Homeಮುಖಪುಟಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

ಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

- Advertisement -
- Advertisement -

ಶಾಲೆಗಳಿಗೆ ಟಿವಿ, ಡ್ರಮ್‌ ಸೆಟ್ ಕೊಡುಗೆ ನೀಡುವುದು, ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ನೀಡುವುದು, ಬಡವರಿಗೆ, ಅಲೆಮಾರಿಗಳಿಗೆ ಬೆಡ್‌ಶೀಟ್ – ಸ್ವೆಟರ್ ಕೊಡಿಸುವುದು, ಮಾಸ್ಕ್-ಸ್ಯಾನಿಟೈಸರ ಕೊಡಿಸುವುದು.. ಹೀಗೆ ಪ್ರತಿ ವರ್ಷ ಸಮಾಜ ಮುಖಿ ಕೆಲಸಗಳ ಮೂಲಕ ವಿಶಿಷ್ಟವಾಗಿ ತಮ್ಮ ಅಜ್ಜ-ಅಜ್ಜಿಯರನ್ನು ನೆನೆಯುತ್ತಾರೆ ರಾಮನಗರದ ಜನಪರ ಪತ್ರಕರ್ತರು ಮತ್ತು ಸಂಶೋಧನಾ ವಿದ್ಯಾರ್ಥಿಯಾದ ಎಸ್. ರುದ್ರೇಶ್ವರ.

ಅವರು ತಮ್ಮ ಅಜ್ಜ ಅಜ್ಜಿ ಕೂನಮುದ್ದನಹಳ್ಳಿಯ ಪಾರ್ವತಮ್ಮ ಮತ್ತು ಸಿದ್ದವೀರಯ್ಯ ಹಾಗೂ ಕೆಂಚನಕುಪ್ಪೆಯ ಜಯಮ್ಮ ಮತ್ತು ಶಾಂತಯ್ಯ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಕಳೆದ 9 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಹತ್ತನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದ ಅಂಗವಾಗಿ ರಾಮನಗರದ ಸಂವರ್ಧನ ಶಾಲೆಗೆ(ವಿಶೇಷ ಮಕ್ಕಳ ಪುನಶ್ಚೇತನ ಕೇಂದ್ರ) ಟಿವಿ ವಿತರಣೆಯನ್ನು ಮಾ.3ರಂದು ಬೆಳಿಗ್ಗೆ 11 ಗಂಟೆಗೆ ವಿತರಣೆ ಮಾಡಲಿದ್ದಾರೆ.

 

ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ರಾಮನಗರ ಜಿಲ್ಲೆಯ ಬುಡಕಟ್ಟುಗಳ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಎಂಬ ವಿಷಯವನ್ನು ಕುರಿತು ಪಿಎಚ್.ಡಿ. ಪದವಿಗಾಗಿ ಸಂಶೋಧನಾ ಕಾರ್ಯವನ್ನು ಕೈಗೊಂಡಿರುವ ಇವರ ಜನಪರ ಕಾಳಜಿ ಮತ್ತು ಸಮಾಜಮುಖಿ ಚಿಂತನೆ ಅನನ್ಯವಾದುದು. ಅಲ್ಲದೆ ಹಾಯ್ ರಾಮನಗರ ಎಂಬ ಆನ್‌ಲೈನ್ ಪತ್ರಿಕೆ ನಡೆಸುವ ಮೂಲಕ ಪತ್ರಕರ್ತರಾಗಿಯೂ ಹೆಸರು ಗಳಿಸಿದ್ದಾರೆ. ರಾಮನಗರದ ಕೂಗಳತೆ ದೂರದಲ್ಲಿರುವ ಕೂಟಗಲ್ ಎಂಬ ಗ್ರಾಮದಲ್ಲಿನ ಇರುಳಿಗ ಸಮುದಾಯ ಜನರು ಯಾವುದೇ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿದ್ದಾರೆ ತಮ್ಮ ಬರಹ ಮತ್ತು ವಿಡಿಯೋಗಳ ಮೂಲಕ ಸತತವಾಗಿ ಗಮನ ಸೆಳೆದ ರುದ್ರೇಶ್ವರ್‌ರವರು ಅಲ್ಲಿಗೆ ಅಧಿಕಾರಿಗಳು ಭೇಟಿ ನೀಡಿ ಹಕ್ಕುಪತ್ರ ನೀಡುವಂತೆ ಮಾಡುವಲ್ಲಿ ಪಾತ್ರ ವಹಿಸಿದ್ದಾರೆ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ತಮ್ಮ ಅಜ್ಜಿ-ತಾತರಾದಂತಹ ಪಾರ್ವತಮ್ಮ-ಸಿದ್ಧವೀರಯ್ಯ, ಜಯಮ್ಮ-ಶಾಂತಯ್ಯ ಅವರ ನೆನಪಿನಲ್ಲಿ ಶಕ್ತ್ಯಾನುಸಾರ ನೆರವು ನೀಡುವ ಮೂಲಕ ಸಮಾಜಮುಖಿ ಚಿಂತನೆಯನ್ನು ಪ್ರಕಟಿಸುತ್ತಾ ಬಂದಿದ್ದಾರೆ.

ಈ ಹಿಂದೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಸಿಬ್ಬಂದಿಗೆ ಸ್ವೆಟರ್ ಗಳ ವಿತರಣೆ, ಕೂಟಗಲ್ ಬಳಿ ವಾಸಿಸುತ್ತಿರುವ ಇರುಳಿಗ ಸಮುದಾಯದ ಕುಟುಂಬಗಳಿಗೆ ಸ್ವೆಟರ್ ವಿತರಣೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ವಿತರಣೆ, ಪ್ರಗತಿ ವಿದ್ಯಾ ಸಂಸ್ಥೆಗೆ ಡ್ರಮ್ ಸೆಟ್ ವಿತರಣೆ, ಅಮೃತ ವಿಕಲಚೇತನ ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ವಿತರಣೆ ಸೇರಿದಂತೆ ಪ್ರತಿ ವರ್ಷವೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ.

ಜೊತೆಗೆ ತಮ್ಮ ಮಗಳಾದ ಆರ್. ಯಶಿಕಾ ಹುಟ್ಟುಹಬ್ಬದ ಅಂಗವಾಗಿ ಪ್ರತಿ ವರ್ಷವೂ ಮತದಾನ ಕುರಿತು ಜಾಗೃತಿ, ಕೋವಿಡ್ ಕುರಿತು ಜಾಗೃತಿ ಹಾಗೂ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗೌರಿ ಹಬ್ಬದಂದು ಮನೆಗೆ ಕರೆದು ಬಾಗಿನ ನೀಡುತ್ತಾ ಬಂದಿದ್ದಾರೆ. ಇವರ ಕಾರ್ಯಕಗಳಿಂದ ಪ್ರೇರಣೆಗೊಂಡ ಕೆಲ ಸ್ನೇಹಿತರೂ ಸಹ ತಮ್ಮ ಜನ್ಮ ದಿನದಂದು, ತಮ್ಮ ಮನೆಯ ಶುಭ ಸಮಾರಂಭಗಳಂದು ಇದೇ ಬಗೆಯ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರುದ್ರೇಶ್ವರರವರು ಕರ್ನಾಟಕ ಜಾನಪದ ಪರಿಷತ್ತಿನ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ, ಭಾರತೀಯ ಯೂತ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.

“ಸಮಾಜಮುಖಿ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ. ನಾವು ಕಳೆದುಕೊಂಡಿರುವ ಅಜ್ಜ-ಅಜ್ಜಿಯನ್ನು ಒಳ್ಳೆಯ ಕೆಲಸ ಮಾಡುವ ಮೂಲಕ ನೆನಪಿಸಿಕೊಳ್ಳಬೇಕು. ಈಗ ಬಹುತೇಕ ಮನೆಗಳಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರಿಗೆ ಶಕ್ತಿ ತುಂಬಲು ಸರ್ಕಾರದ ವತಿಯಿಂದ ಕಾನೂನುಗಳು ಜಾರಿಯಾದರೂ ಪ್ರಯೋಜನವಾಗುತ್ತಿಲ್ಲ” ಎನ್ನುತ್ತಾರೆ ಎಸ್. ರುದ್ರೇಶ್ವರ

ಹಿರಿಯರು ಸಮಾಜದ ಆಸ್ತಿ. ವಯಸ್ಸಾದ ಹಿರಿಯರು ಬೇಡವಾದ ಜೀವಗಳಲ್ಲ. ಅವರಲ್ಲಿರುವ ಜೀವನದ ಅನುಭವಗಳು ಹತಾಶೆಗೆ ಒಳಗಾಗಿರುವ ಯುವ ಸಮುದಾಯಕ್ಕೆ ಮಾದರಿಯಾಗುತ್ತವೆ. ಹಿರಿಯರನ್ನು ದೇಶದ ಸಂಪತ್ತು ಎಂದು ಪರಿಗಣಿಸಬೇಕು. ಆದರೆ ಪ್ರಸ್ತತ ಸಂದರ್ಭದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಇಂದಿನ ಯುವ ಸಮುದಾಯ ಹಿರಿಯ ಅನುಭವವನ್ನು ತಿಳಿದುಕೊಂಡು ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎನ್ನುತ್ತಾರೆ.

ಸಮಾಜ ಮುಖಿ ಕೆಲಸಗಳ ಮೂಲಕ, ಜನಪರ ಪತ್ರಿಕೋದ್ಯಮದ ಮೂಲಕ ದುಡಿಯುತ್ತಿರುವ ರುದ್ರೇಶ್ವರ್‌ರವರ ಕೆಲಸಗಳು ಯಶಸ್ವಿಯಾಗಲಿ. ಅವರಿಂದ ಮತ್ತಷ್ಟು ಜನಪರ ಕೆಲಸಗಳು ಹೊರಹೊಮ್ಮಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ; ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...