ್ಕಳು ಮನೆಯಲ್ಲಿ ಇಂಗ್ಲಿಷ್ ಕಲಿಯುತ್ತಿದ್ದರೆ ತಂದೆ ತಾಯಿಗಳಿಗೆ ಎಲ್ಲಿಲ್ಲದ ಪುಲಕ. ನಾವು ಬರೆದ ಪುಸ್ತಕ ಲೇಖನವನ್ನ ನಮ್ಮ ಮನೆ ಮಕ್ಕಳೇ ಓದುತ್ತಿಲ್ಲ. ಅದಕ್ಕೆ ಸತ್ತ ಸಾಹಿತಿಯ ಮನೆಯವರು ಆ ಪುಸ್ತಕಗಳನ್ನ ಯಾರಾದರೂ ತೆಗೆದುಕೊಂಡು ಹೋಗಿ ಎಂದು ಬೇಡುತ್ತಿರುವುದು. ಹೀಗೆ ಕನ್ನಡದ ಜೊತೆ ಸಾಹಿತಿಗಳೂ ಕೊನೆಯುಸಿರೆಳೆಯುತ್ತಿರುವ ಸಮಯ ನೋಡಿಯೇ ಅಮಿತ್ ಶಾ ಹಾಗಂದಿರುವುದು. ಅವನ ಮಾತಿಗೆ ನಾರಾಯಣಗೌಡ ಏನು ಹೇಳುತ್ತಾನೆಂದು ಹುಡುಕಿದರೆ, ಆತ ಡಿಕೆಸಿ ಅರೆಸ್ಟಾಗಿರುವುದನ್ನ ಅರಗಿಸಿಕೊಳ್ಳಲಾರದೆ ಅಳುತ್ತಾ ಕೂತಿದ್ದಾನಂತಲ್ಲಾ, ಥೂತ್ತೇರಿ!!

ಅಳಿಯನ ಆತ್ಮಹತ್ಯೆ ಸುದ್ದಿ ಕೇಳಿದಾಗಲೂ ಸಾವಧಾನವಾಗಿ ಎದ್ದ ಎಸ್ಸೆಂ ಕೃಷ್ಣರು ಕನ್ನಡಿ ಮುಂದೆ ನಿಂತು ವಿಗ್ ಧರಿಸಿಕೊಂಡು ತಮ್ಮ ಸೊಗಸಿಗೆ ಚ್ಯುತಿ ಬಾರದಂತೆ ವೇಶ ಧರಿಸಿ ನಡೆದ ದುರಂತವನ್ನು ತಾಳ್ಮೆಯಿಂದ ನಿಭಾಯಿಸಿ, ಅಳುಬುರುಕರ ಮನಗೆದ್ದ ಕೃಷ್ಣ ಸ್ಮಾರ್ಟ್ ಸಿಟಿಗಳು ಹೇಗಿರಬೇಕೆಂದು ಮೋದಿಗೆ ಎರಡು ಪುಟದ ಪತ್ರ ಬರೆದಿದ್ದಾರಂತಲ್ಲಾ. ದುಃಖದಲ್ಲೂ ಸಿಟಿಯನ್ನು ಸೊಗಸಾಗಿ ನಿರ್ಮಿಸುವ ಕನಸು ಕಾಣುತ್ತಿರುವ ಕೃಷ್ಣರು ಮೋದಿಗೆ ಎರಡು ಪುಟದ ಪತ್ರ ಬರೆಯುವ ಬದಲು ಸಿದ್ಧಾರ್ಥನಿಗೆ ಒಂದು ಪುಟದ ಧೈರ್ಯದ ಸಾಲು ಬರೆಯಬಹುದಿತ್ತೆಂಬುದು ಮಂಡ್ಯದ ಮುಗ್ದರ ಸಲಹೆಯಾಗಿದೆಯಲ್ಲಾ

ಏನೆಂದರೆ, “ಸಿದ್ಧಾರ್ಥ ಆದ್ದದ್ದಾಯ್ತು. ನನ್ನ ಸಂಪತ್ತು ಈ ಮೋದಿಯ ನೋಟು ಬ್ಯಾನು, ಜಿಎಸ್‍ಟಿ ಮತ್ತು ಬೇಟೆ ನಾಯಿಗಳಂತಹ ಇನ್‍ಕಮ್ ಟ್ಯಾಕ್ಸ್ ಸಿಬ್ಬಂದಿಯಿಂದ ಮುಳುಗಿಹೋಯ್ತು. ಹೋಗಲಿ ಬಿಡು, ಅದೇನು ನಾನು ಮದ್ದೂರಿನ ಗದ್ದೆ ಹುತ್ತು ಸಂಪಾದಿಸಿದ್ದಲ್ಲ. ನೀನು ಎಲ್ಲವನ್ನು ಮಾರಿ ಸಾಲ ತೀರಿಸಿ ನಿಮ್ಮಪ್ಪನ ಎಸ್ಟೇಟ್ ಉಳಿಸಿಕೊಂಡು ಬದುಕು. ಈ ದೇಶದಲ್ಲಿ ನಿರ್ಗತಿಕರು ಭಿಕ್ಷುಕರು, ಕುಷ್ಟ ರೋಗಿಗಳೂ ಸಹಿತ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಬೇಕಿದ್ದರೆ ನಿನಗೆ ಕಪ್ಪು ಹಣ ಕೊಟ್ಟವರೇ ಮಾಡಿಕೊಳ್ಳಲಿ. ನೀನು ಧೈರ್ಯವಾಗಿ ಬಾ, ಮಾತನಾಡೋಣ” ಎಂದು ಬರೆದಿದ್ದರೆ ಸಿದ್ಧಾರ್ಥ ಮರಳಿ ಬರುತ್ತಿದ್ದರಂತಲ್ಲಾ, ಥೂತ್ತೇರಿ!!

ಮನುಷ್ಯನಿಗೆ ವಯಸ್ಸಾದಂತೆ ಬುದ್ಧಿ ಮಾಗುತ್ತದೆ. ಮಾತಿನಲ್ಲಿ ತೂಕ ಬರುತ್ತದೆ. ಆದರೆ ಸಿದ್ದರಾಮಯ್ಯನ ಎದುರಾಳಿಯಾದ ಈಶ್ವರಪ್ಪನ ಅವತಾರ ನೋಡಿದರೆ ಕುರುಬರು ಹೋಗಲಿ, ಕರ್ನಾಟಕದ ಮಾನವಂತರ ಜೊತೆಗೆ ಸಾಬರೂ ಕೂಡ ಹೆದರುತ್ತಿದ್ದಾರಂತಲ್ಲಾ. ಈತನ ಮಾತು ನೋಡಿದರೆ ನಿಜಕ್ಕೂ ಈಶ್ವರಪ್ಪನೇ ಪಾಕಿಸ್ತಾನಕ್ಕೆ ಯೋಗ್ಯವಾದ ಪ್ರಜೆ. ಅಲ್ಲಿ ಯಾವ ಎಗ್ಗೂ ಇಲ್ಲದೆ ಮತಾಂಧತೆಯ ಮಾತನಾಡಬಹುದು. ಅನ್ಯ ಧರ್ಮೀಯರನ್ನ ಹೀಯಾಳಿಸಬಹುದು. ತನ್ನ ಮಾತಿನ ಪರಿಣಾಮ ಗ್ರಹಿಸಿ ವೈದ್ಯರಲ್ಲಿಗೆ ಹೋಗುವುದರ ಬದಲು ತಾನು ಕೆಲಸ ಮಾಡುವ ಪಾರ್ಟಿ ಆಫೀಸಿಗೆ ಹೋಗಬಹುದು. ಆದ್ದರಿಂದ ಈಶ್ವರಪ್ಪ ಪಾಕೀಸ್ತಾನಕ್ಕೆ ಹೋಗಿ ನೆಲೆಸಲು ಬಹುಯೋಗ್ಯವಾದ ಪ್ರಜೆ ಎಂದು ಇಸ್ಮಾಯಿಲ್ ಖಾನ್ ಹೇಳುತ್ತಿದ್ದಾರಂತಲ್ಲಾ. ಶಿವಮೊಗ್ಗದ ದುರಂತ ನೋಡಿ, ಅಲ್ಲಿ ಈಗ ಪ್ರಖ್ಯಾತ ಮನೋವೈದ್ಯರಿಲ್ಲ. ಅಶೋಕ್ ಪೈ ಇದ್ದಿದ್ದರೆ ಈಶ್ವರಪ್ಪನ ಮೆದುಳು ಮತ್ತು ನಾಲಿಗೆ ನಡುವೆ ಒಂದು ನಿಷ್‍ತಂತು ಅಂಗವನ್ನು ಅಳವಡಿಸಿ ಮಾತಿಗೆ ಮಿತಿಯಿರುವಂತೆ, ತೂಕ ಬರುವಂತೆ ಮಾಡಬಹುದಿತ್ತು. ಆದರೆ ಎಲ್ಲವೂ ಕೈಮೀರಿ ಹೋಗಿದೆ. ಇವತ್ತು ಮುಸ್ಲಿಮರ ಮೇಲೆ ಕೆರಳಿರುವ ಈಶ್ವರಿ, ಮುಂದೆ ದಲಿತರು, ಅಲೆಮಾರಿಗಳು ಮತ್ತೂ ತಿರುಗಿಬಿದ್ದು ಸಾದ ಲಿಂಗಾಯಿತರ ಮೇಲೆ ಎಗರಬಹುದು. ಒಟ್ಟಿನಲ್ಲಿ ಪರಿಸ್ಥಿತಿ ಗಂಭೀರವಾಗಿದೆಯಂತಲ್ಲಾ, ಥೂತ್ತೇರಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...