Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...