HomeUncategorizedಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

- Advertisement -
- Advertisement -

“ಒಂದಂತೂ ಸತ್ಯ. ರಾಜಕೀಯ ವ್ಯಭಿಚಾರ ಮಾಡುತ್ತಿರುವುದು ಮಾತ್ರ ಸಾ. ರಾ ಮಹೇಶ್” ಸಾ. ರಾ ಮಹೇಶ್ ಒಂದು ಕೊಚ್ಚೆಗುಂಡಿ ಇದ್ದಂತೆ. ಅದಕ್ಕೆ ಕಲ್ಲು ಎಸೆದರೆ ಕೊಳಚೆ ನಮ್ಮ ಮೇಲೆ ಹಾರುತ್ತದೆ. ಸಾ.ರಾ ಮಹೇಶ್ ಗುಳ್ಳೆ ನರಿ ಎಂದೆಲ್ಲಾ ಬಾಯಿಗೆ ಬಂದಾಗೆ ಬೈಯ್ಯುತ್ತಿದ್ದ ಎಚ್. ವಿಶ್ವನಾಥ್ ರವರು ಮಾತು ಬದಲಿಸಿದ್ದಾರೆ. ಇದ್ದಕ್ಕಿದ್ದಹಾಗೆಯೇ ನಾವಿಬ್ಬರೂ ಒಂದೇ ಊರಿನವರು, ನಮ್ಮಲ್ಲೇಕ ದ್ವೇಷ ಮತ್ಸರ ಎಂದು ನೈಸ್ ಹೊಡೆಯಲು ಶುರು ಮಾಡಿದ್ದಾರೆ.

“ರಾಜಕೀಯವಾಗಿ ಮೂಲೆಗುಂಪಾಗಿ ಆಸ್ಪತ್ರೆಗೆ ಸೇರಿದ್ದವರನ್ನು ಕರೆತಂದು ನಮ್ಮ ಪಕ್ಷದಲ್ಲಿ ಅಧಿಕಾರ ನೀಡಿದ್ದೆವು. ಆದರೆ ಕೊನೆಗೆ ಅವರು ನಮ್ಮ ಪಕ್ಷದಲ್ಲಿದ್ದುಕೊಂಡೇ ದೇವೇಗೌಡರ ಕುಟುಂಬಕ್ಕೆ ಚೂರಿ ಹಾಕಿದರು. ಅವರನ್ನು ಕರೆತಂದದ್ದು ನಮ್ಮ ತಪ್ಪು. ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಯಾರೂ ಅಷ್ಟು ಸುಲಭವಾಗಿ ಉದ್ಧಾರವಾಗುವುದಿಲ್ಲ” ಎಂದಿದ್ದಲ್ಲದೇ ಅವರು ಎಚ್.ವಿಶ್ವನಾಥ್ ಅಲ್ಲ ಹುಚ್ಚ ವಿಶ್ವನಾಥ್ ಆಗಿದ್ದಾರೆ, ಬಿಜೆಪಿಯವರೆ ಅವರಿಗೆ ಚಿಕಿತ್ಸೆ ಕೊಡಿಸಿ ಎಂದು ಸಾ ರಾ ಮಹೇಶ್ ಕೂಡ ಛೇಡಿಸಿದ್ದರು.

ಹೌದು ಕಳೆದ ಮೂರು ತಿಂಗಳಿನಿಂದಲೂ ಪರಸ್ಪರ ಕೆಟ್ಟ ಬೈಗುಳಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರಲ್ಲಿ ಈಗ ಎಚ್.ವಿಶ್ವನಾಥ್ ರವರೆ ರಾಜಿಗೆ ಮುಂದಾಗಿದ್ದಾರೆ.

ಎಚ್ ವಿಶ್ವನಾಥ್ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಾ.ರಾ ಮಹೇಶ್ ಮೇಲಿನ ದ್ವೇಷವೂ ಒಂದು ಪ್ರಮುಖ ಕಾರಣವಾಗಿತ್ತು.  ಅಷ್ಟು ಮಾತ್ರವಲ್ಲದೇ ಮೂರು ದಿನಗಳ ಹಿಂದೆ ತಾನೇ  “ನೀನು ಯಾರ ಮನೆಯಲ್ಲಿ ತಟ್ಟೆ ಲೋಟ ತೊಳೆಯುತ್ತಿದ್ದೆ ಎಂಬುದು, ನೀನು ಬ್ಲೂ ಫಿಲ್ಮ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದು ಎಲ್ಲವೂ ನನಗೆ ಗೊತ್ತಿದೆ” ಎಂದೆಲ್ಲಾ ಆರ್ಭಟಿಸಿದ್ದ ಎಚ್.ವಿಶ್ವನಾಥ್ ರವರು ಇಂದು ಸಾ.ರಾ.ಮಹೇಶ್ ಕೊಟ್ಟ ಏಟಿಗೆ ಥಂಡು ಹೊಡೆದುಹೋಗಿದ್ದಾರೆ.

ಇದಕ್ಕೆ ಸಾ.ರಾ.ಮಹೇಶ್ ಕೊಟ್ಟ ಉತ್ತರವಿದೆಯೆಲ್ಲಾ ಅದು ಎಚ್.ವಿಶ್ವನಾಥ್ ರವರಿಗೆ ತಟ್ಟಬೇಕಾದ ಜಾಗಕ್ಕೆ ಸರಿಯಾಗಿ ಮುಟ್ಟಿದೆ. ಅವರೇಳಿದ್ದು ಇಷ್ಟೇ. ನಾನು ಬ್ಲೂ ಫಿಲ್ಮ್ ಮಾಡಲು ಹೋಗಿದ್ದರೆ ಅದರ ಹೀರೋ ಎಚ್.ವಿಶ್ವನಾಥ್‌ರವರೆ ಹೊರತು ಮತ್ಯಾರು ಅಲ್ಲ. ಅವರು ಹೀರೊ ಬ್ಲೂ ಬಾಯ್ ಆಗಿದ್ದಾರೆ. ಹಿರೋಇನ್ ಯಾರೆಂಬುದು ಸಹ ಗೊತ್ತಿದೆ. ಅವರಿಗೆ ಬೇಸಿಗೆಗೆ ಒಂದು, ಮಳೆಗಾಲಕ್ಕೆ ಒಂದು ಮತ್ತು ಚಳಿಗಾಲಕ್ಕೆ ಒಂದು ಮನೆಯಿತ್ತು. ಅದರ ವಿಡಿಯೋ ನನ್ನ ಬಳಿ ಇದೆ. ಇದು ಸುಳ್ಳೆಂದು ವಿಶ್ವನಾಥ್ ರವರು ಬಂದು ಪ್ರಮಾಣ ಮಾಡಲಿ ಎಂದು ಸಾ.ರಾ ಮಹೇಶ್ ಅಖಾಡಕ್ಕೆ ಕರೆದಿದ್ದರು. ಅಷ್ಟು ಮಾತ್ರವಲ್ಲ ಮೈಸೂರಿನ ಪತ್ರಿಕಾಗೋಷ್ಟಿಯಲ್ಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು.

ಈ ಏಟಿಗೆ ಎಚ್.ವಿಶ್ವನಾಥ್ ಸುಸ್ತಾಗಿದ್ದಾರೆ. ನಂತರ ಅವರು ನೀವು ಬೆಳೆಯುತ್ತಿರುವ ರಾಜಕಾರಣಿ ನಾನು ನಿವೃತ್ತಿಯ ಅಂಚಿನಲ್ಲಿದ್ದೇನೆ, ನಾವಿಬ್ಬರೂ ಒಂದೇ ಊರಿನವರು ಎಂದೆಲ್ಲಾ ತೇಪೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೂ ಮುಂದುವರೆದೆ ನಾವಿಬ್ಬರೂ ಗಾಜಿನ ಮನೆಯಲ್ಲಿದ್ದುಕೊಂಡು ಕಲ್ಲು ಹೊಡೆಯುವುದು ಬೇಡ ಎಂದಿದ್ದಾರೆ. ಅಲ್ಲಿಗೆ ಅವರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಂತಾಗಿದೆ ಎಂಬುದು ಹಲವರ ವಾದವಾಗಿದೆ.

ಯಾವಾಗ ಸಾ.ರಾ ಮಹೇಶ್ ಆಡಿಯೋ ಬಿಡುಗಡೆ ಮಾಡಿ, ಚಾಮುಂಡಿ ಬೆಟ್ಟಕ್ಕೆ ದೇವರ ಮುಂದೆ ಆಣೆ ಮಾಡಲು ಕರೆದರೊ ಅಲ್ಲಿಗೆ ವಿಶ್ವನಾಥ್ ರವರ ಜಂಘಾಬಲವೇ ಉಡುಗಿಹೋಗಿದೆ. ಬ್ಲೂ ಫಿಲ್ಮ್ ವಿಚಾರ ತೆಗೆದು ಇಂಗು ತಿಂದ ಮಂಗನಂತಾಗಿದ್ದಾರೆ. ಅಲ್ಲಿಯವರೆಗೂ ಕೇವಲ ಎದುರೇಟನ್ನಷ್ಟೇ ನೀಡುತ್ತಿದ್ದ ಸಾ ರಾ ಮಹೇಶ್ ಕೊನೆಗೆ ಸರಿಯಾದ ಬಾಂಬ್ ಇಟ್ಟಿದ್ದಾರೆ. ಅಲ್ಲಿಗೆ ಎಚ್.ವಿಶ್ವನಾಥ್‌ಗೆ ಬೇರೆ ದಾರಿ ಕಾಣದಾಗಿದೆ.

ಹಾಗಾಗಿ ಉಳಿದ ದಾರಿಯೆಂದರೆ ಶರಣಾಗುವುದಾಗಿದೆ. ಹಾಗಾಗಿಯೇ ಅವರು ಗಾಜಿನ ಮನೆಯಲ್ಲಿದ್ದೇವೆ ಎಂಬ ವಾಕ್ಯ ಬಳಸಿದ್ದಾರೆ. ನೀವಿನ್ನು ರಾಜಕೀಯದಲ್ಲಿ ಬೆಳೆಯಬೇಕಾಗಿರುವವರು ಎಂದು ಹೇಳಿದ್ದಾರೆ. ತನ್ನ ಬಂಡವಾಳ ಬಯಲಾದರೆ ಇಷ್ಟು ದಿನ ಇಟ್ಟುಕೊಂಡಿದ್ದ ಸಂತನ ಮುಖವಾಡ ಬಯಲಾಗುತ್ತದೆ ಎಂಬ ಭಯದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಮೂರು ತಿಂಗಳಿನಿಂದ ದಿನಕ್ಕೊಬ್ಬರಂತೆ ಪತ್ರಿಕಾಗೋಷ್ಠಿ ನಡೆಸಿ ಸಾಕಷ್ಟು ಮನರಂಜನೆಯನ್ನು, ಪತ್ರಕರ್ತರಿಗೆ ಸುದ್ದಿಯನ್ನು ಕೊಡುತ್ತಿದ್ದ ಇವರಿಬ್ಬರ ವಾದ-ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಸಾರ್ವಜನಿಕವಾಗಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ, ನಾವು ಹೀಗೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿದೆ, ನನ್ನಿಂದಲೇ ಎಲ್ಲೋ ತಪ್ಪಾಗಿದೆ ಎಂದು ವಿಶ್ವನಾಥ್ ಹೇಳಿದಾಗ ’ಮುತ್ಸದ್ದಿಯ ಮಾತುಗಳು’ ಎಂದು ಜನರಿಗೆ ಅನಿಸುತ್ತಿಲ್ಲ. ಸಾ.ರಾ.ಮಹೇಶ್ ಸತ್ಯವಂತ ಎಂದೂ ಯಾರಿಗೂ ಅನಿಸಿರಲಿಲ್ಲ. ಆದರೆ, ಈ ಬೆಳವಣಿಗೆಯಿಂದ ಮಹೇಶ್ ವಿಶ್ವನಾಥ್ ಬಗ್ಗೆ ಹೇಳುತ್ತಿರುವುದರಲ್ಲಿ ಏನೋ ಸತ್ಯ ಇರಬೇಕು ಎನಿಸಿದೆ.

ಕರ್ನಾಟಕದಲ್ಲಿ ಮುತ್ಸದ್ದಿ ರಾಜಕಾರಣಿ ಎಂಬಂತೆ ವರ್ತಿಸುತ್ತಿದ್ದ ವಿಶ್ವನಾಥ್ ಅವರು ಇಂತಹ ದುರಂತ ತಲುಪಿದ್ದು ಸಮಕಾಲೀನ ರಾಜಕಾರಣದ ವಿಪರ್ಯಾಸದ ಸಂಗತಿಗಳಲ್ಲೊಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...