HomeUncategorizedಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

- Advertisement -
- Advertisement -

“ಒಂದಂತೂ ಸತ್ಯ. ರಾಜಕೀಯ ವ್ಯಭಿಚಾರ ಮಾಡುತ್ತಿರುವುದು ಮಾತ್ರ ಸಾ. ರಾ ಮಹೇಶ್” ಸಾ. ರಾ ಮಹೇಶ್ ಒಂದು ಕೊಚ್ಚೆಗುಂಡಿ ಇದ್ದಂತೆ. ಅದಕ್ಕೆ ಕಲ್ಲು ಎಸೆದರೆ ಕೊಳಚೆ ನಮ್ಮ ಮೇಲೆ ಹಾರುತ್ತದೆ. ಸಾ.ರಾ ಮಹೇಶ್ ಗುಳ್ಳೆ ನರಿ ಎಂದೆಲ್ಲಾ ಬಾಯಿಗೆ ಬಂದಾಗೆ ಬೈಯ್ಯುತ್ತಿದ್ದ ಎಚ್. ವಿಶ್ವನಾಥ್ ರವರು ಮಾತು ಬದಲಿಸಿದ್ದಾರೆ. ಇದ್ದಕ್ಕಿದ್ದಹಾಗೆಯೇ ನಾವಿಬ್ಬರೂ ಒಂದೇ ಊರಿನವರು, ನಮ್ಮಲ್ಲೇಕ ದ್ವೇಷ ಮತ್ಸರ ಎಂದು ನೈಸ್ ಹೊಡೆಯಲು ಶುರು ಮಾಡಿದ್ದಾರೆ.

“ರಾಜಕೀಯವಾಗಿ ಮೂಲೆಗುಂಪಾಗಿ ಆಸ್ಪತ್ರೆಗೆ ಸೇರಿದ್ದವರನ್ನು ಕರೆತಂದು ನಮ್ಮ ಪಕ್ಷದಲ್ಲಿ ಅಧಿಕಾರ ನೀಡಿದ್ದೆವು. ಆದರೆ ಕೊನೆಗೆ ಅವರು ನಮ್ಮ ಪಕ್ಷದಲ್ಲಿದ್ದುಕೊಂಡೇ ದೇವೇಗೌಡರ ಕುಟುಂಬಕ್ಕೆ ಚೂರಿ ಹಾಕಿದರು. ಅವರನ್ನು ಕರೆತಂದದ್ದು ನಮ್ಮ ತಪ್ಪು. ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಯಾರೂ ಅಷ್ಟು ಸುಲಭವಾಗಿ ಉದ್ಧಾರವಾಗುವುದಿಲ್ಲ” ಎಂದಿದ್ದಲ್ಲದೇ ಅವರು ಎಚ್.ವಿಶ್ವನಾಥ್ ಅಲ್ಲ ಹುಚ್ಚ ವಿಶ್ವನಾಥ್ ಆಗಿದ್ದಾರೆ, ಬಿಜೆಪಿಯವರೆ ಅವರಿಗೆ ಚಿಕಿತ್ಸೆ ಕೊಡಿಸಿ ಎಂದು ಸಾ ರಾ ಮಹೇಶ್ ಕೂಡ ಛೇಡಿಸಿದ್ದರು.

ಹೌದು ಕಳೆದ ಮೂರು ತಿಂಗಳಿನಿಂದಲೂ ಪರಸ್ಪರ ಕೆಟ್ಟ ಬೈಗುಳಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರಲ್ಲಿ ಈಗ ಎಚ್.ವಿಶ್ವನಾಥ್ ರವರೆ ರಾಜಿಗೆ ಮುಂದಾಗಿದ್ದಾರೆ.

ಎಚ್ ವಿಶ್ವನಾಥ್ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಾ.ರಾ ಮಹೇಶ್ ಮೇಲಿನ ದ್ವೇಷವೂ ಒಂದು ಪ್ರಮುಖ ಕಾರಣವಾಗಿತ್ತು.  ಅಷ್ಟು ಮಾತ್ರವಲ್ಲದೇ ಮೂರು ದಿನಗಳ ಹಿಂದೆ ತಾನೇ  “ನೀನು ಯಾರ ಮನೆಯಲ್ಲಿ ತಟ್ಟೆ ಲೋಟ ತೊಳೆಯುತ್ತಿದ್ದೆ ಎಂಬುದು, ನೀನು ಬ್ಲೂ ಫಿಲ್ಮ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದು ಎಲ್ಲವೂ ನನಗೆ ಗೊತ್ತಿದೆ” ಎಂದೆಲ್ಲಾ ಆರ್ಭಟಿಸಿದ್ದ ಎಚ್.ವಿಶ್ವನಾಥ್ ರವರು ಇಂದು ಸಾ.ರಾ.ಮಹೇಶ್ ಕೊಟ್ಟ ಏಟಿಗೆ ಥಂಡು ಹೊಡೆದುಹೋಗಿದ್ದಾರೆ.

ಇದಕ್ಕೆ ಸಾ.ರಾ.ಮಹೇಶ್ ಕೊಟ್ಟ ಉತ್ತರವಿದೆಯೆಲ್ಲಾ ಅದು ಎಚ್.ವಿಶ್ವನಾಥ್ ರವರಿಗೆ ತಟ್ಟಬೇಕಾದ ಜಾಗಕ್ಕೆ ಸರಿಯಾಗಿ ಮುಟ್ಟಿದೆ. ಅವರೇಳಿದ್ದು ಇಷ್ಟೇ. ನಾನು ಬ್ಲೂ ಫಿಲ್ಮ್ ಮಾಡಲು ಹೋಗಿದ್ದರೆ ಅದರ ಹೀರೋ ಎಚ್.ವಿಶ್ವನಾಥ್‌ರವರೆ ಹೊರತು ಮತ್ಯಾರು ಅಲ್ಲ. ಅವರು ಹೀರೊ ಬ್ಲೂ ಬಾಯ್ ಆಗಿದ್ದಾರೆ. ಹಿರೋಇನ್ ಯಾರೆಂಬುದು ಸಹ ಗೊತ್ತಿದೆ. ಅವರಿಗೆ ಬೇಸಿಗೆಗೆ ಒಂದು, ಮಳೆಗಾಲಕ್ಕೆ ಒಂದು ಮತ್ತು ಚಳಿಗಾಲಕ್ಕೆ ಒಂದು ಮನೆಯಿತ್ತು. ಅದರ ವಿಡಿಯೋ ನನ್ನ ಬಳಿ ಇದೆ. ಇದು ಸುಳ್ಳೆಂದು ವಿಶ್ವನಾಥ್ ರವರು ಬಂದು ಪ್ರಮಾಣ ಮಾಡಲಿ ಎಂದು ಸಾ.ರಾ ಮಹೇಶ್ ಅಖಾಡಕ್ಕೆ ಕರೆದಿದ್ದರು. ಅಷ್ಟು ಮಾತ್ರವಲ್ಲ ಮೈಸೂರಿನ ಪತ್ರಿಕಾಗೋಷ್ಟಿಯಲ್ಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು.

ಈ ಏಟಿಗೆ ಎಚ್.ವಿಶ್ವನಾಥ್ ಸುಸ್ತಾಗಿದ್ದಾರೆ. ನಂತರ ಅವರು ನೀವು ಬೆಳೆಯುತ್ತಿರುವ ರಾಜಕಾರಣಿ ನಾನು ನಿವೃತ್ತಿಯ ಅಂಚಿನಲ್ಲಿದ್ದೇನೆ, ನಾವಿಬ್ಬರೂ ಒಂದೇ ಊರಿನವರು ಎಂದೆಲ್ಲಾ ತೇಪೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೂ ಮುಂದುವರೆದೆ ನಾವಿಬ್ಬರೂ ಗಾಜಿನ ಮನೆಯಲ್ಲಿದ್ದುಕೊಂಡು ಕಲ್ಲು ಹೊಡೆಯುವುದು ಬೇಡ ಎಂದಿದ್ದಾರೆ. ಅಲ್ಲಿಗೆ ಅವರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಂತಾಗಿದೆ ಎಂಬುದು ಹಲವರ ವಾದವಾಗಿದೆ.

ಯಾವಾಗ ಸಾ.ರಾ ಮಹೇಶ್ ಆಡಿಯೋ ಬಿಡುಗಡೆ ಮಾಡಿ, ಚಾಮುಂಡಿ ಬೆಟ್ಟಕ್ಕೆ ದೇವರ ಮುಂದೆ ಆಣೆ ಮಾಡಲು ಕರೆದರೊ ಅಲ್ಲಿಗೆ ವಿಶ್ವನಾಥ್ ರವರ ಜಂಘಾಬಲವೇ ಉಡುಗಿಹೋಗಿದೆ. ಬ್ಲೂ ಫಿಲ್ಮ್ ವಿಚಾರ ತೆಗೆದು ಇಂಗು ತಿಂದ ಮಂಗನಂತಾಗಿದ್ದಾರೆ. ಅಲ್ಲಿಯವರೆಗೂ ಕೇವಲ ಎದುರೇಟನ್ನಷ್ಟೇ ನೀಡುತ್ತಿದ್ದ ಸಾ ರಾ ಮಹೇಶ್ ಕೊನೆಗೆ ಸರಿಯಾದ ಬಾಂಬ್ ಇಟ್ಟಿದ್ದಾರೆ. ಅಲ್ಲಿಗೆ ಎಚ್.ವಿಶ್ವನಾಥ್‌ಗೆ ಬೇರೆ ದಾರಿ ಕಾಣದಾಗಿದೆ.

ಹಾಗಾಗಿ ಉಳಿದ ದಾರಿಯೆಂದರೆ ಶರಣಾಗುವುದಾಗಿದೆ. ಹಾಗಾಗಿಯೇ ಅವರು ಗಾಜಿನ ಮನೆಯಲ್ಲಿದ್ದೇವೆ ಎಂಬ ವಾಕ್ಯ ಬಳಸಿದ್ದಾರೆ. ನೀವಿನ್ನು ರಾಜಕೀಯದಲ್ಲಿ ಬೆಳೆಯಬೇಕಾಗಿರುವವರು ಎಂದು ಹೇಳಿದ್ದಾರೆ. ತನ್ನ ಬಂಡವಾಳ ಬಯಲಾದರೆ ಇಷ್ಟು ದಿನ ಇಟ್ಟುಕೊಂಡಿದ್ದ ಸಂತನ ಮುಖವಾಡ ಬಯಲಾಗುತ್ತದೆ ಎಂಬ ಭಯದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಮೂರು ತಿಂಗಳಿನಿಂದ ದಿನಕ್ಕೊಬ್ಬರಂತೆ ಪತ್ರಿಕಾಗೋಷ್ಠಿ ನಡೆಸಿ ಸಾಕಷ್ಟು ಮನರಂಜನೆಯನ್ನು, ಪತ್ರಕರ್ತರಿಗೆ ಸುದ್ದಿಯನ್ನು ಕೊಡುತ್ತಿದ್ದ ಇವರಿಬ್ಬರ ವಾದ-ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಸಾರ್ವಜನಿಕವಾಗಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ, ನಾವು ಹೀಗೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿದೆ, ನನ್ನಿಂದಲೇ ಎಲ್ಲೋ ತಪ್ಪಾಗಿದೆ ಎಂದು ವಿಶ್ವನಾಥ್ ಹೇಳಿದಾಗ ’ಮುತ್ಸದ್ದಿಯ ಮಾತುಗಳು’ ಎಂದು ಜನರಿಗೆ ಅನಿಸುತ್ತಿಲ್ಲ. ಸಾ.ರಾ.ಮಹೇಶ್ ಸತ್ಯವಂತ ಎಂದೂ ಯಾರಿಗೂ ಅನಿಸಿರಲಿಲ್ಲ. ಆದರೆ, ಈ ಬೆಳವಣಿಗೆಯಿಂದ ಮಹೇಶ್ ವಿಶ್ವನಾಥ್ ಬಗ್ಗೆ ಹೇಳುತ್ತಿರುವುದರಲ್ಲಿ ಏನೋ ಸತ್ಯ ಇರಬೇಕು ಎನಿಸಿದೆ.

ಕರ್ನಾಟಕದಲ್ಲಿ ಮುತ್ಸದ್ದಿ ರಾಜಕಾರಣಿ ಎಂಬಂತೆ ವರ್ತಿಸುತ್ತಿದ್ದ ವಿಶ್ವನಾಥ್ ಅವರು ಇಂತಹ ದುರಂತ ತಲುಪಿದ್ದು ಸಮಕಾಲೀನ ರಾಜಕಾರಣದ ವಿಪರ್ಯಾಸದ ಸಂಗತಿಗಳಲ್ಲೊಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...