Homeಮುಖಪುಟಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

ಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

- Advertisement -
- Advertisement -

ಶಾಲೆಗಳಿಗೆ ಟಿವಿ, ಡ್ರಮ್‌ ಸೆಟ್ ಕೊಡುಗೆ ನೀಡುವುದು, ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ನೀಡುವುದು, ಬಡವರಿಗೆ, ಅಲೆಮಾರಿಗಳಿಗೆ ಬೆಡ್‌ಶೀಟ್ – ಸ್ವೆಟರ್ ಕೊಡಿಸುವುದು, ಮಾಸ್ಕ್-ಸ್ಯಾನಿಟೈಸರ ಕೊಡಿಸುವುದು.. ಹೀಗೆ ಪ್ರತಿ ವರ್ಷ ಸಮಾಜ ಮುಖಿ ಕೆಲಸಗಳ ಮೂಲಕ ವಿಶಿಷ್ಟವಾಗಿ ತಮ್ಮ ಅಜ್ಜ-ಅಜ್ಜಿಯರನ್ನು ನೆನೆಯುತ್ತಾರೆ ರಾಮನಗರದ ಜನಪರ ಪತ್ರಕರ್ತರು ಮತ್ತು ಸಂಶೋಧನಾ ವಿದ್ಯಾರ್ಥಿಯಾದ ಎಸ್. ರುದ್ರೇಶ್ವರ.

ಅವರು ತಮ್ಮ ಅಜ್ಜ ಅಜ್ಜಿ ಕೂನಮುದ್ದನಹಳ್ಳಿಯ ಪಾರ್ವತಮ್ಮ ಮತ್ತು ಸಿದ್ದವೀರಯ್ಯ ಹಾಗೂ ಕೆಂಚನಕುಪ್ಪೆಯ ಜಯಮ್ಮ ಮತ್ತು ಶಾಂತಯ್ಯ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಕಳೆದ 9 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಹತ್ತನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದ ಅಂಗವಾಗಿ ರಾಮನಗರದ ಸಂವರ್ಧನ ಶಾಲೆಗೆ(ವಿಶೇಷ ಮಕ್ಕಳ ಪುನಶ್ಚೇತನ ಕೇಂದ್ರ) ಟಿವಿ ವಿತರಣೆಯನ್ನು ಮಾ.3ರಂದು ಬೆಳಿಗ್ಗೆ 11 ಗಂಟೆಗೆ ವಿತರಣೆ ಮಾಡಲಿದ್ದಾರೆ.

 

ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ರಾಮನಗರ ಜಿಲ್ಲೆಯ ಬುಡಕಟ್ಟುಗಳ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಎಂಬ ವಿಷಯವನ್ನು ಕುರಿತು ಪಿಎಚ್.ಡಿ. ಪದವಿಗಾಗಿ ಸಂಶೋಧನಾ ಕಾರ್ಯವನ್ನು ಕೈಗೊಂಡಿರುವ ಇವರ ಜನಪರ ಕಾಳಜಿ ಮತ್ತು ಸಮಾಜಮುಖಿ ಚಿಂತನೆ ಅನನ್ಯವಾದುದು. ಅಲ್ಲದೆ ಹಾಯ್ ರಾಮನಗರ ಎಂಬ ಆನ್‌ಲೈನ್ ಪತ್ರಿಕೆ ನಡೆಸುವ ಮೂಲಕ ಪತ್ರಕರ್ತರಾಗಿಯೂ ಹೆಸರು ಗಳಿಸಿದ್ದಾರೆ. ರಾಮನಗರದ ಕೂಗಳತೆ ದೂರದಲ್ಲಿರುವ ಕೂಟಗಲ್ ಎಂಬ ಗ್ರಾಮದಲ್ಲಿನ ಇರುಳಿಗ ಸಮುದಾಯ ಜನರು ಯಾವುದೇ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿದ್ದಾರೆ ತಮ್ಮ ಬರಹ ಮತ್ತು ವಿಡಿಯೋಗಳ ಮೂಲಕ ಸತತವಾಗಿ ಗಮನ ಸೆಳೆದ ರುದ್ರೇಶ್ವರ್‌ರವರು ಅಲ್ಲಿಗೆ ಅಧಿಕಾರಿಗಳು ಭೇಟಿ ನೀಡಿ ಹಕ್ಕುಪತ್ರ ನೀಡುವಂತೆ ಮಾಡುವಲ್ಲಿ ಪಾತ್ರ ವಹಿಸಿದ್ದಾರೆ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ತಮ್ಮ ಅಜ್ಜಿ-ತಾತರಾದಂತಹ ಪಾರ್ವತಮ್ಮ-ಸಿದ್ಧವೀರಯ್ಯ, ಜಯಮ್ಮ-ಶಾಂತಯ್ಯ ಅವರ ನೆನಪಿನಲ್ಲಿ ಶಕ್ತ್ಯಾನುಸಾರ ನೆರವು ನೀಡುವ ಮೂಲಕ ಸಮಾಜಮುಖಿ ಚಿಂತನೆಯನ್ನು ಪ್ರಕಟಿಸುತ್ತಾ ಬಂದಿದ್ದಾರೆ.

ಈ ಹಿಂದೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಸಿಬ್ಬಂದಿಗೆ ಸ್ವೆಟರ್ ಗಳ ವಿತರಣೆ, ಕೂಟಗಲ್ ಬಳಿ ವಾಸಿಸುತ್ತಿರುವ ಇರುಳಿಗ ಸಮುದಾಯದ ಕುಟುಂಬಗಳಿಗೆ ಸ್ವೆಟರ್ ವಿತರಣೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ವಿತರಣೆ, ಪ್ರಗತಿ ವಿದ್ಯಾ ಸಂಸ್ಥೆಗೆ ಡ್ರಮ್ ಸೆಟ್ ವಿತರಣೆ, ಅಮೃತ ವಿಕಲಚೇತನ ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ವಿತರಣೆ ಸೇರಿದಂತೆ ಪ್ರತಿ ವರ್ಷವೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ.

ಜೊತೆಗೆ ತಮ್ಮ ಮಗಳಾದ ಆರ್. ಯಶಿಕಾ ಹುಟ್ಟುಹಬ್ಬದ ಅಂಗವಾಗಿ ಪ್ರತಿ ವರ್ಷವೂ ಮತದಾನ ಕುರಿತು ಜಾಗೃತಿ, ಕೋವಿಡ್ ಕುರಿತು ಜಾಗೃತಿ ಹಾಗೂ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗೌರಿ ಹಬ್ಬದಂದು ಮನೆಗೆ ಕರೆದು ಬಾಗಿನ ನೀಡುತ್ತಾ ಬಂದಿದ್ದಾರೆ. ಇವರ ಕಾರ್ಯಕಗಳಿಂದ ಪ್ರೇರಣೆಗೊಂಡ ಕೆಲ ಸ್ನೇಹಿತರೂ ಸಹ ತಮ್ಮ ಜನ್ಮ ದಿನದಂದು, ತಮ್ಮ ಮನೆಯ ಶುಭ ಸಮಾರಂಭಗಳಂದು ಇದೇ ಬಗೆಯ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರುದ್ರೇಶ್ವರರವರು ಕರ್ನಾಟಕ ಜಾನಪದ ಪರಿಷತ್ತಿನ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ, ಭಾರತೀಯ ಯೂತ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.

“ಸಮಾಜಮುಖಿ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ. ನಾವು ಕಳೆದುಕೊಂಡಿರುವ ಅಜ್ಜ-ಅಜ್ಜಿಯನ್ನು ಒಳ್ಳೆಯ ಕೆಲಸ ಮಾಡುವ ಮೂಲಕ ನೆನಪಿಸಿಕೊಳ್ಳಬೇಕು. ಈಗ ಬಹುತೇಕ ಮನೆಗಳಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರಿಗೆ ಶಕ್ತಿ ತುಂಬಲು ಸರ್ಕಾರದ ವತಿಯಿಂದ ಕಾನೂನುಗಳು ಜಾರಿಯಾದರೂ ಪ್ರಯೋಜನವಾಗುತ್ತಿಲ್ಲ” ಎನ್ನುತ್ತಾರೆ ಎಸ್. ರುದ್ರೇಶ್ವರ

ಹಿರಿಯರು ಸಮಾಜದ ಆಸ್ತಿ. ವಯಸ್ಸಾದ ಹಿರಿಯರು ಬೇಡವಾದ ಜೀವಗಳಲ್ಲ. ಅವರಲ್ಲಿರುವ ಜೀವನದ ಅನುಭವಗಳು ಹತಾಶೆಗೆ ಒಳಗಾಗಿರುವ ಯುವ ಸಮುದಾಯಕ್ಕೆ ಮಾದರಿಯಾಗುತ್ತವೆ. ಹಿರಿಯರನ್ನು ದೇಶದ ಸಂಪತ್ತು ಎಂದು ಪರಿಗಣಿಸಬೇಕು. ಆದರೆ ಪ್ರಸ್ತತ ಸಂದರ್ಭದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಇಂದಿನ ಯುವ ಸಮುದಾಯ ಹಿರಿಯ ಅನುಭವವನ್ನು ತಿಳಿದುಕೊಂಡು ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎನ್ನುತ್ತಾರೆ.

ಸಮಾಜ ಮುಖಿ ಕೆಲಸಗಳ ಮೂಲಕ, ಜನಪರ ಪತ್ರಿಕೋದ್ಯಮದ ಮೂಲಕ ದುಡಿಯುತ್ತಿರುವ ರುದ್ರೇಶ್ವರ್‌ರವರ ಕೆಲಸಗಳು ಯಶಸ್ವಿಯಾಗಲಿ. ಅವರಿಂದ ಮತ್ತಷ್ಟು ಜನಪರ ಕೆಲಸಗಳು ಹೊರಹೊಮ್ಮಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ; ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...