Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...