Homeಮುಖಪುಟ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

- Advertisement -
- Advertisement -

ಇಂದು ಗುಂಪು ಹತ್ಯೆ, ಆಹಾರದ ಹಕ್ಕಿನ ಮೇಲೆ ದಾಳಿ, ಮತಾಂಧತೆ, ದೇಶದ್ರೋಹ ಕಾನೂನಿನ ದುರ್ಬಳಕೆಯಾಗುತ್ತಿದೆ. ಹಾಗಾಗಿ ನಾನು ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ಇದು ಪ್ರತಿಭಟನೆಯಲ್ಲ ದೇಶದ ಇಂದಿನ ಪರಿಸ್ಥಿತಿಗೆ ನಾವು ಅನುಭವಿಸುತ್ತಿರುವ ವ್ಯಥೆಯಾಗಿದೆ ಎಂದು ಹೇಳಿರುವ ಅವರ ಪತ್ರ ಇಲ್ಲಿದೆ.

ನಾನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸುವುದಿಲ್ಲ, ಏಕೆಂದರೆ?

“ಸಂಗೀತ ನಾಟಕ ಅಕಾಡೆಮಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ತಾನು ಶುರುವಾದಂದಿನಿಂದಲೂ ತನ್ನ ಸ್ವಾಯತ್ತತೆಯನ್ನು ಬಹಳಮಟ್ಟಿಗೆ ಕಾಪಾಡಿಕೊಂಡು ಬಂದಿದೆ. ಅಂಥ ಅಕಾಡೆಮಿಯು 2018ರ ಇಸವಿಯ ತನ್ನ ಪ್ರಶಸ್ತಿಯನ್ನು, ಬೇರೆ ಹಲವರಿಗೆ ನೀಡುವುದರೊಂದಿಗೆ, ನನಗೂ ನೀಡಿದ್ದಕ್ಕಾಗಿ ಅಕಾಡೆಮಿಗೆ ಕೃತಜ್ಞನಾಗಿದ್ದೇನೆ.

ಆದರೆ, ಈವತ್ತು ದೇಶದ ಹಲವು ಕಡೆ, ಮತ ಧರ್ಮದ ಹೆಸರಿನಲ್ಲಿ, ಪೊರೆಯುವ ದೇವರ ಹೆಸರಿನಲ್ಲಿ, ತಿನ್ನುವ ಆಹಾರದ ಹೆಸರಿನಲ್ಲಿ ಗುಂಪುಹಲ್ಲೆಗಳು, ಕಗ್ಗೊಲೆಗಳು ನಡೆಯುತ್ತಿವೆ. ಅಧಿಕಾರದಲ್ಲಿರುವವರು ಇಂಥ ಭೀಕರ ಹಿಂಸಾಚಾರ ಮತ್ತು ಕಗ್ಗೊಲೆಗಳಿಗೆ ಕಾರಣವಾದ ದ್ವೇಷವನ್ನು ಅಂತರಜಾಲ ತಂತ್ರಜ್ಞಾನದ ಎಲ್ಲ ಪಟ್ಟುಗಳನ್ನು ಬಳಸಿ ಜನರ ಮನಸ್ಸಿನಲ್ಲಿ ತುಂಬುತ್ತಿದ್ದಾರೆ. ಶಿಕ್ಷಣದ ಅತ್ಯುನ್ನತ ಸಂಸ್ಥೆಗಳಿಂದ ಮೊದಲುಗೊಂಡು ಕೆಳಮಟ್ಟದ ಶಾಲಾ ಕಾಲೇಜುಗಳವರೆಗೆ, ಎಲ್ಲೆಡೆಯೂ, ಮತಾಂಧತೆಯಿಂದ ಕೂಡಿದ ಪಾಠಗಳನ್ನು, ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗಳಲ್ಲಿ ತುಂಬುವ ಪ್ರಯತ್ನಗಳು ನಡೆಯುತ್ತಿದೆ. ಭಾರತೀಯತೆಯ, ವಸುಧೈವ ಕುಟುಂಬಮ್ ಅನ್ನುವುದರ ಅರ್ಥವನ್ನೇ ತಿರುಚಲಾಗುತ್ತಿದೆ. ಆದರೆ, ಸಂಕರವೇ ಶಿವವಲ್ಲವೇ?  ‘ಅಯ್ಯೋ, ನನ್ನ ದೇಶವೇ’ ಎಂದು ನನ್ನಂಥ ಕೋಟ್ಯಂತರ ಜನರು ಹಲುಬುವಂತಾಗಿದೆ.

ಭಾರತ ಮತ್ತು ವಿಶಾಲ ಜಗತ್ತುಗಳ ಭವಿಷ್ಯವನ್ನು ರೂಪಿಸಬೇಕಾಗಿರುವ ಕನ್ಹಯ್ಯಾಕುಮಾರ್ ಅಂಥ ಯುವಕರು ಹಲವರ ಮೇಲೆ, ಅವರು ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾಗಲೇ, ದೇಶದ್ರೋಹದ ಆರೋಪವನ್ನು  ಹೊರಿಸಲಾಗಿದ್ದು, ಅವರು ನ್ಯಾಯಾಲಯಗಳಲ್ಲಿ ಆ ಪ್ರಕರಣವನ್ನು ಇನ್ನೂ ಎದುರಿಸುತ್ತಲೇ ಇದ್ದಾರೆ. ದೇಶದ ಅತ್ಯಂತ ಶೋಷಿತರು ಮತ್ತು ದಲಿತ ಜನರ ಪರವಾಗಿ ಕೋರ್ಟು-ಕಚೇರಿಗಳಲ್ಲಿ ವಾದಿಸುತ್ತ, ಅವರ ಅಪಾರ ಕಷ್ಟಗಳನ್ನು ಕುರಿತು ಲೇಖನ ಮತ್ತು ಪುಸ್ತಕಗಳನ್ನು ಬರೆಯುತ್ತ, ಅವರ ಹೋರಾಟವು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಸಲಹೆ-ಸಹಕಾರ ನೀಡುತ್ತ, ಭಾರತದ ಸಂವಿಧಾನದ ಎಲ್ಲ ವಿಧಿವಿಧಾನಗಳನ್ನು ಪಾಲಿಸುತ್ತ, ಆ ನಮ್ಮ ಸಂವಿಧಾನದ ಜೀವಾಳವನ್ನು ಎತ್ತಿಹಿಡಿಯುತ್ತ, ನಿಸ್ಪೃಹೆಯಿಂದ, ತಮ್ಮತಮ್ಮದೇ ರೀತಿಯಲ್ಲಿ ಹೋರಾಡುತ್ತ ಬಂದಿರುವ ಹಲವರ ವಿರುದ್ಧ ಯುಎಪಿಎ ಕಾಯಿದೆಯಡಿ ವಿಚಾರಣೆ ನಡೆಯುತ್ತಿದ್ದು, ಅವರಲ್ಲಿ ಹೆಚ್ಚಿನವರು  ಜಾಮೀನು ಕೂಡ ಸಿಕ್ಕದೆ ಸೆರೆಮನೆಯಲ್ಲಿದ್ದಾರೆ. ದೇಶದ ಅತ್ಯಂತ ದಮನಿತರ ದನಿಯಾಗಿರುವವರು ಈ ಧೀಮಂತರು, ಧೀಮಂತೆಯರು. ಇಂಥವರನ್ನು ನಿರ್ವೀರ್ಯಗೊಳಿಸಿ, ಇವರ ಬಾಯಿಮುಚ್ಚಿಸಿದರೆ ಆ ದಮನಿತರ ದನಿಯನ್ನು ಅಷ್ಟರಮಟ್ಟಿಗೆ ಅಡಗಿಸಬಹುದು ಎಂದು ಪ್ರಭುತ್ವವು ನಿರ್ಧರಿಸಿದಂತಿದೆ. ಇದೆಲ್ಲ ಹೊಸದಲ್ಲ; ಈಹಿಂದೆ ಅಧಿಕಾರದಲ್ಲಿದ್ದವರು ಕೂಡ ಹೀಗೆಯೇ ಪ್ರಭುತ್ವದ ಶಕ್ತಿಯ ದುರ್ವಿನಿಯೋಗ ಮಾಡಿದ್ದಾರೆ.

ನಿಜವಾದ ದೇಶಪ್ರೇಮಿಗಳು, ಲೋಕೋಪಕಾರಿಗಳು, ಧರ್ಮ ಮಾರ್ಗಿಗಳು ಆಗಿರುವ, ಮತ್ತು ಸಕಲ ಚರಾಚರಕ್ಕೆ ಲೇಸನ್ನೇ ಬಯಸುತ್ತ, ಲೇಸನ್ನೇ ಉಂಟುಮಾಡಲು ಬದುಕುತ್ತಿರುವ ಇಂಥವರಿಗೆ ನನ್ನ ದೇಶದಲ್ಲಿ ಹೀಗೆ ಅನ್ಯಾಯವಾಗುತ್ತಿರುವಾಗ, ರಂಗಭೂಮಿಯ ಕಲಾವಿದನಾಗಿ, ಕವಿ-ನಾಟಕಕಾರನಾಗಿ, ಈ ದೇಶ ಮತ್ತು ಲೋಕದ ಪ್ರಜೆಯಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸಲಾರೆ. ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ, ಅಂತರ್ಯಾಮಿ ಒಪ್ಪದು.

ಇದು ಪ್ರತಿಭಟನೆಯಲ್ಲ; ವ್ಯಥೆ; ಪ್ರಶಸ್ತಿಯನ್ನು ಸ್ವೀಕರಿಸಲು ಬಿಡದಿರುವ ಅಸಹಾಯಕತೆ. ಅಕಾಡೆಮಿಯ ಬಗ್ಗೆ ನನಗೆ ಗೌರವವಿದೆ; ಮತ್ತು, ಈಗ ಮತ್ತು ಈಹಿಂದೆ ಇಂಥ ಪ್ರಶಸ್ತಿ ಪಡೆದ ನನ್ನೆಲ್ಲ ಸಹೋದ್ಯೋಗಿಗಳ ಬಗ್ಗೆ ಗೌರವವಿದೆ. ಅಕಾಡೆಮಿಯ ಸದಸ್ಯರಿಗೆ,  ಮತ್ತೊಮ್ಮೆ, ಕೃತಜ್ಞತೆಗಳು. ಅವರ ಕ್ಷಮೆ ಬೇಡುತ್ತಿದ್ದೇನೆ.”

ಶಿವಕಾರುಣ್ಯವಿರಲಿ.

ಎಸ್. ರಘುನಂದನ

17 ಜುಲೈ 2019

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...