Homeಚಳವಳಿಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಸರ್ಕಾರ ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರು ಎಲ್ಲವೂ ಮುರಿದು ಬಿದ್ದಿದೆ. ಇಂದು ದೆಹಲಿಯ ಗಡಿಗಳ ಸುತ್ತಲೂ ಪ್ರತಿಭಟನಾ ನಿರತ ರೈತರು ಟ್ರಾಕ್ಟರ್‌ ಪರೇಡ್ ನಡೆಸಿ ಗಣರಾಜ್ಯೋತ್ಸವವನ್ನು, ರೈತರ ಗಣರಾಜ್ಯೋತ್ಸೋವ ಆಗಿ ನಡೆಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಟ್ರಾಕ್ಟರ್‌ ಪರೇಡ್ ಪ್ರಾರಂಭವಾಗಿದ್ದು, ದೆಹಲಿಯ ಸಿಂಘುಗಡಿಯಲ್ಲಿ ರೈತರ ಟ್ರಾಕ್ಟರ್‌ಗಳು ಸಾಲು ಸಾಲಾಗಿ ಮೆರವಣಿಗೆ ಹೊರಟಿವೆ. ರೈತರ ಪರೇಡ್‌ ಅನ್ನು ಅನುಮತಿಸಿ ರೂಟ್‌ ಮ್ಯಾಪ್‌ಕೂಡ ಹಾಕಿಕೊಟ್ಟಿದ್ದ ಪೊಲೀಸರು ಪರೇಡ್‌ ತಡೆಯಲು ಬೆಳ್ಳಂಬೆಳಗ್ಗೆಯೇ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡಲಾಗಿ ಜೋಡಿಸಿದ್ದರು.

ದೆಹಲಿಯಲ್ಲಿ ಐತಿಹಾಸಿಕ ಟ್ರಾಕ್ಟರ್‌‌ ರ್ಯಾಲಿ ಪ್ರಾರಂಭ; ದೆಹಲಿಯ ಸಿಂಘುಗಡಿಯಿಂದ ನಾನುಗೌರಿ.ಕಾಮ್ ನೇರ ಪ್ರಸಾರದ ಲೈವ್ ವಿಡಿಯೋ ನೋಡಿ

ಇದರಿಂದ ಸಿಟ್ಟಾಗಿರುವ ರೈತರು 12 ಗಂಟೆಗೆ ನಿಗದಿ ಮಾಡಿದ್ದ ರ್‍ಯಾಲಿಯನ್ನು 08 ಗಂಟೆಗೆ ಆರಂಭಿಸಿದ್ದು, ಪೊಲೀಸರ ಬ್ಯಾರಿಕೇಡ್ ಭೇದಿಸಿ ಟ್ರಾಕ್ಟರ್‌ ರ್‍ಯಾಲಿ ಹೊರಟಿದ್ದಾರೆ. ರ್‍ಯಾಲಿಯು ಶಾಂತಿಯುತವಾಗಿ ನಡೆಯುತ್ತಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಲಕ್ಷಾಂತರ ಟ್ರಾಕ್ಟರ್‌ಗಳು ಇಂದು ದೆಹಲಿಯ ಐದು ಗಡಿಭಾಗಗಳಿಂದ ರಾಜಧಾನಿಯ ಸುತ್ತಲೂ ಇರುವ ಹೆದ್ದಾರಿಯಲ್ಲಿ ಪರೇಡ್‌ ನಡೆಸುತ್ತಿವೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದ್ದು, ನೂರಾರು ಟ್ರಾಕ್ಟರ್‌ಗಳು ನಿನ್ನೆ (ಸೋಮವಾರ) ರಾತ್ರಿ ದೆಹಲಿ ಗಡಿ ತಲುಪಿವೆ. ಕರ್ನಾಟಕದಿಂದಲೇ ನೂರಾರು ರೈತ-ಹೋರಾಟಗಾರರು ದೆಹಲಿ ಗಡಿಗೆ ತೆರಳಿದ್ದಾರೆ. ಇಂದಿನ ಗಣರಾಜ್ಯೋತ್ಸವ ಆಚರಣೆಯ ದಿನ ರೈತರು ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿಯೂ ರೈತರ ಟ್ರಾಕ್ಟರ್‌ ಪರೇಡ್‌ ನಡೆಯಲಿದ್ದು, ಈಗಾಗಲೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರೈತ ಹೋರಾಟಗಳು ಪ್ರಾರಂಭವಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಟ್ರಾಕ್ಟರ್‌ ರ್‍ಯಾಲಿ ನಡೆಯಲಿದ್ದು, ತಯಾರಿಗಳು ಪ್ರಾರಂಭವಾಗಿದೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಐದು ಹೆದ್ದಾರಿಗಳಿಂದ ಟ್ರಾಕ್ಟರ್‌ ರ್‍ಯಾಲಿ ನಗರದ ಫ್ರೀಡಂ ಪಾರ್ಕ್‌ ಕಡೆಗೆ ಹೊರಡಲಿವೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...