Homeಮುಖಪುಟ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

- Advertisement -
- Advertisement -

ಇಂದು ಗುಂಪು ಹತ್ಯೆ, ಆಹಾರದ ಹಕ್ಕಿನ ಮೇಲೆ ದಾಳಿ, ಮತಾಂಧತೆ, ದೇಶದ್ರೋಹ ಕಾನೂನಿನ ದುರ್ಬಳಕೆಯಾಗುತ್ತಿದೆ. ಹಾಗಾಗಿ ನಾನು ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ಇದು ಪ್ರತಿಭಟನೆಯಲ್ಲ ದೇಶದ ಇಂದಿನ ಪರಿಸ್ಥಿತಿಗೆ ನಾವು ಅನುಭವಿಸುತ್ತಿರುವ ವ್ಯಥೆಯಾಗಿದೆ ಎಂದು ಹೇಳಿರುವ ಅವರ ಪತ್ರ ಇಲ್ಲಿದೆ.

ನಾನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸುವುದಿಲ್ಲ, ಏಕೆಂದರೆ?

“ಸಂಗೀತ ನಾಟಕ ಅಕಾಡೆಮಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ತಾನು ಶುರುವಾದಂದಿನಿಂದಲೂ ತನ್ನ ಸ್ವಾಯತ್ತತೆಯನ್ನು ಬಹಳಮಟ್ಟಿಗೆ ಕಾಪಾಡಿಕೊಂಡು ಬಂದಿದೆ. ಅಂಥ ಅಕಾಡೆಮಿಯು 2018ರ ಇಸವಿಯ ತನ್ನ ಪ್ರಶಸ್ತಿಯನ್ನು, ಬೇರೆ ಹಲವರಿಗೆ ನೀಡುವುದರೊಂದಿಗೆ, ನನಗೂ ನೀಡಿದ್ದಕ್ಕಾಗಿ ಅಕಾಡೆಮಿಗೆ ಕೃತಜ್ಞನಾಗಿದ್ದೇನೆ.

ಆದರೆ, ಈವತ್ತು ದೇಶದ ಹಲವು ಕಡೆ, ಮತ ಧರ್ಮದ ಹೆಸರಿನಲ್ಲಿ, ಪೊರೆಯುವ ದೇವರ ಹೆಸರಿನಲ್ಲಿ, ತಿನ್ನುವ ಆಹಾರದ ಹೆಸರಿನಲ್ಲಿ ಗುಂಪುಹಲ್ಲೆಗಳು, ಕಗ್ಗೊಲೆಗಳು ನಡೆಯುತ್ತಿವೆ. ಅಧಿಕಾರದಲ್ಲಿರುವವರು ಇಂಥ ಭೀಕರ ಹಿಂಸಾಚಾರ ಮತ್ತು ಕಗ್ಗೊಲೆಗಳಿಗೆ ಕಾರಣವಾದ ದ್ವೇಷವನ್ನು ಅಂತರಜಾಲ ತಂತ್ರಜ್ಞಾನದ ಎಲ್ಲ ಪಟ್ಟುಗಳನ್ನು ಬಳಸಿ ಜನರ ಮನಸ್ಸಿನಲ್ಲಿ ತುಂಬುತ್ತಿದ್ದಾರೆ. ಶಿಕ್ಷಣದ ಅತ್ಯುನ್ನತ ಸಂಸ್ಥೆಗಳಿಂದ ಮೊದಲುಗೊಂಡು ಕೆಳಮಟ್ಟದ ಶಾಲಾ ಕಾಲೇಜುಗಳವರೆಗೆ, ಎಲ್ಲೆಡೆಯೂ, ಮತಾಂಧತೆಯಿಂದ ಕೂಡಿದ ಪಾಠಗಳನ್ನು, ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗಳಲ್ಲಿ ತುಂಬುವ ಪ್ರಯತ್ನಗಳು ನಡೆಯುತ್ತಿದೆ. ಭಾರತೀಯತೆಯ, ವಸುಧೈವ ಕುಟುಂಬಮ್ ಅನ್ನುವುದರ ಅರ್ಥವನ್ನೇ ತಿರುಚಲಾಗುತ್ತಿದೆ. ಆದರೆ, ಸಂಕರವೇ ಶಿವವಲ್ಲವೇ?  ‘ಅಯ್ಯೋ, ನನ್ನ ದೇಶವೇ’ ಎಂದು ನನ್ನಂಥ ಕೋಟ್ಯಂತರ ಜನರು ಹಲುಬುವಂತಾಗಿದೆ.

ಭಾರತ ಮತ್ತು ವಿಶಾಲ ಜಗತ್ತುಗಳ ಭವಿಷ್ಯವನ್ನು ರೂಪಿಸಬೇಕಾಗಿರುವ ಕನ್ಹಯ್ಯಾಕುಮಾರ್ ಅಂಥ ಯುವಕರು ಹಲವರ ಮೇಲೆ, ಅವರು ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾಗಲೇ, ದೇಶದ್ರೋಹದ ಆರೋಪವನ್ನು  ಹೊರಿಸಲಾಗಿದ್ದು, ಅವರು ನ್ಯಾಯಾಲಯಗಳಲ್ಲಿ ಆ ಪ್ರಕರಣವನ್ನು ಇನ್ನೂ ಎದುರಿಸುತ್ತಲೇ ಇದ್ದಾರೆ. ದೇಶದ ಅತ್ಯಂತ ಶೋಷಿತರು ಮತ್ತು ದಲಿತ ಜನರ ಪರವಾಗಿ ಕೋರ್ಟು-ಕಚೇರಿಗಳಲ್ಲಿ ವಾದಿಸುತ್ತ, ಅವರ ಅಪಾರ ಕಷ್ಟಗಳನ್ನು ಕುರಿತು ಲೇಖನ ಮತ್ತು ಪುಸ್ತಕಗಳನ್ನು ಬರೆಯುತ್ತ, ಅವರ ಹೋರಾಟವು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಸಲಹೆ-ಸಹಕಾರ ನೀಡುತ್ತ, ಭಾರತದ ಸಂವಿಧಾನದ ಎಲ್ಲ ವಿಧಿವಿಧಾನಗಳನ್ನು ಪಾಲಿಸುತ್ತ, ಆ ನಮ್ಮ ಸಂವಿಧಾನದ ಜೀವಾಳವನ್ನು ಎತ್ತಿಹಿಡಿಯುತ್ತ, ನಿಸ್ಪೃಹೆಯಿಂದ, ತಮ್ಮತಮ್ಮದೇ ರೀತಿಯಲ್ಲಿ ಹೋರಾಡುತ್ತ ಬಂದಿರುವ ಹಲವರ ವಿರುದ್ಧ ಯುಎಪಿಎ ಕಾಯಿದೆಯಡಿ ವಿಚಾರಣೆ ನಡೆಯುತ್ತಿದ್ದು, ಅವರಲ್ಲಿ ಹೆಚ್ಚಿನವರು  ಜಾಮೀನು ಕೂಡ ಸಿಕ್ಕದೆ ಸೆರೆಮನೆಯಲ್ಲಿದ್ದಾರೆ. ದೇಶದ ಅತ್ಯಂತ ದಮನಿತರ ದನಿಯಾಗಿರುವವರು ಈ ಧೀಮಂತರು, ಧೀಮಂತೆಯರು. ಇಂಥವರನ್ನು ನಿರ್ವೀರ್ಯಗೊಳಿಸಿ, ಇವರ ಬಾಯಿಮುಚ್ಚಿಸಿದರೆ ಆ ದಮನಿತರ ದನಿಯನ್ನು ಅಷ್ಟರಮಟ್ಟಿಗೆ ಅಡಗಿಸಬಹುದು ಎಂದು ಪ್ರಭುತ್ವವು ನಿರ್ಧರಿಸಿದಂತಿದೆ. ಇದೆಲ್ಲ ಹೊಸದಲ್ಲ; ಈಹಿಂದೆ ಅಧಿಕಾರದಲ್ಲಿದ್ದವರು ಕೂಡ ಹೀಗೆಯೇ ಪ್ರಭುತ್ವದ ಶಕ್ತಿಯ ದುರ್ವಿನಿಯೋಗ ಮಾಡಿದ್ದಾರೆ.

ನಿಜವಾದ ದೇಶಪ್ರೇಮಿಗಳು, ಲೋಕೋಪಕಾರಿಗಳು, ಧರ್ಮ ಮಾರ್ಗಿಗಳು ಆಗಿರುವ, ಮತ್ತು ಸಕಲ ಚರಾಚರಕ್ಕೆ ಲೇಸನ್ನೇ ಬಯಸುತ್ತ, ಲೇಸನ್ನೇ ಉಂಟುಮಾಡಲು ಬದುಕುತ್ತಿರುವ ಇಂಥವರಿಗೆ ನನ್ನ ದೇಶದಲ್ಲಿ ಹೀಗೆ ಅನ್ಯಾಯವಾಗುತ್ತಿರುವಾಗ, ರಂಗಭೂಮಿಯ ಕಲಾವಿದನಾಗಿ, ಕವಿ-ನಾಟಕಕಾರನಾಗಿ, ಈ ದೇಶ ಮತ್ತು ಲೋಕದ ಪ್ರಜೆಯಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸಲಾರೆ. ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ, ಅಂತರ್ಯಾಮಿ ಒಪ್ಪದು.

ಇದು ಪ್ರತಿಭಟನೆಯಲ್ಲ; ವ್ಯಥೆ; ಪ್ರಶಸ್ತಿಯನ್ನು ಸ್ವೀಕರಿಸಲು ಬಿಡದಿರುವ ಅಸಹಾಯಕತೆ. ಅಕಾಡೆಮಿಯ ಬಗ್ಗೆ ನನಗೆ ಗೌರವವಿದೆ; ಮತ್ತು, ಈಗ ಮತ್ತು ಈಹಿಂದೆ ಇಂಥ ಪ್ರಶಸ್ತಿ ಪಡೆದ ನನ್ನೆಲ್ಲ ಸಹೋದ್ಯೋಗಿಗಳ ಬಗ್ಗೆ ಗೌರವವಿದೆ. ಅಕಾಡೆಮಿಯ ಸದಸ್ಯರಿಗೆ,  ಮತ್ತೊಮ್ಮೆ, ಕೃತಜ್ಞತೆಗಳು. ಅವರ ಕ್ಷಮೆ ಬೇಡುತ್ತಿದ್ದೇನೆ.”

ಶಿವಕಾರುಣ್ಯವಿರಲಿ.

ಎಸ್. ರಘುನಂದನ

17 ಜುಲೈ 2019

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...