Homeಮುಖಪುಟ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

- Advertisement -
- Advertisement -

ಇಂದು ಗುಂಪು ಹತ್ಯೆ, ಆಹಾರದ ಹಕ್ಕಿನ ಮೇಲೆ ದಾಳಿ, ಮತಾಂಧತೆ, ದೇಶದ್ರೋಹ ಕಾನೂನಿನ ದುರ್ಬಳಕೆಯಾಗುತ್ತಿದೆ. ಹಾಗಾಗಿ ನಾನು ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ಇದು ಪ್ರತಿಭಟನೆಯಲ್ಲ ದೇಶದ ಇಂದಿನ ಪರಿಸ್ಥಿತಿಗೆ ನಾವು ಅನುಭವಿಸುತ್ತಿರುವ ವ್ಯಥೆಯಾಗಿದೆ ಎಂದು ಹೇಳಿರುವ ಅವರ ಪತ್ರ ಇಲ್ಲಿದೆ.

ನಾನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸುವುದಿಲ್ಲ, ಏಕೆಂದರೆ?

“ಸಂಗೀತ ನಾಟಕ ಅಕಾಡೆಮಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ತಾನು ಶುರುವಾದಂದಿನಿಂದಲೂ ತನ್ನ ಸ್ವಾಯತ್ತತೆಯನ್ನು ಬಹಳಮಟ್ಟಿಗೆ ಕಾಪಾಡಿಕೊಂಡು ಬಂದಿದೆ. ಅಂಥ ಅಕಾಡೆಮಿಯು 2018ರ ಇಸವಿಯ ತನ್ನ ಪ್ರಶಸ್ತಿಯನ್ನು, ಬೇರೆ ಹಲವರಿಗೆ ನೀಡುವುದರೊಂದಿಗೆ, ನನಗೂ ನೀಡಿದ್ದಕ್ಕಾಗಿ ಅಕಾಡೆಮಿಗೆ ಕೃತಜ್ಞನಾಗಿದ್ದೇನೆ.

ಆದರೆ, ಈವತ್ತು ದೇಶದ ಹಲವು ಕಡೆ, ಮತ ಧರ್ಮದ ಹೆಸರಿನಲ್ಲಿ, ಪೊರೆಯುವ ದೇವರ ಹೆಸರಿನಲ್ಲಿ, ತಿನ್ನುವ ಆಹಾರದ ಹೆಸರಿನಲ್ಲಿ ಗುಂಪುಹಲ್ಲೆಗಳು, ಕಗ್ಗೊಲೆಗಳು ನಡೆಯುತ್ತಿವೆ. ಅಧಿಕಾರದಲ್ಲಿರುವವರು ಇಂಥ ಭೀಕರ ಹಿಂಸಾಚಾರ ಮತ್ತು ಕಗ್ಗೊಲೆಗಳಿಗೆ ಕಾರಣವಾದ ದ್ವೇಷವನ್ನು ಅಂತರಜಾಲ ತಂತ್ರಜ್ಞಾನದ ಎಲ್ಲ ಪಟ್ಟುಗಳನ್ನು ಬಳಸಿ ಜನರ ಮನಸ್ಸಿನಲ್ಲಿ ತುಂಬುತ್ತಿದ್ದಾರೆ. ಶಿಕ್ಷಣದ ಅತ್ಯುನ್ನತ ಸಂಸ್ಥೆಗಳಿಂದ ಮೊದಲುಗೊಂಡು ಕೆಳಮಟ್ಟದ ಶಾಲಾ ಕಾಲೇಜುಗಳವರೆಗೆ, ಎಲ್ಲೆಡೆಯೂ, ಮತಾಂಧತೆಯಿಂದ ಕೂಡಿದ ಪಾಠಗಳನ್ನು, ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗಳಲ್ಲಿ ತುಂಬುವ ಪ್ರಯತ್ನಗಳು ನಡೆಯುತ್ತಿದೆ. ಭಾರತೀಯತೆಯ, ವಸುಧೈವ ಕುಟುಂಬಮ್ ಅನ್ನುವುದರ ಅರ್ಥವನ್ನೇ ತಿರುಚಲಾಗುತ್ತಿದೆ. ಆದರೆ, ಸಂಕರವೇ ಶಿವವಲ್ಲವೇ?  ‘ಅಯ್ಯೋ, ನನ್ನ ದೇಶವೇ’ ಎಂದು ನನ್ನಂಥ ಕೋಟ್ಯಂತರ ಜನರು ಹಲುಬುವಂತಾಗಿದೆ.

ಭಾರತ ಮತ್ತು ವಿಶಾಲ ಜಗತ್ತುಗಳ ಭವಿಷ್ಯವನ್ನು ರೂಪಿಸಬೇಕಾಗಿರುವ ಕನ್ಹಯ್ಯಾಕುಮಾರ್ ಅಂಥ ಯುವಕರು ಹಲವರ ಮೇಲೆ, ಅವರು ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾಗಲೇ, ದೇಶದ್ರೋಹದ ಆರೋಪವನ್ನು  ಹೊರಿಸಲಾಗಿದ್ದು, ಅವರು ನ್ಯಾಯಾಲಯಗಳಲ್ಲಿ ಆ ಪ್ರಕರಣವನ್ನು ಇನ್ನೂ ಎದುರಿಸುತ್ತಲೇ ಇದ್ದಾರೆ. ದೇಶದ ಅತ್ಯಂತ ಶೋಷಿತರು ಮತ್ತು ದಲಿತ ಜನರ ಪರವಾಗಿ ಕೋರ್ಟು-ಕಚೇರಿಗಳಲ್ಲಿ ವಾದಿಸುತ್ತ, ಅವರ ಅಪಾರ ಕಷ್ಟಗಳನ್ನು ಕುರಿತು ಲೇಖನ ಮತ್ತು ಪುಸ್ತಕಗಳನ್ನು ಬರೆಯುತ್ತ, ಅವರ ಹೋರಾಟವು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಸಲಹೆ-ಸಹಕಾರ ನೀಡುತ್ತ, ಭಾರತದ ಸಂವಿಧಾನದ ಎಲ್ಲ ವಿಧಿವಿಧಾನಗಳನ್ನು ಪಾಲಿಸುತ್ತ, ಆ ನಮ್ಮ ಸಂವಿಧಾನದ ಜೀವಾಳವನ್ನು ಎತ್ತಿಹಿಡಿಯುತ್ತ, ನಿಸ್ಪೃಹೆಯಿಂದ, ತಮ್ಮತಮ್ಮದೇ ರೀತಿಯಲ್ಲಿ ಹೋರಾಡುತ್ತ ಬಂದಿರುವ ಹಲವರ ವಿರುದ್ಧ ಯುಎಪಿಎ ಕಾಯಿದೆಯಡಿ ವಿಚಾರಣೆ ನಡೆಯುತ್ತಿದ್ದು, ಅವರಲ್ಲಿ ಹೆಚ್ಚಿನವರು  ಜಾಮೀನು ಕೂಡ ಸಿಕ್ಕದೆ ಸೆರೆಮನೆಯಲ್ಲಿದ್ದಾರೆ. ದೇಶದ ಅತ್ಯಂತ ದಮನಿತರ ದನಿಯಾಗಿರುವವರು ಈ ಧೀಮಂತರು, ಧೀಮಂತೆಯರು. ಇಂಥವರನ್ನು ನಿರ್ವೀರ್ಯಗೊಳಿಸಿ, ಇವರ ಬಾಯಿಮುಚ್ಚಿಸಿದರೆ ಆ ದಮನಿತರ ದನಿಯನ್ನು ಅಷ್ಟರಮಟ್ಟಿಗೆ ಅಡಗಿಸಬಹುದು ಎಂದು ಪ್ರಭುತ್ವವು ನಿರ್ಧರಿಸಿದಂತಿದೆ. ಇದೆಲ್ಲ ಹೊಸದಲ್ಲ; ಈಹಿಂದೆ ಅಧಿಕಾರದಲ್ಲಿದ್ದವರು ಕೂಡ ಹೀಗೆಯೇ ಪ್ರಭುತ್ವದ ಶಕ್ತಿಯ ದುರ್ವಿನಿಯೋಗ ಮಾಡಿದ್ದಾರೆ.

ನಿಜವಾದ ದೇಶಪ್ರೇಮಿಗಳು, ಲೋಕೋಪಕಾರಿಗಳು, ಧರ್ಮ ಮಾರ್ಗಿಗಳು ಆಗಿರುವ, ಮತ್ತು ಸಕಲ ಚರಾಚರಕ್ಕೆ ಲೇಸನ್ನೇ ಬಯಸುತ್ತ, ಲೇಸನ್ನೇ ಉಂಟುಮಾಡಲು ಬದುಕುತ್ತಿರುವ ಇಂಥವರಿಗೆ ನನ್ನ ದೇಶದಲ್ಲಿ ಹೀಗೆ ಅನ್ಯಾಯವಾಗುತ್ತಿರುವಾಗ, ರಂಗಭೂಮಿಯ ಕಲಾವಿದನಾಗಿ, ಕವಿ-ನಾಟಕಕಾರನಾಗಿ, ಈ ದೇಶ ಮತ್ತು ಲೋಕದ ಪ್ರಜೆಯಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸಲಾರೆ. ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ, ಅಂತರ್ಯಾಮಿ ಒಪ್ಪದು.

ಇದು ಪ್ರತಿಭಟನೆಯಲ್ಲ; ವ್ಯಥೆ; ಪ್ರಶಸ್ತಿಯನ್ನು ಸ್ವೀಕರಿಸಲು ಬಿಡದಿರುವ ಅಸಹಾಯಕತೆ. ಅಕಾಡೆಮಿಯ ಬಗ್ಗೆ ನನಗೆ ಗೌರವವಿದೆ; ಮತ್ತು, ಈಗ ಮತ್ತು ಈಹಿಂದೆ ಇಂಥ ಪ್ರಶಸ್ತಿ ಪಡೆದ ನನ್ನೆಲ್ಲ ಸಹೋದ್ಯೋಗಿಗಳ ಬಗ್ಗೆ ಗೌರವವಿದೆ. ಅಕಾಡೆಮಿಯ ಸದಸ್ಯರಿಗೆ,  ಮತ್ತೊಮ್ಮೆ, ಕೃತಜ್ಞತೆಗಳು. ಅವರ ಕ್ಷಮೆ ಬೇಡುತ್ತಿದ್ದೇನೆ.”

ಶಿವಕಾರುಣ್ಯವಿರಲಿ.

ಎಸ್. ರಘುನಂದನ

17 ಜುಲೈ 2019

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...