Homeಚಳವಳಿಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಸರ್ಕಾರ ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರು ಎಲ್ಲವೂ ಮುರಿದು ಬಿದ್ದಿದೆ. ಇಂದು ದೆಹಲಿಯ ಗಡಿಗಳ ಸುತ್ತಲೂ ಪ್ರತಿಭಟನಾ ನಿರತ ರೈತರು ಟ್ರಾಕ್ಟರ್‌ ಪರೇಡ್ ನಡೆಸಿ ಗಣರಾಜ್ಯೋತ್ಸವವನ್ನು, ರೈತರ ಗಣರಾಜ್ಯೋತ್ಸೋವ ಆಗಿ ನಡೆಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಟ್ರಾಕ್ಟರ್‌ ಪರೇಡ್ ಪ್ರಾರಂಭವಾಗಿದ್ದು, ದೆಹಲಿಯ ಸಿಂಘುಗಡಿಯಲ್ಲಿ ರೈತರ ಟ್ರಾಕ್ಟರ್‌ಗಳು ಸಾಲು ಸಾಲಾಗಿ ಮೆರವಣಿಗೆ ಹೊರಟಿವೆ. ರೈತರ ಪರೇಡ್‌ ಅನ್ನು ಅನುಮತಿಸಿ ರೂಟ್‌ ಮ್ಯಾಪ್‌ಕೂಡ ಹಾಕಿಕೊಟ್ಟಿದ್ದ ಪೊಲೀಸರು ಪರೇಡ್‌ ತಡೆಯಲು ಬೆಳ್ಳಂಬೆಳಗ್ಗೆಯೇ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡಲಾಗಿ ಜೋಡಿಸಿದ್ದರು.

ದೆಹಲಿಯಲ್ಲಿ ಐತಿಹಾಸಿಕ ಟ್ರಾಕ್ಟರ್‌‌ ರ್ಯಾಲಿ ಪ್ರಾರಂಭ; ದೆಹಲಿಯ ಸಿಂಘುಗಡಿಯಿಂದ ನಾನುಗೌರಿ.ಕಾಮ್ ನೇರ ಪ್ರಸಾರದ ಲೈವ್ ವಿಡಿಯೋ ನೋಡಿ

ಇದರಿಂದ ಸಿಟ್ಟಾಗಿರುವ ರೈತರು 12 ಗಂಟೆಗೆ ನಿಗದಿ ಮಾಡಿದ್ದ ರ್‍ಯಾಲಿಯನ್ನು 08 ಗಂಟೆಗೆ ಆರಂಭಿಸಿದ್ದು, ಪೊಲೀಸರ ಬ್ಯಾರಿಕೇಡ್ ಭೇದಿಸಿ ಟ್ರಾಕ್ಟರ್‌ ರ್‍ಯಾಲಿ ಹೊರಟಿದ್ದಾರೆ. ರ್‍ಯಾಲಿಯು ಶಾಂತಿಯುತವಾಗಿ ನಡೆಯುತ್ತಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಲಕ್ಷಾಂತರ ಟ್ರಾಕ್ಟರ್‌ಗಳು ಇಂದು ದೆಹಲಿಯ ಐದು ಗಡಿಭಾಗಗಳಿಂದ ರಾಜಧಾನಿಯ ಸುತ್ತಲೂ ಇರುವ ಹೆದ್ದಾರಿಯಲ್ಲಿ ಪರೇಡ್‌ ನಡೆಸುತ್ತಿವೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದ್ದು, ನೂರಾರು ಟ್ರಾಕ್ಟರ್‌ಗಳು ನಿನ್ನೆ (ಸೋಮವಾರ) ರಾತ್ರಿ ದೆಹಲಿ ಗಡಿ ತಲುಪಿವೆ. ಕರ್ನಾಟಕದಿಂದಲೇ ನೂರಾರು ರೈತ-ಹೋರಾಟಗಾರರು ದೆಹಲಿ ಗಡಿಗೆ ತೆರಳಿದ್ದಾರೆ. ಇಂದಿನ ಗಣರಾಜ್ಯೋತ್ಸವ ಆಚರಣೆಯ ದಿನ ರೈತರು ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿಯೂ ರೈತರ ಟ್ರಾಕ್ಟರ್‌ ಪರೇಡ್‌ ನಡೆಯಲಿದ್ದು, ಈಗಾಗಲೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರೈತ ಹೋರಾಟಗಳು ಪ್ರಾರಂಭವಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಟ್ರಾಕ್ಟರ್‌ ರ್‍ಯಾಲಿ ನಡೆಯಲಿದ್ದು, ತಯಾರಿಗಳು ಪ್ರಾರಂಭವಾಗಿದೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಐದು ಹೆದ್ದಾರಿಗಳಿಂದ ಟ್ರಾಕ್ಟರ್‌ ರ್‍ಯಾಲಿ ನಗರದ ಫ್ರೀಡಂ ಪಾರ್ಕ್‌ ಕಡೆಗೆ ಹೊರಡಲಿವೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...