Homeಮುಖಪುಟಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

ಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

- Advertisement -
- Advertisement -

ಶಾಲೆಗಳಿಗೆ ಟಿವಿ, ಡ್ರಮ್‌ ಸೆಟ್ ಕೊಡುಗೆ ನೀಡುವುದು, ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ನೀಡುವುದು, ಬಡವರಿಗೆ, ಅಲೆಮಾರಿಗಳಿಗೆ ಬೆಡ್‌ಶೀಟ್ – ಸ್ವೆಟರ್ ಕೊಡಿಸುವುದು, ಮಾಸ್ಕ್-ಸ್ಯಾನಿಟೈಸರ ಕೊಡಿಸುವುದು.. ಹೀಗೆ ಪ್ರತಿ ವರ್ಷ ಸಮಾಜ ಮುಖಿ ಕೆಲಸಗಳ ಮೂಲಕ ವಿಶಿಷ್ಟವಾಗಿ ತಮ್ಮ ಅಜ್ಜ-ಅಜ್ಜಿಯರನ್ನು ನೆನೆಯುತ್ತಾರೆ ರಾಮನಗರದ ಜನಪರ ಪತ್ರಕರ್ತರು ಮತ್ತು ಸಂಶೋಧನಾ ವಿದ್ಯಾರ್ಥಿಯಾದ ಎಸ್. ರುದ್ರೇಶ್ವರ.

ಅವರು ತಮ್ಮ ಅಜ್ಜ ಅಜ್ಜಿ ಕೂನಮುದ್ದನಹಳ್ಳಿಯ ಪಾರ್ವತಮ್ಮ ಮತ್ತು ಸಿದ್ದವೀರಯ್ಯ ಹಾಗೂ ಕೆಂಚನಕುಪ್ಪೆಯ ಜಯಮ್ಮ ಮತ್ತು ಶಾಂತಯ್ಯ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಕಳೆದ 9 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಹತ್ತನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದ ಅಂಗವಾಗಿ ರಾಮನಗರದ ಸಂವರ್ಧನ ಶಾಲೆಗೆ(ವಿಶೇಷ ಮಕ್ಕಳ ಪುನಶ್ಚೇತನ ಕೇಂದ್ರ) ಟಿವಿ ವಿತರಣೆಯನ್ನು ಮಾ.3ರಂದು ಬೆಳಿಗ್ಗೆ 11 ಗಂಟೆಗೆ ವಿತರಣೆ ಮಾಡಲಿದ್ದಾರೆ.

 

ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ರಾಮನಗರ ಜಿಲ್ಲೆಯ ಬುಡಕಟ್ಟುಗಳ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಎಂಬ ವಿಷಯವನ್ನು ಕುರಿತು ಪಿಎಚ್.ಡಿ. ಪದವಿಗಾಗಿ ಸಂಶೋಧನಾ ಕಾರ್ಯವನ್ನು ಕೈಗೊಂಡಿರುವ ಇವರ ಜನಪರ ಕಾಳಜಿ ಮತ್ತು ಸಮಾಜಮುಖಿ ಚಿಂತನೆ ಅನನ್ಯವಾದುದು. ಅಲ್ಲದೆ ಹಾಯ್ ರಾಮನಗರ ಎಂಬ ಆನ್‌ಲೈನ್ ಪತ್ರಿಕೆ ನಡೆಸುವ ಮೂಲಕ ಪತ್ರಕರ್ತರಾಗಿಯೂ ಹೆಸರು ಗಳಿಸಿದ್ದಾರೆ. ರಾಮನಗರದ ಕೂಗಳತೆ ದೂರದಲ್ಲಿರುವ ಕೂಟಗಲ್ ಎಂಬ ಗ್ರಾಮದಲ್ಲಿನ ಇರುಳಿಗ ಸಮುದಾಯ ಜನರು ಯಾವುದೇ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿದ್ದಾರೆ ತಮ್ಮ ಬರಹ ಮತ್ತು ವಿಡಿಯೋಗಳ ಮೂಲಕ ಸತತವಾಗಿ ಗಮನ ಸೆಳೆದ ರುದ್ರೇಶ್ವರ್‌ರವರು ಅಲ್ಲಿಗೆ ಅಧಿಕಾರಿಗಳು ಭೇಟಿ ನೀಡಿ ಹಕ್ಕುಪತ್ರ ನೀಡುವಂತೆ ಮಾಡುವಲ್ಲಿ ಪಾತ್ರ ವಹಿಸಿದ್ದಾರೆ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ತಮ್ಮ ಅಜ್ಜಿ-ತಾತರಾದಂತಹ ಪಾರ್ವತಮ್ಮ-ಸಿದ್ಧವೀರಯ್ಯ, ಜಯಮ್ಮ-ಶಾಂತಯ್ಯ ಅವರ ನೆನಪಿನಲ್ಲಿ ಶಕ್ತ್ಯಾನುಸಾರ ನೆರವು ನೀಡುವ ಮೂಲಕ ಸಮಾಜಮುಖಿ ಚಿಂತನೆಯನ್ನು ಪ್ರಕಟಿಸುತ್ತಾ ಬಂದಿದ್ದಾರೆ.

ಈ ಹಿಂದೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಸಿಬ್ಬಂದಿಗೆ ಸ್ವೆಟರ್ ಗಳ ವಿತರಣೆ, ಕೂಟಗಲ್ ಬಳಿ ವಾಸಿಸುತ್ತಿರುವ ಇರುಳಿಗ ಸಮುದಾಯದ ಕುಟುಂಬಗಳಿಗೆ ಸ್ವೆಟರ್ ವಿತರಣೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ವಿತರಣೆ, ಪ್ರಗತಿ ವಿದ್ಯಾ ಸಂಸ್ಥೆಗೆ ಡ್ರಮ್ ಸೆಟ್ ವಿತರಣೆ, ಅಮೃತ ವಿಕಲಚೇತನ ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ವಿತರಣೆ ಸೇರಿದಂತೆ ಪ್ರತಿ ವರ್ಷವೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ.

ಜೊತೆಗೆ ತಮ್ಮ ಮಗಳಾದ ಆರ್. ಯಶಿಕಾ ಹುಟ್ಟುಹಬ್ಬದ ಅಂಗವಾಗಿ ಪ್ರತಿ ವರ್ಷವೂ ಮತದಾನ ಕುರಿತು ಜಾಗೃತಿ, ಕೋವಿಡ್ ಕುರಿತು ಜಾಗೃತಿ ಹಾಗೂ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗೌರಿ ಹಬ್ಬದಂದು ಮನೆಗೆ ಕರೆದು ಬಾಗಿನ ನೀಡುತ್ತಾ ಬಂದಿದ್ದಾರೆ. ಇವರ ಕಾರ್ಯಕಗಳಿಂದ ಪ್ರೇರಣೆಗೊಂಡ ಕೆಲ ಸ್ನೇಹಿತರೂ ಸಹ ತಮ್ಮ ಜನ್ಮ ದಿನದಂದು, ತಮ್ಮ ಮನೆಯ ಶುಭ ಸಮಾರಂಭಗಳಂದು ಇದೇ ಬಗೆಯ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರುದ್ರೇಶ್ವರರವರು ಕರ್ನಾಟಕ ಜಾನಪದ ಪರಿಷತ್ತಿನ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ, ಭಾರತೀಯ ಯೂತ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.

“ಸಮಾಜಮುಖಿ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ. ನಾವು ಕಳೆದುಕೊಂಡಿರುವ ಅಜ್ಜ-ಅಜ್ಜಿಯನ್ನು ಒಳ್ಳೆಯ ಕೆಲಸ ಮಾಡುವ ಮೂಲಕ ನೆನಪಿಸಿಕೊಳ್ಳಬೇಕು. ಈಗ ಬಹುತೇಕ ಮನೆಗಳಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರಿಗೆ ಶಕ್ತಿ ತುಂಬಲು ಸರ್ಕಾರದ ವತಿಯಿಂದ ಕಾನೂನುಗಳು ಜಾರಿಯಾದರೂ ಪ್ರಯೋಜನವಾಗುತ್ತಿಲ್ಲ” ಎನ್ನುತ್ತಾರೆ ಎಸ್. ರುದ್ರೇಶ್ವರ

ಹಿರಿಯರು ಸಮಾಜದ ಆಸ್ತಿ. ವಯಸ್ಸಾದ ಹಿರಿಯರು ಬೇಡವಾದ ಜೀವಗಳಲ್ಲ. ಅವರಲ್ಲಿರುವ ಜೀವನದ ಅನುಭವಗಳು ಹತಾಶೆಗೆ ಒಳಗಾಗಿರುವ ಯುವ ಸಮುದಾಯಕ್ಕೆ ಮಾದರಿಯಾಗುತ್ತವೆ. ಹಿರಿಯರನ್ನು ದೇಶದ ಸಂಪತ್ತು ಎಂದು ಪರಿಗಣಿಸಬೇಕು. ಆದರೆ ಪ್ರಸ್ತತ ಸಂದರ್ಭದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಇಂದಿನ ಯುವ ಸಮುದಾಯ ಹಿರಿಯ ಅನುಭವವನ್ನು ತಿಳಿದುಕೊಂಡು ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎನ್ನುತ್ತಾರೆ.

ಸಮಾಜ ಮುಖಿ ಕೆಲಸಗಳ ಮೂಲಕ, ಜನಪರ ಪತ್ರಿಕೋದ್ಯಮದ ಮೂಲಕ ದುಡಿಯುತ್ತಿರುವ ರುದ್ರೇಶ್ವರ್‌ರವರ ಕೆಲಸಗಳು ಯಶಸ್ವಿಯಾಗಲಿ. ಅವರಿಂದ ಮತ್ತಷ್ಟು ಜನಪರ ಕೆಲಸಗಳು ಹೊರಹೊಮ್ಮಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ; ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...