Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...