HomeUncategorizedಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

- Advertisement -
- Advertisement -

“ಒಂದಂತೂ ಸತ್ಯ. ರಾಜಕೀಯ ವ್ಯಭಿಚಾರ ಮಾಡುತ್ತಿರುವುದು ಮಾತ್ರ ಸಾ. ರಾ ಮಹೇಶ್” ಸಾ. ರಾ ಮಹೇಶ್ ಒಂದು ಕೊಚ್ಚೆಗುಂಡಿ ಇದ್ದಂತೆ. ಅದಕ್ಕೆ ಕಲ್ಲು ಎಸೆದರೆ ಕೊಳಚೆ ನಮ್ಮ ಮೇಲೆ ಹಾರುತ್ತದೆ. ಸಾ.ರಾ ಮಹೇಶ್ ಗುಳ್ಳೆ ನರಿ ಎಂದೆಲ್ಲಾ ಬಾಯಿಗೆ ಬಂದಾಗೆ ಬೈಯ್ಯುತ್ತಿದ್ದ ಎಚ್. ವಿಶ್ವನಾಥ್ ರವರು ಮಾತು ಬದಲಿಸಿದ್ದಾರೆ. ಇದ್ದಕ್ಕಿದ್ದಹಾಗೆಯೇ ನಾವಿಬ್ಬರೂ ಒಂದೇ ಊರಿನವರು, ನಮ್ಮಲ್ಲೇಕ ದ್ವೇಷ ಮತ್ಸರ ಎಂದು ನೈಸ್ ಹೊಡೆಯಲು ಶುರು ಮಾಡಿದ್ದಾರೆ.

“ರಾಜಕೀಯವಾಗಿ ಮೂಲೆಗುಂಪಾಗಿ ಆಸ್ಪತ್ರೆಗೆ ಸೇರಿದ್ದವರನ್ನು ಕರೆತಂದು ನಮ್ಮ ಪಕ್ಷದಲ್ಲಿ ಅಧಿಕಾರ ನೀಡಿದ್ದೆವು. ಆದರೆ ಕೊನೆಗೆ ಅವರು ನಮ್ಮ ಪಕ್ಷದಲ್ಲಿದ್ದುಕೊಂಡೇ ದೇವೇಗೌಡರ ಕುಟುಂಬಕ್ಕೆ ಚೂರಿ ಹಾಕಿದರು. ಅವರನ್ನು ಕರೆತಂದದ್ದು ನಮ್ಮ ತಪ್ಪು. ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಯಾರೂ ಅಷ್ಟು ಸುಲಭವಾಗಿ ಉದ್ಧಾರವಾಗುವುದಿಲ್ಲ” ಎಂದಿದ್ದಲ್ಲದೇ ಅವರು ಎಚ್.ವಿಶ್ವನಾಥ್ ಅಲ್ಲ ಹುಚ್ಚ ವಿಶ್ವನಾಥ್ ಆಗಿದ್ದಾರೆ, ಬಿಜೆಪಿಯವರೆ ಅವರಿಗೆ ಚಿಕಿತ್ಸೆ ಕೊಡಿಸಿ ಎಂದು ಸಾ ರಾ ಮಹೇಶ್ ಕೂಡ ಛೇಡಿಸಿದ್ದರು.

ಹೌದು ಕಳೆದ ಮೂರು ತಿಂಗಳಿನಿಂದಲೂ ಪರಸ್ಪರ ಕೆಟ್ಟ ಬೈಗುಳಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರಲ್ಲಿ ಈಗ ಎಚ್.ವಿಶ್ವನಾಥ್ ರವರೆ ರಾಜಿಗೆ ಮುಂದಾಗಿದ್ದಾರೆ.

ಎಚ್ ವಿಶ್ವನಾಥ್ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಾ.ರಾ ಮಹೇಶ್ ಮೇಲಿನ ದ್ವೇಷವೂ ಒಂದು ಪ್ರಮುಖ ಕಾರಣವಾಗಿತ್ತು.  ಅಷ್ಟು ಮಾತ್ರವಲ್ಲದೇ ಮೂರು ದಿನಗಳ ಹಿಂದೆ ತಾನೇ  “ನೀನು ಯಾರ ಮನೆಯಲ್ಲಿ ತಟ್ಟೆ ಲೋಟ ತೊಳೆಯುತ್ತಿದ್ದೆ ಎಂಬುದು, ನೀನು ಬ್ಲೂ ಫಿಲ್ಮ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದು ಎಲ್ಲವೂ ನನಗೆ ಗೊತ್ತಿದೆ” ಎಂದೆಲ್ಲಾ ಆರ್ಭಟಿಸಿದ್ದ ಎಚ್.ವಿಶ್ವನಾಥ್ ರವರು ಇಂದು ಸಾ.ರಾ.ಮಹೇಶ್ ಕೊಟ್ಟ ಏಟಿಗೆ ಥಂಡು ಹೊಡೆದುಹೋಗಿದ್ದಾರೆ.

ಇದಕ್ಕೆ ಸಾ.ರಾ.ಮಹೇಶ್ ಕೊಟ್ಟ ಉತ್ತರವಿದೆಯೆಲ್ಲಾ ಅದು ಎಚ್.ವಿಶ್ವನಾಥ್ ರವರಿಗೆ ತಟ್ಟಬೇಕಾದ ಜಾಗಕ್ಕೆ ಸರಿಯಾಗಿ ಮುಟ್ಟಿದೆ. ಅವರೇಳಿದ್ದು ಇಷ್ಟೇ. ನಾನು ಬ್ಲೂ ಫಿಲ್ಮ್ ಮಾಡಲು ಹೋಗಿದ್ದರೆ ಅದರ ಹೀರೋ ಎಚ್.ವಿಶ್ವನಾಥ್‌ರವರೆ ಹೊರತು ಮತ್ಯಾರು ಅಲ್ಲ. ಅವರು ಹೀರೊ ಬ್ಲೂ ಬಾಯ್ ಆಗಿದ್ದಾರೆ. ಹಿರೋಇನ್ ಯಾರೆಂಬುದು ಸಹ ಗೊತ್ತಿದೆ. ಅವರಿಗೆ ಬೇಸಿಗೆಗೆ ಒಂದು, ಮಳೆಗಾಲಕ್ಕೆ ಒಂದು ಮತ್ತು ಚಳಿಗಾಲಕ್ಕೆ ಒಂದು ಮನೆಯಿತ್ತು. ಅದರ ವಿಡಿಯೋ ನನ್ನ ಬಳಿ ಇದೆ. ಇದು ಸುಳ್ಳೆಂದು ವಿಶ್ವನಾಥ್ ರವರು ಬಂದು ಪ್ರಮಾಣ ಮಾಡಲಿ ಎಂದು ಸಾ.ರಾ ಮಹೇಶ್ ಅಖಾಡಕ್ಕೆ ಕರೆದಿದ್ದರು. ಅಷ್ಟು ಮಾತ್ರವಲ್ಲ ಮೈಸೂರಿನ ಪತ್ರಿಕಾಗೋಷ್ಟಿಯಲ್ಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು.

ಈ ಏಟಿಗೆ ಎಚ್.ವಿಶ್ವನಾಥ್ ಸುಸ್ತಾಗಿದ್ದಾರೆ. ನಂತರ ಅವರು ನೀವು ಬೆಳೆಯುತ್ತಿರುವ ರಾಜಕಾರಣಿ ನಾನು ನಿವೃತ್ತಿಯ ಅಂಚಿನಲ್ಲಿದ್ದೇನೆ, ನಾವಿಬ್ಬರೂ ಒಂದೇ ಊರಿನವರು ಎಂದೆಲ್ಲಾ ತೇಪೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೂ ಮುಂದುವರೆದೆ ನಾವಿಬ್ಬರೂ ಗಾಜಿನ ಮನೆಯಲ್ಲಿದ್ದುಕೊಂಡು ಕಲ್ಲು ಹೊಡೆಯುವುದು ಬೇಡ ಎಂದಿದ್ದಾರೆ. ಅಲ್ಲಿಗೆ ಅವರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಂತಾಗಿದೆ ಎಂಬುದು ಹಲವರ ವಾದವಾಗಿದೆ.

ಯಾವಾಗ ಸಾ.ರಾ ಮಹೇಶ್ ಆಡಿಯೋ ಬಿಡುಗಡೆ ಮಾಡಿ, ಚಾಮುಂಡಿ ಬೆಟ್ಟಕ್ಕೆ ದೇವರ ಮುಂದೆ ಆಣೆ ಮಾಡಲು ಕರೆದರೊ ಅಲ್ಲಿಗೆ ವಿಶ್ವನಾಥ್ ರವರ ಜಂಘಾಬಲವೇ ಉಡುಗಿಹೋಗಿದೆ. ಬ್ಲೂ ಫಿಲ್ಮ್ ವಿಚಾರ ತೆಗೆದು ಇಂಗು ತಿಂದ ಮಂಗನಂತಾಗಿದ್ದಾರೆ. ಅಲ್ಲಿಯವರೆಗೂ ಕೇವಲ ಎದುರೇಟನ್ನಷ್ಟೇ ನೀಡುತ್ತಿದ್ದ ಸಾ ರಾ ಮಹೇಶ್ ಕೊನೆಗೆ ಸರಿಯಾದ ಬಾಂಬ್ ಇಟ್ಟಿದ್ದಾರೆ. ಅಲ್ಲಿಗೆ ಎಚ್.ವಿಶ್ವನಾಥ್‌ಗೆ ಬೇರೆ ದಾರಿ ಕಾಣದಾಗಿದೆ.

ಹಾಗಾಗಿ ಉಳಿದ ದಾರಿಯೆಂದರೆ ಶರಣಾಗುವುದಾಗಿದೆ. ಹಾಗಾಗಿಯೇ ಅವರು ಗಾಜಿನ ಮನೆಯಲ್ಲಿದ್ದೇವೆ ಎಂಬ ವಾಕ್ಯ ಬಳಸಿದ್ದಾರೆ. ನೀವಿನ್ನು ರಾಜಕೀಯದಲ್ಲಿ ಬೆಳೆಯಬೇಕಾಗಿರುವವರು ಎಂದು ಹೇಳಿದ್ದಾರೆ. ತನ್ನ ಬಂಡವಾಳ ಬಯಲಾದರೆ ಇಷ್ಟು ದಿನ ಇಟ್ಟುಕೊಂಡಿದ್ದ ಸಂತನ ಮುಖವಾಡ ಬಯಲಾಗುತ್ತದೆ ಎಂಬ ಭಯದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಮೂರು ತಿಂಗಳಿನಿಂದ ದಿನಕ್ಕೊಬ್ಬರಂತೆ ಪತ್ರಿಕಾಗೋಷ್ಠಿ ನಡೆಸಿ ಸಾಕಷ್ಟು ಮನರಂಜನೆಯನ್ನು, ಪತ್ರಕರ್ತರಿಗೆ ಸುದ್ದಿಯನ್ನು ಕೊಡುತ್ತಿದ್ದ ಇವರಿಬ್ಬರ ವಾದ-ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಸಾರ್ವಜನಿಕವಾಗಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ, ನಾವು ಹೀಗೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿದೆ, ನನ್ನಿಂದಲೇ ಎಲ್ಲೋ ತಪ್ಪಾಗಿದೆ ಎಂದು ವಿಶ್ವನಾಥ್ ಹೇಳಿದಾಗ ’ಮುತ್ಸದ್ದಿಯ ಮಾತುಗಳು’ ಎಂದು ಜನರಿಗೆ ಅನಿಸುತ್ತಿಲ್ಲ. ಸಾ.ರಾ.ಮಹೇಶ್ ಸತ್ಯವಂತ ಎಂದೂ ಯಾರಿಗೂ ಅನಿಸಿರಲಿಲ್ಲ. ಆದರೆ, ಈ ಬೆಳವಣಿಗೆಯಿಂದ ಮಹೇಶ್ ವಿಶ್ವನಾಥ್ ಬಗ್ಗೆ ಹೇಳುತ್ತಿರುವುದರಲ್ಲಿ ಏನೋ ಸತ್ಯ ಇರಬೇಕು ಎನಿಸಿದೆ.

ಕರ್ನಾಟಕದಲ್ಲಿ ಮುತ್ಸದ್ದಿ ರಾಜಕಾರಣಿ ಎಂಬಂತೆ ವರ್ತಿಸುತ್ತಿದ್ದ ವಿಶ್ವನಾಥ್ ಅವರು ಇಂತಹ ದುರಂತ ತಲುಪಿದ್ದು ಸಮಕಾಲೀನ ರಾಜಕಾರಣದ ವಿಪರ್ಯಾಸದ ಸಂಗತಿಗಳಲ್ಲೊಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...