Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...