Homeಚಳವಳಿಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಸರ್ಕಾರ ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರು ಎಲ್ಲವೂ ಮುರಿದು ಬಿದ್ದಿದೆ. ಇಂದು ದೆಹಲಿಯ ಗಡಿಗಳ ಸುತ್ತಲೂ ಪ್ರತಿಭಟನಾ ನಿರತ ರೈತರು ಟ್ರಾಕ್ಟರ್‌ ಪರೇಡ್ ನಡೆಸಿ ಗಣರಾಜ್ಯೋತ್ಸವವನ್ನು, ರೈತರ ಗಣರಾಜ್ಯೋತ್ಸೋವ ಆಗಿ ನಡೆಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಟ್ರಾಕ್ಟರ್‌ ಪರೇಡ್ ಪ್ರಾರಂಭವಾಗಿದ್ದು, ದೆಹಲಿಯ ಸಿಂಘುಗಡಿಯಲ್ಲಿ ರೈತರ ಟ್ರಾಕ್ಟರ್‌ಗಳು ಸಾಲು ಸಾಲಾಗಿ ಮೆರವಣಿಗೆ ಹೊರಟಿವೆ. ರೈತರ ಪರೇಡ್‌ ಅನ್ನು ಅನುಮತಿಸಿ ರೂಟ್‌ ಮ್ಯಾಪ್‌ಕೂಡ ಹಾಕಿಕೊಟ್ಟಿದ್ದ ಪೊಲೀಸರು ಪರೇಡ್‌ ತಡೆಯಲು ಬೆಳ್ಳಂಬೆಳಗ್ಗೆಯೇ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡಲಾಗಿ ಜೋಡಿಸಿದ್ದರು.

ದೆಹಲಿಯಲ್ಲಿ ಐತಿಹಾಸಿಕ ಟ್ರಾಕ್ಟರ್‌‌ ರ್ಯಾಲಿ ಪ್ರಾರಂಭ; ದೆಹಲಿಯ ಸಿಂಘುಗಡಿಯಿಂದ ನಾನುಗೌರಿ.ಕಾಮ್ ನೇರ ಪ್ರಸಾರದ ಲೈವ್ ವಿಡಿಯೋ ನೋಡಿ

ಇದರಿಂದ ಸಿಟ್ಟಾಗಿರುವ ರೈತರು 12 ಗಂಟೆಗೆ ನಿಗದಿ ಮಾಡಿದ್ದ ರ್‍ಯಾಲಿಯನ್ನು 08 ಗಂಟೆಗೆ ಆರಂಭಿಸಿದ್ದು, ಪೊಲೀಸರ ಬ್ಯಾರಿಕೇಡ್ ಭೇದಿಸಿ ಟ್ರಾಕ್ಟರ್‌ ರ್‍ಯಾಲಿ ಹೊರಟಿದ್ದಾರೆ. ರ್‍ಯಾಲಿಯು ಶಾಂತಿಯುತವಾಗಿ ನಡೆಯುತ್ತಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಲಕ್ಷಾಂತರ ಟ್ರಾಕ್ಟರ್‌ಗಳು ಇಂದು ದೆಹಲಿಯ ಐದು ಗಡಿಭಾಗಗಳಿಂದ ರಾಜಧಾನಿಯ ಸುತ್ತಲೂ ಇರುವ ಹೆದ್ದಾರಿಯಲ್ಲಿ ಪರೇಡ್‌ ನಡೆಸುತ್ತಿವೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದ್ದು, ನೂರಾರು ಟ್ರಾಕ್ಟರ್‌ಗಳು ನಿನ್ನೆ (ಸೋಮವಾರ) ರಾತ್ರಿ ದೆಹಲಿ ಗಡಿ ತಲುಪಿವೆ. ಕರ್ನಾಟಕದಿಂದಲೇ ನೂರಾರು ರೈತ-ಹೋರಾಟಗಾರರು ದೆಹಲಿ ಗಡಿಗೆ ತೆರಳಿದ್ದಾರೆ. ಇಂದಿನ ಗಣರಾಜ್ಯೋತ್ಸವ ಆಚರಣೆಯ ದಿನ ರೈತರು ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿಯೂ ರೈತರ ಟ್ರಾಕ್ಟರ್‌ ಪರೇಡ್‌ ನಡೆಯಲಿದ್ದು, ಈಗಾಗಲೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರೈತ ಹೋರಾಟಗಳು ಪ್ರಾರಂಭವಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಟ್ರಾಕ್ಟರ್‌ ರ್‍ಯಾಲಿ ನಡೆಯಲಿದ್ದು, ತಯಾರಿಗಳು ಪ್ರಾರಂಭವಾಗಿದೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಐದು ಹೆದ್ದಾರಿಗಳಿಂದ ಟ್ರಾಕ್ಟರ್‌ ರ್‍ಯಾಲಿ ನಗರದ ಫ್ರೀಡಂ ಪಾರ್ಕ್‌ ಕಡೆಗೆ ಹೊರಡಲಿವೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...