Homeಚಳವಳಿಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಸರ್ಕಾರ ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರು ಎಲ್ಲವೂ ಮುರಿದು ಬಿದ್ದಿದೆ. ಇಂದು ದೆಹಲಿಯ ಗಡಿಗಳ ಸುತ್ತಲೂ ಪ್ರತಿಭಟನಾ ನಿರತ ರೈತರು ಟ್ರಾಕ್ಟರ್‌ ಪರೇಡ್ ನಡೆಸಿ ಗಣರಾಜ್ಯೋತ್ಸವವನ್ನು, ರೈತರ ಗಣರಾಜ್ಯೋತ್ಸೋವ ಆಗಿ ನಡೆಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಟ್ರಾಕ್ಟರ್‌ ಪರೇಡ್ ಪ್ರಾರಂಭವಾಗಿದ್ದು, ದೆಹಲಿಯ ಸಿಂಘುಗಡಿಯಲ್ಲಿ ರೈತರ ಟ್ರಾಕ್ಟರ್‌ಗಳು ಸಾಲು ಸಾಲಾಗಿ ಮೆರವಣಿಗೆ ಹೊರಟಿವೆ. ರೈತರ ಪರೇಡ್‌ ಅನ್ನು ಅನುಮತಿಸಿ ರೂಟ್‌ ಮ್ಯಾಪ್‌ಕೂಡ ಹಾಕಿಕೊಟ್ಟಿದ್ದ ಪೊಲೀಸರು ಪರೇಡ್‌ ತಡೆಯಲು ಬೆಳ್ಳಂಬೆಳಗ್ಗೆಯೇ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡಲಾಗಿ ಜೋಡಿಸಿದ್ದರು.

ದೆಹಲಿಯಲ್ಲಿ ಐತಿಹಾಸಿಕ ಟ್ರಾಕ್ಟರ್‌‌ ರ್ಯಾಲಿ ಪ್ರಾರಂಭ; ದೆಹಲಿಯ ಸಿಂಘುಗಡಿಯಿಂದ ನಾನುಗೌರಿ.ಕಾಮ್ ನೇರ ಪ್ರಸಾರದ ಲೈವ್ ವಿಡಿಯೋ ನೋಡಿ

ಇದರಿಂದ ಸಿಟ್ಟಾಗಿರುವ ರೈತರು 12 ಗಂಟೆಗೆ ನಿಗದಿ ಮಾಡಿದ್ದ ರ್‍ಯಾಲಿಯನ್ನು 08 ಗಂಟೆಗೆ ಆರಂಭಿಸಿದ್ದು, ಪೊಲೀಸರ ಬ್ಯಾರಿಕೇಡ್ ಭೇದಿಸಿ ಟ್ರಾಕ್ಟರ್‌ ರ್‍ಯಾಲಿ ಹೊರಟಿದ್ದಾರೆ. ರ್‍ಯಾಲಿಯು ಶಾಂತಿಯುತವಾಗಿ ನಡೆಯುತ್ತಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಲಕ್ಷಾಂತರ ಟ್ರಾಕ್ಟರ್‌ಗಳು ಇಂದು ದೆಹಲಿಯ ಐದು ಗಡಿಭಾಗಗಳಿಂದ ರಾಜಧಾನಿಯ ಸುತ್ತಲೂ ಇರುವ ಹೆದ್ದಾರಿಯಲ್ಲಿ ಪರೇಡ್‌ ನಡೆಸುತ್ತಿವೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದ್ದು, ನೂರಾರು ಟ್ರಾಕ್ಟರ್‌ಗಳು ನಿನ್ನೆ (ಸೋಮವಾರ) ರಾತ್ರಿ ದೆಹಲಿ ಗಡಿ ತಲುಪಿವೆ. ಕರ್ನಾಟಕದಿಂದಲೇ ನೂರಾರು ರೈತ-ಹೋರಾಟಗಾರರು ದೆಹಲಿ ಗಡಿಗೆ ತೆರಳಿದ್ದಾರೆ. ಇಂದಿನ ಗಣರಾಜ್ಯೋತ್ಸವ ಆಚರಣೆಯ ದಿನ ರೈತರು ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿಯೂ ರೈತರ ಟ್ರಾಕ್ಟರ್‌ ಪರೇಡ್‌ ನಡೆಯಲಿದ್ದು, ಈಗಾಗಲೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರೈತ ಹೋರಾಟಗಳು ಪ್ರಾರಂಭವಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಟ್ರಾಕ್ಟರ್‌ ರ್‍ಯಾಲಿ ನಡೆಯಲಿದ್ದು, ತಯಾರಿಗಳು ಪ್ರಾರಂಭವಾಗಿದೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಐದು ಹೆದ್ದಾರಿಗಳಿಂದ ಟ್ರಾಕ್ಟರ್‌ ರ್‍ಯಾಲಿ ನಗರದ ಫ್ರೀಡಂ ಪಾರ್ಕ್‌ ಕಡೆಗೆ ಹೊರಡಲಿವೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...