Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...