Homeಮುಖಪುಟ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

- Advertisement -
- Advertisement -

ಇಂದು ಗುಂಪು ಹತ್ಯೆ, ಆಹಾರದ ಹಕ್ಕಿನ ಮೇಲೆ ದಾಳಿ, ಮತಾಂಧತೆ, ದೇಶದ್ರೋಹ ಕಾನೂನಿನ ದುರ್ಬಳಕೆಯಾಗುತ್ತಿದೆ. ಹಾಗಾಗಿ ನಾನು ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ಇದು ಪ್ರತಿಭಟನೆಯಲ್ಲ ದೇಶದ ಇಂದಿನ ಪರಿಸ್ಥಿತಿಗೆ ನಾವು ಅನುಭವಿಸುತ್ತಿರುವ ವ್ಯಥೆಯಾಗಿದೆ ಎಂದು ಹೇಳಿರುವ ಅವರ ಪತ್ರ ಇಲ್ಲಿದೆ.

ನಾನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸುವುದಿಲ್ಲ, ಏಕೆಂದರೆ?

“ಸಂಗೀತ ನಾಟಕ ಅಕಾಡೆಮಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ತಾನು ಶುರುವಾದಂದಿನಿಂದಲೂ ತನ್ನ ಸ್ವಾಯತ್ತತೆಯನ್ನು ಬಹಳಮಟ್ಟಿಗೆ ಕಾಪಾಡಿಕೊಂಡು ಬಂದಿದೆ. ಅಂಥ ಅಕಾಡೆಮಿಯು 2018ರ ಇಸವಿಯ ತನ್ನ ಪ್ರಶಸ್ತಿಯನ್ನು, ಬೇರೆ ಹಲವರಿಗೆ ನೀಡುವುದರೊಂದಿಗೆ, ನನಗೂ ನೀಡಿದ್ದಕ್ಕಾಗಿ ಅಕಾಡೆಮಿಗೆ ಕೃತಜ್ಞನಾಗಿದ್ದೇನೆ.

ಆದರೆ, ಈವತ್ತು ದೇಶದ ಹಲವು ಕಡೆ, ಮತ ಧರ್ಮದ ಹೆಸರಿನಲ್ಲಿ, ಪೊರೆಯುವ ದೇವರ ಹೆಸರಿನಲ್ಲಿ, ತಿನ್ನುವ ಆಹಾರದ ಹೆಸರಿನಲ್ಲಿ ಗುಂಪುಹಲ್ಲೆಗಳು, ಕಗ್ಗೊಲೆಗಳು ನಡೆಯುತ್ತಿವೆ. ಅಧಿಕಾರದಲ್ಲಿರುವವರು ಇಂಥ ಭೀಕರ ಹಿಂಸಾಚಾರ ಮತ್ತು ಕಗ್ಗೊಲೆಗಳಿಗೆ ಕಾರಣವಾದ ದ್ವೇಷವನ್ನು ಅಂತರಜಾಲ ತಂತ್ರಜ್ಞಾನದ ಎಲ್ಲ ಪಟ್ಟುಗಳನ್ನು ಬಳಸಿ ಜನರ ಮನಸ್ಸಿನಲ್ಲಿ ತುಂಬುತ್ತಿದ್ದಾರೆ. ಶಿಕ್ಷಣದ ಅತ್ಯುನ್ನತ ಸಂಸ್ಥೆಗಳಿಂದ ಮೊದಲುಗೊಂಡು ಕೆಳಮಟ್ಟದ ಶಾಲಾ ಕಾಲೇಜುಗಳವರೆಗೆ, ಎಲ್ಲೆಡೆಯೂ, ಮತಾಂಧತೆಯಿಂದ ಕೂಡಿದ ಪಾಠಗಳನ್ನು, ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗಳಲ್ಲಿ ತುಂಬುವ ಪ್ರಯತ್ನಗಳು ನಡೆಯುತ್ತಿದೆ. ಭಾರತೀಯತೆಯ, ವಸುಧೈವ ಕುಟುಂಬಮ್ ಅನ್ನುವುದರ ಅರ್ಥವನ್ನೇ ತಿರುಚಲಾಗುತ್ತಿದೆ. ಆದರೆ, ಸಂಕರವೇ ಶಿವವಲ್ಲವೇ?  ‘ಅಯ್ಯೋ, ನನ್ನ ದೇಶವೇ’ ಎಂದು ನನ್ನಂಥ ಕೋಟ್ಯಂತರ ಜನರು ಹಲುಬುವಂತಾಗಿದೆ.

ಭಾರತ ಮತ್ತು ವಿಶಾಲ ಜಗತ್ತುಗಳ ಭವಿಷ್ಯವನ್ನು ರೂಪಿಸಬೇಕಾಗಿರುವ ಕನ್ಹಯ್ಯಾಕುಮಾರ್ ಅಂಥ ಯುವಕರು ಹಲವರ ಮೇಲೆ, ಅವರು ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾಗಲೇ, ದೇಶದ್ರೋಹದ ಆರೋಪವನ್ನು  ಹೊರಿಸಲಾಗಿದ್ದು, ಅವರು ನ್ಯಾಯಾಲಯಗಳಲ್ಲಿ ಆ ಪ್ರಕರಣವನ್ನು ಇನ್ನೂ ಎದುರಿಸುತ್ತಲೇ ಇದ್ದಾರೆ. ದೇಶದ ಅತ್ಯಂತ ಶೋಷಿತರು ಮತ್ತು ದಲಿತ ಜನರ ಪರವಾಗಿ ಕೋರ್ಟು-ಕಚೇರಿಗಳಲ್ಲಿ ವಾದಿಸುತ್ತ, ಅವರ ಅಪಾರ ಕಷ್ಟಗಳನ್ನು ಕುರಿತು ಲೇಖನ ಮತ್ತು ಪುಸ್ತಕಗಳನ್ನು ಬರೆಯುತ್ತ, ಅವರ ಹೋರಾಟವು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಸಲಹೆ-ಸಹಕಾರ ನೀಡುತ್ತ, ಭಾರತದ ಸಂವಿಧಾನದ ಎಲ್ಲ ವಿಧಿವಿಧಾನಗಳನ್ನು ಪಾಲಿಸುತ್ತ, ಆ ನಮ್ಮ ಸಂವಿಧಾನದ ಜೀವಾಳವನ್ನು ಎತ್ತಿಹಿಡಿಯುತ್ತ, ನಿಸ್ಪೃಹೆಯಿಂದ, ತಮ್ಮತಮ್ಮದೇ ರೀತಿಯಲ್ಲಿ ಹೋರಾಡುತ್ತ ಬಂದಿರುವ ಹಲವರ ವಿರುದ್ಧ ಯುಎಪಿಎ ಕಾಯಿದೆಯಡಿ ವಿಚಾರಣೆ ನಡೆಯುತ್ತಿದ್ದು, ಅವರಲ್ಲಿ ಹೆಚ್ಚಿನವರು  ಜಾಮೀನು ಕೂಡ ಸಿಕ್ಕದೆ ಸೆರೆಮನೆಯಲ್ಲಿದ್ದಾರೆ. ದೇಶದ ಅತ್ಯಂತ ದಮನಿತರ ದನಿಯಾಗಿರುವವರು ಈ ಧೀಮಂತರು, ಧೀಮಂತೆಯರು. ಇಂಥವರನ್ನು ನಿರ್ವೀರ್ಯಗೊಳಿಸಿ, ಇವರ ಬಾಯಿಮುಚ್ಚಿಸಿದರೆ ಆ ದಮನಿತರ ದನಿಯನ್ನು ಅಷ್ಟರಮಟ್ಟಿಗೆ ಅಡಗಿಸಬಹುದು ಎಂದು ಪ್ರಭುತ್ವವು ನಿರ್ಧರಿಸಿದಂತಿದೆ. ಇದೆಲ್ಲ ಹೊಸದಲ್ಲ; ಈಹಿಂದೆ ಅಧಿಕಾರದಲ್ಲಿದ್ದವರು ಕೂಡ ಹೀಗೆಯೇ ಪ್ರಭುತ್ವದ ಶಕ್ತಿಯ ದುರ್ವಿನಿಯೋಗ ಮಾಡಿದ್ದಾರೆ.

ನಿಜವಾದ ದೇಶಪ್ರೇಮಿಗಳು, ಲೋಕೋಪಕಾರಿಗಳು, ಧರ್ಮ ಮಾರ್ಗಿಗಳು ಆಗಿರುವ, ಮತ್ತು ಸಕಲ ಚರಾಚರಕ್ಕೆ ಲೇಸನ್ನೇ ಬಯಸುತ್ತ, ಲೇಸನ್ನೇ ಉಂಟುಮಾಡಲು ಬದುಕುತ್ತಿರುವ ಇಂಥವರಿಗೆ ನನ್ನ ದೇಶದಲ್ಲಿ ಹೀಗೆ ಅನ್ಯಾಯವಾಗುತ್ತಿರುವಾಗ, ರಂಗಭೂಮಿಯ ಕಲಾವಿದನಾಗಿ, ಕವಿ-ನಾಟಕಕಾರನಾಗಿ, ಈ ದೇಶ ಮತ್ತು ಲೋಕದ ಪ್ರಜೆಯಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸಲಾರೆ. ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ, ಅಂತರ್ಯಾಮಿ ಒಪ್ಪದು.

ಇದು ಪ್ರತಿಭಟನೆಯಲ್ಲ; ವ್ಯಥೆ; ಪ್ರಶಸ್ತಿಯನ್ನು ಸ್ವೀಕರಿಸಲು ಬಿಡದಿರುವ ಅಸಹಾಯಕತೆ. ಅಕಾಡೆಮಿಯ ಬಗ್ಗೆ ನನಗೆ ಗೌರವವಿದೆ; ಮತ್ತು, ಈಗ ಮತ್ತು ಈಹಿಂದೆ ಇಂಥ ಪ್ರಶಸ್ತಿ ಪಡೆದ ನನ್ನೆಲ್ಲ ಸಹೋದ್ಯೋಗಿಗಳ ಬಗ್ಗೆ ಗೌರವವಿದೆ. ಅಕಾಡೆಮಿಯ ಸದಸ್ಯರಿಗೆ,  ಮತ್ತೊಮ್ಮೆ, ಕೃತಜ್ಞತೆಗಳು. ಅವರ ಕ್ಷಮೆ ಬೇಡುತ್ತಿದ್ದೇನೆ.”

ಶಿವಕಾರುಣ್ಯವಿರಲಿ.

ಎಸ್. ರಘುನಂದನ

17 ಜುಲೈ 2019

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...