Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...