Homeಮುಖಪುಟ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

- Advertisement -
- Advertisement -

ಇಂದು ಗುಂಪು ಹತ್ಯೆ, ಆಹಾರದ ಹಕ್ಕಿನ ಮೇಲೆ ದಾಳಿ, ಮತಾಂಧತೆ, ದೇಶದ್ರೋಹ ಕಾನೂನಿನ ದುರ್ಬಳಕೆಯಾಗುತ್ತಿದೆ. ಹಾಗಾಗಿ ನಾನು ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ಇದು ಪ್ರತಿಭಟನೆಯಲ್ಲ ದೇಶದ ಇಂದಿನ ಪರಿಸ್ಥಿತಿಗೆ ನಾವು ಅನುಭವಿಸುತ್ತಿರುವ ವ್ಯಥೆಯಾಗಿದೆ ಎಂದು ಹೇಳಿರುವ ಅವರ ಪತ್ರ ಇಲ್ಲಿದೆ.

ನಾನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸುವುದಿಲ್ಲ, ಏಕೆಂದರೆ?

“ಸಂಗೀತ ನಾಟಕ ಅಕಾಡೆಮಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ತಾನು ಶುರುವಾದಂದಿನಿಂದಲೂ ತನ್ನ ಸ್ವಾಯತ್ತತೆಯನ್ನು ಬಹಳಮಟ್ಟಿಗೆ ಕಾಪಾಡಿಕೊಂಡು ಬಂದಿದೆ. ಅಂಥ ಅಕಾಡೆಮಿಯು 2018ರ ಇಸವಿಯ ತನ್ನ ಪ್ರಶಸ್ತಿಯನ್ನು, ಬೇರೆ ಹಲವರಿಗೆ ನೀಡುವುದರೊಂದಿಗೆ, ನನಗೂ ನೀಡಿದ್ದಕ್ಕಾಗಿ ಅಕಾಡೆಮಿಗೆ ಕೃತಜ್ಞನಾಗಿದ್ದೇನೆ.

ಆದರೆ, ಈವತ್ತು ದೇಶದ ಹಲವು ಕಡೆ, ಮತ ಧರ್ಮದ ಹೆಸರಿನಲ್ಲಿ, ಪೊರೆಯುವ ದೇವರ ಹೆಸರಿನಲ್ಲಿ, ತಿನ್ನುವ ಆಹಾರದ ಹೆಸರಿನಲ್ಲಿ ಗುಂಪುಹಲ್ಲೆಗಳು, ಕಗ್ಗೊಲೆಗಳು ನಡೆಯುತ್ತಿವೆ. ಅಧಿಕಾರದಲ್ಲಿರುವವರು ಇಂಥ ಭೀಕರ ಹಿಂಸಾಚಾರ ಮತ್ತು ಕಗ್ಗೊಲೆಗಳಿಗೆ ಕಾರಣವಾದ ದ್ವೇಷವನ್ನು ಅಂತರಜಾಲ ತಂತ್ರಜ್ಞಾನದ ಎಲ್ಲ ಪಟ್ಟುಗಳನ್ನು ಬಳಸಿ ಜನರ ಮನಸ್ಸಿನಲ್ಲಿ ತುಂಬುತ್ತಿದ್ದಾರೆ. ಶಿಕ್ಷಣದ ಅತ್ಯುನ್ನತ ಸಂಸ್ಥೆಗಳಿಂದ ಮೊದಲುಗೊಂಡು ಕೆಳಮಟ್ಟದ ಶಾಲಾ ಕಾಲೇಜುಗಳವರೆಗೆ, ಎಲ್ಲೆಡೆಯೂ, ಮತಾಂಧತೆಯಿಂದ ಕೂಡಿದ ಪಾಠಗಳನ್ನು, ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗಳಲ್ಲಿ ತುಂಬುವ ಪ್ರಯತ್ನಗಳು ನಡೆಯುತ್ತಿದೆ. ಭಾರತೀಯತೆಯ, ವಸುಧೈವ ಕುಟುಂಬಮ್ ಅನ್ನುವುದರ ಅರ್ಥವನ್ನೇ ತಿರುಚಲಾಗುತ್ತಿದೆ. ಆದರೆ, ಸಂಕರವೇ ಶಿವವಲ್ಲವೇ?  ‘ಅಯ್ಯೋ, ನನ್ನ ದೇಶವೇ’ ಎಂದು ನನ್ನಂಥ ಕೋಟ್ಯಂತರ ಜನರು ಹಲುಬುವಂತಾಗಿದೆ.

ಭಾರತ ಮತ್ತು ವಿಶಾಲ ಜಗತ್ತುಗಳ ಭವಿಷ್ಯವನ್ನು ರೂಪಿಸಬೇಕಾಗಿರುವ ಕನ್ಹಯ್ಯಾಕುಮಾರ್ ಅಂಥ ಯುವಕರು ಹಲವರ ಮೇಲೆ, ಅವರು ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾಗಲೇ, ದೇಶದ್ರೋಹದ ಆರೋಪವನ್ನು  ಹೊರಿಸಲಾಗಿದ್ದು, ಅವರು ನ್ಯಾಯಾಲಯಗಳಲ್ಲಿ ಆ ಪ್ರಕರಣವನ್ನು ಇನ್ನೂ ಎದುರಿಸುತ್ತಲೇ ಇದ್ದಾರೆ. ದೇಶದ ಅತ್ಯಂತ ಶೋಷಿತರು ಮತ್ತು ದಲಿತ ಜನರ ಪರವಾಗಿ ಕೋರ್ಟು-ಕಚೇರಿಗಳಲ್ಲಿ ವಾದಿಸುತ್ತ, ಅವರ ಅಪಾರ ಕಷ್ಟಗಳನ್ನು ಕುರಿತು ಲೇಖನ ಮತ್ತು ಪುಸ್ತಕಗಳನ್ನು ಬರೆಯುತ್ತ, ಅವರ ಹೋರಾಟವು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಸಲಹೆ-ಸಹಕಾರ ನೀಡುತ್ತ, ಭಾರತದ ಸಂವಿಧಾನದ ಎಲ್ಲ ವಿಧಿವಿಧಾನಗಳನ್ನು ಪಾಲಿಸುತ್ತ, ಆ ನಮ್ಮ ಸಂವಿಧಾನದ ಜೀವಾಳವನ್ನು ಎತ್ತಿಹಿಡಿಯುತ್ತ, ನಿಸ್ಪೃಹೆಯಿಂದ, ತಮ್ಮತಮ್ಮದೇ ರೀತಿಯಲ್ಲಿ ಹೋರಾಡುತ್ತ ಬಂದಿರುವ ಹಲವರ ವಿರುದ್ಧ ಯುಎಪಿಎ ಕಾಯಿದೆಯಡಿ ವಿಚಾರಣೆ ನಡೆಯುತ್ತಿದ್ದು, ಅವರಲ್ಲಿ ಹೆಚ್ಚಿನವರು  ಜಾಮೀನು ಕೂಡ ಸಿಕ್ಕದೆ ಸೆರೆಮನೆಯಲ್ಲಿದ್ದಾರೆ. ದೇಶದ ಅತ್ಯಂತ ದಮನಿತರ ದನಿಯಾಗಿರುವವರು ಈ ಧೀಮಂತರು, ಧೀಮಂತೆಯರು. ಇಂಥವರನ್ನು ನಿರ್ವೀರ್ಯಗೊಳಿಸಿ, ಇವರ ಬಾಯಿಮುಚ್ಚಿಸಿದರೆ ಆ ದಮನಿತರ ದನಿಯನ್ನು ಅಷ್ಟರಮಟ್ಟಿಗೆ ಅಡಗಿಸಬಹುದು ಎಂದು ಪ್ರಭುತ್ವವು ನಿರ್ಧರಿಸಿದಂತಿದೆ. ಇದೆಲ್ಲ ಹೊಸದಲ್ಲ; ಈಹಿಂದೆ ಅಧಿಕಾರದಲ್ಲಿದ್ದವರು ಕೂಡ ಹೀಗೆಯೇ ಪ್ರಭುತ್ವದ ಶಕ್ತಿಯ ದುರ್ವಿನಿಯೋಗ ಮಾಡಿದ್ದಾರೆ.

ನಿಜವಾದ ದೇಶಪ್ರೇಮಿಗಳು, ಲೋಕೋಪಕಾರಿಗಳು, ಧರ್ಮ ಮಾರ್ಗಿಗಳು ಆಗಿರುವ, ಮತ್ತು ಸಕಲ ಚರಾಚರಕ್ಕೆ ಲೇಸನ್ನೇ ಬಯಸುತ್ತ, ಲೇಸನ್ನೇ ಉಂಟುಮಾಡಲು ಬದುಕುತ್ತಿರುವ ಇಂಥವರಿಗೆ ನನ್ನ ದೇಶದಲ್ಲಿ ಹೀಗೆ ಅನ್ಯಾಯವಾಗುತ್ತಿರುವಾಗ, ರಂಗಭೂಮಿಯ ಕಲಾವಿದನಾಗಿ, ಕವಿ-ನಾಟಕಕಾರನಾಗಿ, ಈ ದೇಶ ಮತ್ತು ಲೋಕದ ಪ್ರಜೆಯಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸಲಾರೆ. ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ, ಅಂತರ್ಯಾಮಿ ಒಪ್ಪದು.

ಇದು ಪ್ರತಿಭಟನೆಯಲ್ಲ; ವ್ಯಥೆ; ಪ್ರಶಸ್ತಿಯನ್ನು ಸ್ವೀಕರಿಸಲು ಬಿಡದಿರುವ ಅಸಹಾಯಕತೆ. ಅಕಾಡೆಮಿಯ ಬಗ್ಗೆ ನನಗೆ ಗೌರವವಿದೆ; ಮತ್ತು, ಈಗ ಮತ್ತು ಈಹಿಂದೆ ಇಂಥ ಪ್ರಶಸ್ತಿ ಪಡೆದ ನನ್ನೆಲ್ಲ ಸಹೋದ್ಯೋಗಿಗಳ ಬಗ್ಗೆ ಗೌರವವಿದೆ. ಅಕಾಡೆಮಿಯ ಸದಸ್ಯರಿಗೆ,  ಮತ್ತೊಮ್ಮೆ, ಕೃತಜ್ಞತೆಗಳು. ಅವರ ಕ್ಷಮೆ ಬೇಡುತ್ತಿದ್ದೇನೆ.”

ಶಿವಕಾರುಣ್ಯವಿರಲಿ.

ಎಸ್. ರಘುನಂದನ

17 ಜುಲೈ 2019

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...