HomeUncategorizedಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

- Advertisement -
- Advertisement -

“ಒಂದಂತೂ ಸತ್ಯ. ರಾಜಕೀಯ ವ್ಯಭಿಚಾರ ಮಾಡುತ್ತಿರುವುದು ಮಾತ್ರ ಸಾ. ರಾ ಮಹೇಶ್” ಸಾ. ರಾ ಮಹೇಶ್ ಒಂದು ಕೊಚ್ಚೆಗುಂಡಿ ಇದ್ದಂತೆ. ಅದಕ್ಕೆ ಕಲ್ಲು ಎಸೆದರೆ ಕೊಳಚೆ ನಮ್ಮ ಮೇಲೆ ಹಾರುತ್ತದೆ. ಸಾ.ರಾ ಮಹೇಶ್ ಗುಳ್ಳೆ ನರಿ ಎಂದೆಲ್ಲಾ ಬಾಯಿಗೆ ಬಂದಾಗೆ ಬೈಯ್ಯುತ್ತಿದ್ದ ಎಚ್. ವಿಶ್ವನಾಥ್ ರವರು ಮಾತು ಬದಲಿಸಿದ್ದಾರೆ. ಇದ್ದಕ್ಕಿದ್ದಹಾಗೆಯೇ ನಾವಿಬ್ಬರೂ ಒಂದೇ ಊರಿನವರು, ನಮ್ಮಲ್ಲೇಕ ದ್ವೇಷ ಮತ್ಸರ ಎಂದು ನೈಸ್ ಹೊಡೆಯಲು ಶುರು ಮಾಡಿದ್ದಾರೆ.

“ರಾಜಕೀಯವಾಗಿ ಮೂಲೆಗುಂಪಾಗಿ ಆಸ್ಪತ್ರೆಗೆ ಸೇರಿದ್ದವರನ್ನು ಕರೆತಂದು ನಮ್ಮ ಪಕ್ಷದಲ್ಲಿ ಅಧಿಕಾರ ನೀಡಿದ್ದೆವು. ಆದರೆ ಕೊನೆಗೆ ಅವರು ನಮ್ಮ ಪಕ್ಷದಲ್ಲಿದ್ದುಕೊಂಡೇ ದೇವೇಗೌಡರ ಕುಟುಂಬಕ್ಕೆ ಚೂರಿ ಹಾಕಿದರು. ಅವರನ್ನು ಕರೆತಂದದ್ದು ನಮ್ಮ ತಪ್ಪು. ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಯಾರೂ ಅಷ್ಟು ಸುಲಭವಾಗಿ ಉದ್ಧಾರವಾಗುವುದಿಲ್ಲ” ಎಂದಿದ್ದಲ್ಲದೇ ಅವರು ಎಚ್.ವಿಶ್ವನಾಥ್ ಅಲ್ಲ ಹುಚ್ಚ ವಿಶ್ವನಾಥ್ ಆಗಿದ್ದಾರೆ, ಬಿಜೆಪಿಯವರೆ ಅವರಿಗೆ ಚಿಕಿತ್ಸೆ ಕೊಡಿಸಿ ಎಂದು ಸಾ ರಾ ಮಹೇಶ್ ಕೂಡ ಛೇಡಿಸಿದ್ದರು.

ಹೌದು ಕಳೆದ ಮೂರು ತಿಂಗಳಿನಿಂದಲೂ ಪರಸ್ಪರ ಕೆಟ್ಟ ಬೈಗುಳಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರಲ್ಲಿ ಈಗ ಎಚ್.ವಿಶ್ವನಾಥ್ ರವರೆ ರಾಜಿಗೆ ಮುಂದಾಗಿದ್ದಾರೆ.

ಎಚ್ ವಿಶ್ವನಾಥ್ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಾ.ರಾ ಮಹೇಶ್ ಮೇಲಿನ ದ್ವೇಷವೂ ಒಂದು ಪ್ರಮುಖ ಕಾರಣವಾಗಿತ್ತು.  ಅಷ್ಟು ಮಾತ್ರವಲ್ಲದೇ ಮೂರು ದಿನಗಳ ಹಿಂದೆ ತಾನೇ  “ನೀನು ಯಾರ ಮನೆಯಲ್ಲಿ ತಟ್ಟೆ ಲೋಟ ತೊಳೆಯುತ್ತಿದ್ದೆ ಎಂಬುದು, ನೀನು ಬ್ಲೂ ಫಿಲ್ಮ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದು ಎಲ್ಲವೂ ನನಗೆ ಗೊತ್ತಿದೆ” ಎಂದೆಲ್ಲಾ ಆರ್ಭಟಿಸಿದ್ದ ಎಚ್.ವಿಶ್ವನಾಥ್ ರವರು ಇಂದು ಸಾ.ರಾ.ಮಹೇಶ್ ಕೊಟ್ಟ ಏಟಿಗೆ ಥಂಡು ಹೊಡೆದುಹೋಗಿದ್ದಾರೆ.

ಇದಕ್ಕೆ ಸಾ.ರಾ.ಮಹೇಶ್ ಕೊಟ್ಟ ಉತ್ತರವಿದೆಯೆಲ್ಲಾ ಅದು ಎಚ್.ವಿಶ್ವನಾಥ್ ರವರಿಗೆ ತಟ್ಟಬೇಕಾದ ಜಾಗಕ್ಕೆ ಸರಿಯಾಗಿ ಮುಟ್ಟಿದೆ. ಅವರೇಳಿದ್ದು ಇಷ್ಟೇ. ನಾನು ಬ್ಲೂ ಫಿಲ್ಮ್ ಮಾಡಲು ಹೋಗಿದ್ದರೆ ಅದರ ಹೀರೋ ಎಚ್.ವಿಶ್ವನಾಥ್‌ರವರೆ ಹೊರತು ಮತ್ಯಾರು ಅಲ್ಲ. ಅವರು ಹೀರೊ ಬ್ಲೂ ಬಾಯ್ ಆಗಿದ್ದಾರೆ. ಹಿರೋಇನ್ ಯಾರೆಂಬುದು ಸಹ ಗೊತ್ತಿದೆ. ಅವರಿಗೆ ಬೇಸಿಗೆಗೆ ಒಂದು, ಮಳೆಗಾಲಕ್ಕೆ ಒಂದು ಮತ್ತು ಚಳಿಗಾಲಕ್ಕೆ ಒಂದು ಮನೆಯಿತ್ತು. ಅದರ ವಿಡಿಯೋ ನನ್ನ ಬಳಿ ಇದೆ. ಇದು ಸುಳ್ಳೆಂದು ವಿಶ್ವನಾಥ್ ರವರು ಬಂದು ಪ್ರಮಾಣ ಮಾಡಲಿ ಎಂದು ಸಾ.ರಾ ಮಹೇಶ್ ಅಖಾಡಕ್ಕೆ ಕರೆದಿದ್ದರು. ಅಷ್ಟು ಮಾತ್ರವಲ್ಲ ಮೈಸೂರಿನ ಪತ್ರಿಕಾಗೋಷ್ಟಿಯಲ್ಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು.

ಈ ಏಟಿಗೆ ಎಚ್.ವಿಶ್ವನಾಥ್ ಸುಸ್ತಾಗಿದ್ದಾರೆ. ನಂತರ ಅವರು ನೀವು ಬೆಳೆಯುತ್ತಿರುವ ರಾಜಕಾರಣಿ ನಾನು ನಿವೃತ್ತಿಯ ಅಂಚಿನಲ್ಲಿದ್ದೇನೆ, ನಾವಿಬ್ಬರೂ ಒಂದೇ ಊರಿನವರು ಎಂದೆಲ್ಲಾ ತೇಪೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೂ ಮುಂದುವರೆದೆ ನಾವಿಬ್ಬರೂ ಗಾಜಿನ ಮನೆಯಲ್ಲಿದ್ದುಕೊಂಡು ಕಲ್ಲು ಹೊಡೆಯುವುದು ಬೇಡ ಎಂದಿದ್ದಾರೆ. ಅಲ್ಲಿಗೆ ಅವರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಂತಾಗಿದೆ ಎಂಬುದು ಹಲವರ ವಾದವಾಗಿದೆ.

ಯಾವಾಗ ಸಾ.ರಾ ಮಹೇಶ್ ಆಡಿಯೋ ಬಿಡುಗಡೆ ಮಾಡಿ, ಚಾಮುಂಡಿ ಬೆಟ್ಟಕ್ಕೆ ದೇವರ ಮುಂದೆ ಆಣೆ ಮಾಡಲು ಕರೆದರೊ ಅಲ್ಲಿಗೆ ವಿಶ್ವನಾಥ್ ರವರ ಜಂಘಾಬಲವೇ ಉಡುಗಿಹೋಗಿದೆ. ಬ್ಲೂ ಫಿಲ್ಮ್ ವಿಚಾರ ತೆಗೆದು ಇಂಗು ತಿಂದ ಮಂಗನಂತಾಗಿದ್ದಾರೆ. ಅಲ್ಲಿಯವರೆಗೂ ಕೇವಲ ಎದುರೇಟನ್ನಷ್ಟೇ ನೀಡುತ್ತಿದ್ದ ಸಾ ರಾ ಮಹೇಶ್ ಕೊನೆಗೆ ಸರಿಯಾದ ಬಾಂಬ್ ಇಟ್ಟಿದ್ದಾರೆ. ಅಲ್ಲಿಗೆ ಎಚ್.ವಿಶ್ವನಾಥ್‌ಗೆ ಬೇರೆ ದಾರಿ ಕಾಣದಾಗಿದೆ.

ಹಾಗಾಗಿ ಉಳಿದ ದಾರಿಯೆಂದರೆ ಶರಣಾಗುವುದಾಗಿದೆ. ಹಾಗಾಗಿಯೇ ಅವರು ಗಾಜಿನ ಮನೆಯಲ್ಲಿದ್ದೇವೆ ಎಂಬ ವಾಕ್ಯ ಬಳಸಿದ್ದಾರೆ. ನೀವಿನ್ನು ರಾಜಕೀಯದಲ್ಲಿ ಬೆಳೆಯಬೇಕಾಗಿರುವವರು ಎಂದು ಹೇಳಿದ್ದಾರೆ. ತನ್ನ ಬಂಡವಾಳ ಬಯಲಾದರೆ ಇಷ್ಟು ದಿನ ಇಟ್ಟುಕೊಂಡಿದ್ದ ಸಂತನ ಮುಖವಾಡ ಬಯಲಾಗುತ್ತದೆ ಎಂಬ ಭಯದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಮೂರು ತಿಂಗಳಿನಿಂದ ದಿನಕ್ಕೊಬ್ಬರಂತೆ ಪತ್ರಿಕಾಗೋಷ್ಠಿ ನಡೆಸಿ ಸಾಕಷ್ಟು ಮನರಂಜನೆಯನ್ನು, ಪತ್ರಕರ್ತರಿಗೆ ಸುದ್ದಿಯನ್ನು ಕೊಡುತ್ತಿದ್ದ ಇವರಿಬ್ಬರ ವಾದ-ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಸಾರ್ವಜನಿಕವಾಗಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ, ನಾವು ಹೀಗೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿದೆ, ನನ್ನಿಂದಲೇ ಎಲ್ಲೋ ತಪ್ಪಾಗಿದೆ ಎಂದು ವಿಶ್ವನಾಥ್ ಹೇಳಿದಾಗ ’ಮುತ್ಸದ್ದಿಯ ಮಾತುಗಳು’ ಎಂದು ಜನರಿಗೆ ಅನಿಸುತ್ತಿಲ್ಲ. ಸಾ.ರಾ.ಮಹೇಶ್ ಸತ್ಯವಂತ ಎಂದೂ ಯಾರಿಗೂ ಅನಿಸಿರಲಿಲ್ಲ. ಆದರೆ, ಈ ಬೆಳವಣಿಗೆಯಿಂದ ಮಹೇಶ್ ವಿಶ್ವನಾಥ್ ಬಗ್ಗೆ ಹೇಳುತ್ತಿರುವುದರಲ್ಲಿ ಏನೋ ಸತ್ಯ ಇರಬೇಕು ಎನಿಸಿದೆ.

ಕರ್ನಾಟಕದಲ್ಲಿ ಮುತ್ಸದ್ದಿ ರಾಜಕಾರಣಿ ಎಂಬಂತೆ ವರ್ತಿಸುತ್ತಿದ್ದ ವಿಶ್ವನಾಥ್ ಅವರು ಇಂತಹ ದುರಂತ ತಲುಪಿದ್ದು ಸಮಕಾಲೀನ ರಾಜಕಾರಣದ ವಿಪರ್ಯಾಸದ ಸಂಗತಿಗಳಲ್ಲೊಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...