Homeಚಳವಳಿಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಸರ್ಕಾರ ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರು ಎಲ್ಲವೂ ಮುರಿದು ಬಿದ್ದಿದೆ. ಇಂದು ದೆಹಲಿಯ ಗಡಿಗಳ ಸುತ್ತಲೂ ಪ್ರತಿಭಟನಾ ನಿರತ ರೈತರು ಟ್ರಾಕ್ಟರ್‌ ಪರೇಡ್ ನಡೆಸಿ ಗಣರಾಜ್ಯೋತ್ಸವವನ್ನು, ರೈತರ ಗಣರಾಜ್ಯೋತ್ಸೋವ ಆಗಿ ನಡೆಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಟ್ರಾಕ್ಟರ್‌ ಪರೇಡ್ ಪ್ರಾರಂಭವಾಗಿದ್ದು, ದೆಹಲಿಯ ಸಿಂಘುಗಡಿಯಲ್ಲಿ ರೈತರ ಟ್ರಾಕ್ಟರ್‌ಗಳು ಸಾಲು ಸಾಲಾಗಿ ಮೆರವಣಿಗೆ ಹೊರಟಿವೆ. ರೈತರ ಪರೇಡ್‌ ಅನ್ನು ಅನುಮತಿಸಿ ರೂಟ್‌ ಮ್ಯಾಪ್‌ಕೂಡ ಹಾಕಿಕೊಟ್ಟಿದ್ದ ಪೊಲೀಸರು ಪರೇಡ್‌ ತಡೆಯಲು ಬೆಳ್ಳಂಬೆಳಗ್ಗೆಯೇ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡಲಾಗಿ ಜೋಡಿಸಿದ್ದರು.

ದೆಹಲಿಯಲ್ಲಿ ಐತಿಹಾಸಿಕ ಟ್ರಾಕ್ಟರ್‌‌ ರ್ಯಾಲಿ ಪ್ರಾರಂಭ; ದೆಹಲಿಯ ಸಿಂಘುಗಡಿಯಿಂದ ನಾನುಗೌರಿ.ಕಾಮ್ ನೇರ ಪ್ರಸಾರದ ಲೈವ್ ವಿಡಿಯೋ ನೋಡಿ

ಇದರಿಂದ ಸಿಟ್ಟಾಗಿರುವ ರೈತರು 12 ಗಂಟೆಗೆ ನಿಗದಿ ಮಾಡಿದ್ದ ರ್‍ಯಾಲಿಯನ್ನು 08 ಗಂಟೆಗೆ ಆರಂಭಿಸಿದ್ದು, ಪೊಲೀಸರ ಬ್ಯಾರಿಕೇಡ್ ಭೇದಿಸಿ ಟ್ರಾಕ್ಟರ್‌ ರ್‍ಯಾಲಿ ಹೊರಟಿದ್ದಾರೆ. ರ್‍ಯಾಲಿಯು ಶಾಂತಿಯುತವಾಗಿ ನಡೆಯುತ್ತಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಲಕ್ಷಾಂತರ ಟ್ರಾಕ್ಟರ್‌ಗಳು ಇಂದು ದೆಹಲಿಯ ಐದು ಗಡಿಭಾಗಗಳಿಂದ ರಾಜಧಾನಿಯ ಸುತ್ತಲೂ ಇರುವ ಹೆದ್ದಾರಿಯಲ್ಲಿ ಪರೇಡ್‌ ನಡೆಸುತ್ತಿವೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದ್ದು, ನೂರಾರು ಟ್ರಾಕ್ಟರ್‌ಗಳು ನಿನ್ನೆ (ಸೋಮವಾರ) ರಾತ್ರಿ ದೆಹಲಿ ಗಡಿ ತಲುಪಿವೆ. ಕರ್ನಾಟಕದಿಂದಲೇ ನೂರಾರು ರೈತ-ಹೋರಾಟಗಾರರು ದೆಹಲಿ ಗಡಿಗೆ ತೆರಳಿದ್ದಾರೆ. ಇಂದಿನ ಗಣರಾಜ್ಯೋತ್ಸವ ಆಚರಣೆಯ ದಿನ ರೈತರು ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿಯೂ ರೈತರ ಟ್ರಾಕ್ಟರ್‌ ಪರೇಡ್‌ ನಡೆಯಲಿದ್ದು, ಈಗಾಗಲೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರೈತ ಹೋರಾಟಗಳು ಪ್ರಾರಂಭವಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಟ್ರಾಕ್ಟರ್‌ ರ್‍ಯಾಲಿ ನಡೆಯಲಿದ್ದು, ತಯಾರಿಗಳು ಪ್ರಾರಂಭವಾಗಿದೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಐದು ಹೆದ್ದಾರಿಗಳಿಂದ ಟ್ರಾಕ್ಟರ್‌ ರ್‍ಯಾಲಿ ನಗರದ ಫ್ರೀಡಂ ಪಾರ್ಕ್‌ ಕಡೆಗೆ ಹೊರಡಲಿವೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...