Homeಚಳವಳಿಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಸರ್ಕಾರ ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರು ಎಲ್ಲವೂ ಮುರಿದು ಬಿದ್ದಿದೆ. ಇಂದು ದೆಹಲಿಯ ಗಡಿಗಳ ಸುತ್ತಲೂ ಪ್ರತಿಭಟನಾ ನಿರತ ರೈತರು ಟ್ರಾಕ್ಟರ್‌ ಪರೇಡ್ ನಡೆಸಿ ಗಣರಾಜ್ಯೋತ್ಸವವನ್ನು, ರೈತರ ಗಣರಾಜ್ಯೋತ್ಸೋವ ಆಗಿ ನಡೆಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಟ್ರಾಕ್ಟರ್‌ ಪರೇಡ್ ಪ್ರಾರಂಭವಾಗಿದ್ದು, ದೆಹಲಿಯ ಸಿಂಘುಗಡಿಯಲ್ಲಿ ರೈತರ ಟ್ರಾಕ್ಟರ್‌ಗಳು ಸಾಲು ಸಾಲಾಗಿ ಮೆರವಣಿಗೆ ಹೊರಟಿವೆ. ರೈತರ ಪರೇಡ್‌ ಅನ್ನು ಅನುಮತಿಸಿ ರೂಟ್‌ ಮ್ಯಾಪ್‌ಕೂಡ ಹಾಕಿಕೊಟ್ಟಿದ್ದ ಪೊಲೀಸರು ಪರೇಡ್‌ ತಡೆಯಲು ಬೆಳ್ಳಂಬೆಳಗ್ಗೆಯೇ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡಲಾಗಿ ಜೋಡಿಸಿದ್ದರು.

ದೆಹಲಿಯಲ್ಲಿ ಐತಿಹಾಸಿಕ ಟ್ರಾಕ್ಟರ್‌‌ ರ್ಯಾಲಿ ಪ್ರಾರಂಭ; ದೆಹಲಿಯ ಸಿಂಘುಗಡಿಯಿಂದ ನಾನುಗೌರಿ.ಕಾಮ್ ನೇರ ಪ್ರಸಾರದ ಲೈವ್ ವಿಡಿಯೋ ನೋಡಿ

ಇದರಿಂದ ಸಿಟ್ಟಾಗಿರುವ ರೈತರು 12 ಗಂಟೆಗೆ ನಿಗದಿ ಮಾಡಿದ್ದ ರ್‍ಯಾಲಿಯನ್ನು 08 ಗಂಟೆಗೆ ಆರಂಭಿಸಿದ್ದು, ಪೊಲೀಸರ ಬ್ಯಾರಿಕೇಡ್ ಭೇದಿಸಿ ಟ್ರಾಕ್ಟರ್‌ ರ್‍ಯಾಲಿ ಹೊರಟಿದ್ದಾರೆ. ರ್‍ಯಾಲಿಯು ಶಾಂತಿಯುತವಾಗಿ ನಡೆಯುತ್ತಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಲಕ್ಷಾಂತರ ಟ್ರಾಕ್ಟರ್‌ಗಳು ಇಂದು ದೆಹಲಿಯ ಐದು ಗಡಿಭಾಗಗಳಿಂದ ರಾಜಧಾನಿಯ ಸುತ್ತಲೂ ಇರುವ ಹೆದ್ದಾರಿಯಲ್ಲಿ ಪರೇಡ್‌ ನಡೆಸುತ್ತಿವೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದ್ದು, ನೂರಾರು ಟ್ರಾಕ್ಟರ್‌ಗಳು ನಿನ್ನೆ (ಸೋಮವಾರ) ರಾತ್ರಿ ದೆಹಲಿ ಗಡಿ ತಲುಪಿವೆ. ಕರ್ನಾಟಕದಿಂದಲೇ ನೂರಾರು ರೈತ-ಹೋರಾಟಗಾರರು ದೆಹಲಿ ಗಡಿಗೆ ತೆರಳಿದ್ದಾರೆ. ಇಂದಿನ ಗಣರಾಜ್ಯೋತ್ಸವ ಆಚರಣೆಯ ದಿನ ರೈತರು ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿಯೂ ರೈತರ ಟ್ರಾಕ್ಟರ್‌ ಪರೇಡ್‌ ನಡೆಯಲಿದ್ದು, ಈಗಾಗಲೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರೈತ ಹೋರಾಟಗಳು ಪ್ರಾರಂಭವಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಟ್ರಾಕ್ಟರ್‌ ರ್‍ಯಾಲಿ ನಡೆಯಲಿದ್ದು, ತಯಾರಿಗಳು ಪ್ರಾರಂಭವಾಗಿದೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಐದು ಹೆದ್ದಾರಿಗಳಿಂದ ಟ್ರಾಕ್ಟರ್‌ ರ್‍ಯಾಲಿ ನಗರದ ಫ್ರೀಡಂ ಪಾರ್ಕ್‌ ಕಡೆಗೆ ಹೊರಡಲಿವೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...