Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....