Homeಮುಖಪುಟಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

ಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

- Advertisement -
- Advertisement -

ಶಾಲೆಗಳಿಗೆ ಟಿವಿ, ಡ್ರಮ್‌ ಸೆಟ್ ಕೊಡುಗೆ ನೀಡುವುದು, ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ನೀಡುವುದು, ಬಡವರಿಗೆ, ಅಲೆಮಾರಿಗಳಿಗೆ ಬೆಡ್‌ಶೀಟ್ – ಸ್ವೆಟರ್ ಕೊಡಿಸುವುದು, ಮಾಸ್ಕ್-ಸ್ಯಾನಿಟೈಸರ ಕೊಡಿಸುವುದು.. ಹೀಗೆ ಪ್ರತಿ ವರ್ಷ ಸಮಾಜ ಮುಖಿ ಕೆಲಸಗಳ ಮೂಲಕ ವಿಶಿಷ್ಟವಾಗಿ ತಮ್ಮ ಅಜ್ಜ-ಅಜ್ಜಿಯರನ್ನು ನೆನೆಯುತ್ತಾರೆ ರಾಮನಗರದ ಜನಪರ ಪತ್ರಕರ್ತರು ಮತ್ತು ಸಂಶೋಧನಾ ವಿದ್ಯಾರ್ಥಿಯಾದ ಎಸ್. ರುದ್ರೇಶ್ವರ.

ಅವರು ತಮ್ಮ ಅಜ್ಜ ಅಜ್ಜಿ ಕೂನಮುದ್ದನಹಳ್ಳಿಯ ಪಾರ್ವತಮ್ಮ ಮತ್ತು ಸಿದ್ದವೀರಯ್ಯ ಹಾಗೂ ಕೆಂಚನಕುಪ್ಪೆಯ ಜಯಮ್ಮ ಮತ್ತು ಶಾಂತಯ್ಯ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಕಳೆದ 9 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಹತ್ತನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದ ಅಂಗವಾಗಿ ರಾಮನಗರದ ಸಂವರ್ಧನ ಶಾಲೆಗೆ(ವಿಶೇಷ ಮಕ್ಕಳ ಪುನಶ್ಚೇತನ ಕೇಂದ್ರ) ಟಿವಿ ವಿತರಣೆಯನ್ನು ಮಾ.3ರಂದು ಬೆಳಿಗ್ಗೆ 11 ಗಂಟೆಗೆ ವಿತರಣೆ ಮಾಡಲಿದ್ದಾರೆ.

 

ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ರಾಮನಗರ ಜಿಲ್ಲೆಯ ಬುಡಕಟ್ಟುಗಳ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಎಂಬ ವಿಷಯವನ್ನು ಕುರಿತು ಪಿಎಚ್.ಡಿ. ಪದವಿಗಾಗಿ ಸಂಶೋಧನಾ ಕಾರ್ಯವನ್ನು ಕೈಗೊಂಡಿರುವ ಇವರ ಜನಪರ ಕಾಳಜಿ ಮತ್ತು ಸಮಾಜಮುಖಿ ಚಿಂತನೆ ಅನನ್ಯವಾದುದು. ಅಲ್ಲದೆ ಹಾಯ್ ರಾಮನಗರ ಎಂಬ ಆನ್‌ಲೈನ್ ಪತ್ರಿಕೆ ನಡೆಸುವ ಮೂಲಕ ಪತ್ರಕರ್ತರಾಗಿಯೂ ಹೆಸರು ಗಳಿಸಿದ್ದಾರೆ. ರಾಮನಗರದ ಕೂಗಳತೆ ದೂರದಲ್ಲಿರುವ ಕೂಟಗಲ್ ಎಂಬ ಗ್ರಾಮದಲ್ಲಿನ ಇರುಳಿಗ ಸಮುದಾಯ ಜನರು ಯಾವುದೇ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿದ್ದಾರೆ ತಮ್ಮ ಬರಹ ಮತ್ತು ವಿಡಿಯೋಗಳ ಮೂಲಕ ಸತತವಾಗಿ ಗಮನ ಸೆಳೆದ ರುದ್ರೇಶ್ವರ್‌ರವರು ಅಲ್ಲಿಗೆ ಅಧಿಕಾರಿಗಳು ಭೇಟಿ ನೀಡಿ ಹಕ್ಕುಪತ್ರ ನೀಡುವಂತೆ ಮಾಡುವಲ್ಲಿ ಪಾತ್ರ ವಹಿಸಿದ್ದಾರೆ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ತಮ್ಮ ಅಜ್ಜಿ-ತಾತರಾದಂತಹ ಪಾರ್ವತಮ್ಮ-ಸಿದ್ಧವೀರಯ್ಯ, ಜಯಮ್ಮ-ಶಾಂತಯ್ಯ ಅವರ ನೆನಪಿನಲ್ಲಿ ಶಕ್ತ್ಯಾನುಸಾರ ನೆರವು ನೀಡುವ ಮೂಲಕ ಸಮಾಜಮುಖಿ ಚಿಂತನೆಯನ್ನು ಪ್ರಕಟಿಸುತ್ತಾ ಬಂದಿದ್ದಾರೆ.

ಈ ಹಿಂದೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಸಿಬ್ಬಂದಿಗೆ ಸ್ವೆಟರ್ ಗಳ ವಿತರಣೆ, ಕೂಟಗಲ್ ಬಳಿ ವಾಸಿಸುತ್ತಿರುವ ಇರುಳಿಗ ಸಮುದಾಯದ ಕುಟುಂಬಗಳಿಗೆ ಸ್ವೆಟರ್ ವಿತರಣೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ವಿತರಣೆ, ಪ್ರಗತಿ ವಿದ್ಯಾ ಸಂಸ್ಥೆಗೆ ಡ್ರಮ್ ಸೆಟ್ ವಿತರಣೆ, ಅಮೃತ ವಿಕಲಚೇತನ ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ವಿತರಣೆ ಸೇರಿದಂತೆ ಪ್ರತಿ ವರ್ಷವೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ.

ಜೊತೆಗೆ ತಮ್ಮ ಮಗಳಾದ ಆರ್. ಯಶಿಕಾ ಹುಟ್ಟುಹಬ್ಬದ ಅಂಗವಾಗಿ ಪ್ರತಿ ವರ್ಷವೂ ಮತದಾನ ಕುರಿತು ಜಾಗೃತಿ, ಕೋವಿಡ್ ಕುರಿತು ಜಾಗೃತಿ ಹಾಗೂ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗೌರಿ ಹಬ್ಬದಂದು ಮನೆಗೆ ಕರೆದು ಬಾಗಿನ ನೀಡುತ್ತಾ ಬಂದಿದ್ದಾರೆ. ಇವರ ಕಾರ್ಯಕಗಳಿಂದ ಪ್ರೇರಣೆಗೊಂಡ ಕೆಲ ಸ್ನೇಹಿತರೂ ಸಹ ತಮ್ಮ ಜನ್ಮ ದಿನದಂದು, ತಮ್ಮ ಮನೆಯ ಶುಭ ಸಮಾರಂಭಗಳಂದು ಇದೇ ಬಗೆಯ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರುದ್ರೇಶ್ವರರವರು ಕರ್ನಾಟಕ ಜಾನಪದ ಪರಿಷತ್ತಿನ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ, ಭಾರತೀಯ ಯೂತ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.

“ಸಮಾಜಮುಖಿ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ. ನಾವು ಕಳೆದುಕೊಂಡಿರುವ ಅಜ್ಜ-ಅಜ್ಜಿಯನ್ನು ಒಳ್ಳೆಯ ಕೆಲಸ ಮಾಡುವ ಮೂಲಕ ನೆನಪಿಸಿಕೊಳ್ಳಬೇಕು. ಈಗ ಬಹುತೇಕ ಮನೆಗಳಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರಿಗೆ ಶಕ್ತಿ ತುಂಬಲು ಸರ್ಕಾರದ ವತಿಯಿಂದ ಕಾನೂನುಗಳು ಜಾರಿಯಾದರೂ ಪ್ರಯೋಜನವಾಗುತ್ತಿಲ್ಲ” ಎನ್ನುತ್ತಾರೆ ಎಸ್. ರುದ್ರೇಶ್ವರ

ಹಿರಿಯರು ಸಮಾಜದ ಆಸ್ತಿ. ವಯಸ್ಸಾದ ಹಿರಿಯರು ಬೇಡವಾದ ಜೀವಗಳಲ್ಲ. ಅವರಲ್ಲಿರುವ ಜೀವನದ ಅನುಭವಗಳು ಹತಾಶೆಗೆ ಒಳಗಾಗಿರುವ ಯುವ ಸಮುದಾಯಕ್ಕೆ ಮಾದರಿಯಾಗುತ್ತವೆ. ಹಿರಿಯರನ್ನು ದೇಶದ ಸಂಪತ್ತು ಎಂದು ಪರಿಗಣಿಸಬೇಕು. ಆದರೆ ಪ್ರಸ್ತತ ಸಂದರ್ಭದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಇಂದಿನ ಯುವ ಸಮುದಾಯ ಹಿರಿಯ ಅನುಭವವನ್ನು ತಿಳಿದುಕೊಂಡು ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎನ್ನುತ್ತಾರೆ.

ಸಮಾಜ ಮುಖಿ ಕೆಲಸಗಳ ಮೂಲಕ, ಜನಪರ ಪತ್ರಿಕೋದ್ಯಮದ ಮೂಲಕ ದುಡಿಯುತ್ತಿರುವ ರುದ್ರೇಶ್ವರ್‌ರವರ ಕೆಲಸಗಳು ಯಶಸ್ವಿಯಾಗಲಿ. ಅವರಿಂದ ಮತ್ತಷ್ಟು ಜನಪರ ಕೆಲಸಗಳು ಹೊರಹೊಮ್ಮಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ; ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...