HomeUncategorizedಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

- Advertisement -
- Advertisement -

“ಒಂದಂತೂ ಸತ್ಯ. ರಾಜಕೀಯ ವ್ಯಭಿಚಾರ ಮಾಡುತ್ತಿರುವುದು ಮಾತ್ರ ಸಾ. ರಾ ಮಹೇಶ್” ಸಾ. ರಾ ಮಹೇಶ್ ಒಂದು ಕೊಚ್ಚೆಗುಂಡಿ ಇದ್ದಂತೆ. ಅದಕ್ಕೆ ಕಲ್ಲು ಎಸೆದರೆ ಕೊಳಚೆ ನಮ್ಮ ಮೇಲೆ ಹಾರುತ್ತದೆ. ಸಾ.ರಾ ಮಹೇಶ್ ಗುಳ್ಳೆ ನರಿ ಎಂದೆಲ್ಲಾ ಬಾಯಿಗೆ ಬಂದಾಗೆ ಬೈಯ್ಯುತ್ತಿದ್ದ ಎಚ್. ವಿಶ್ವನಾಥ್ ರವರು ಮಾತು ಬದಲಿಸಿದ್ದಾರೆ. ಇದ್ದಕ್ಕಿದ್ದಹಾಗೆಯೇ ನಾವಿಬ್ಬರೂ ಒಂದೇ ಊರಿನವರು, ನಮ್ಮಲ್ಲೇಕ ದ್ವೇಷ ಮತ್ಸರ ಎಂದು ನೈಸ್ ಹೊಡೆಯಲು ಶುರು ಮಾಡಿದ್ದಾರೆ.

“ರಾಜಕೀಯವಾಗಿ ಮೂಲೆಗುಂಪಾಗಿ ಆಸ್ಪತ್ರೆಗೆ ಸೇರಿದ್ದವರನ್ನು ಕರೆತಂದು ನಮ್ಮ ಪಕ್ಷದಲ್ಲಿ ಅಧಿಕಾರ ನೀಡಿದ್ದೆವು. ಆದರೆ ಕೊನೆಗೆ ಅವರು ನಮ್ಮ ಪಕ್ಷದಲ್ಲಿದ್ದುಕೊಂಡೇ ದೇವೇಗೌಡರ ಕುಟುಂಬಕ್ಕೆ ಚೂರಿ ಹಾಕಿದರು. ಅವರನ್ನು ಕರೆತಂದದ್ದು ನಮ್ಮ ತಪ್ಪು. ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಯಾರೂ ಅಷ್ಟು ಸುಲಭವಾಗಿ ಉದ್ಧಾರವಾಗುವುದಿಲ್ಲ” ಎಂದಿದ್ದಲ್ಲದೇ ಅವರು ಎಚ್.ವಿಶ್ವನಾಥ್ ಅಲ್ಲ ಹುಚ್ಚ ವಿಶ್ವನಾಥ್ ಆಗಿದ್ದಾರೆ, ಬಿಜೆಪಿಯವರೆ ಅವರಿಗೆ ಚಿಕಿತ್ಸೆ ಕೊಡಿಸಿ ಎಂದು ಸಾ ರಾ ಮಹೇಶ್ ಕೂಡ ಛೇಡಿಸಿದ್ದರು.

ಹೌದು ಕಳೆದ ಮೂರು ತಿಂಗಳಿನಿಂದಲೂ ಪರಸ್ಪರ ಕೆಟ್ಟ ಬೈಗುಳಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರಲ್ಲಿ ಈಗ ಎಚ್.ವಿಶ್ವನಾಥ್ ರವರೆ ರಾಜಿಗೆ ಮುಂದಾಗಿದ್ದಾರೆ.

ಎಚ್ ವಿಶ್ವನಾಥ್ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಾ.ರಾ ಮಹೇಶ್ ಮೇಲಿನ ದ್ವೇಷವೂ ಒಂದು ಪ್ರಮುಖ ಕಾರಣವಾಗಿತ್ತು.  ಅಷ್ಟು ಮಾತ್ರವಲ್ಲದೇ ಮೂರು ದಿನಗಳ ಹಿಂದೆ ತಾನೇ  “ನೀನು ಯಾರ ಮನೆಯಲ್ಲಿ ತಟ್ಟೆ ಲೋಟ ತೊಳೆಯುತ್ತಿದ್ದೆ ಎಂಬುದು, ನೀನು ಬ್ಲೂ ಫಿಲ್ಮ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದು ಎಲ್ಲವೂ ನನಗೆ ಗೊತ್ತಿದೆ” ಎಂದೆಲ್ಲಾ ಆರ್ಭಟಿಸಿದ್ದ ಎಚ್.ವಿಶ್ವನಾಥ್ ರವರು ಇಂದು ಸಾ.ರಾ.ಮಹೇಶ್ ಕೊಟ್ಟ ಏಟಿಗೆ ಥಂಡು ಹೊಡೆದುಹೋಗಿದ್ದಾರೆ.

ಇದಕ್ಕೆ ಸಾ.ರಾ.ಮಹೇಶ್ ಕೊಟ್ಟ ಉತ್ತರವಿದೆಯೆಲ್ಲಾ ಅದು ಎಚ್.ವಿಶ್ವನಾಥ್ ರವರಿಗೆ ತಟ್ಟಬೇಕಾದ ಜಾಗಕ್ಕೆ ಸರಿಯಾಗಿ ಮುಟ್ಟಿದೆ. ಅವರೇಳಿದ್ದು ಇಷ್ಟೇ. ನಾನು ಬ್ಲೂ ಫಿಲ್ಮ್ ಮಾಡಲು ಹೋಗಿದ್ದರೆ ಅದರ ಹೀರೋ ಎಚ್.ವಿಶ್ವನಾಥ್‌ರವರೆ ಹೊರತು ಮತ್ಯಾರು ಅಲ್ಲ. ಅವರು ಹೀರೊ ಬ್ಲೂ ಬಾಯ್ ಆಗಿದ್ದಾರೆ. ಹಿರೋಇನ್ ಯಾರೆಂಬುದು ಸಹ ಗೊತ್ತಿದೆ. ಅವರಿಗೆ ಬೇಸಿಗೆಗೆ ಒಂದು, ಮಳೆಗಾಲಕ್ಕೆ ಒಂದು ಮತ್ತು ಚಳಿಗಾಲಕ್ಕೆ ಒಂದು ಮನೆಯಿತ್ತು. ಅದರ ವಿಡಿಯೋ ನನ್ನ ಬಳಿ ಇದೆ. ಇದು ಸುಳ್ಳೆಂದು ವಿಶ್ವನಾಥ್ ರವರು ಬಂದು ಪ್ರಮಾಣ ಮಾಡಲಿ ಎಂದು ಸಾ.ರಾ ಮಹೇಶ್ ಅಖಾಡಕ್ಕೆ ಕರೆದಿದ್ದರು. ಅಷ್ಟು ಮಾತ್ರವಲ್ಲ ಮೈಸೂರಿನ ಪತ್ರಿಕಾಗೋಷ್ಟಿಯಲ್ಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು.

ಈ ಏಟಿಗೆ ಎಚ್.ವಿಶ್ವನಾಥ್ ಸುಸ್ತಾಗಿದ್ದಾರೆ. ನಂತರ ಅವರು ನೀವು ಬೆಳೆಯುತ್ತಿರುವ ರಾಜಕಾರಣಿ ನಾನು ನಿವೃತ್ತಿಯ ಅಂಚಿನಲ್ಲಿದ್ದೇನೆ, ನಾವಿಬ್ಬರೂ ಒಂದೇ ಊರಿನವರು ಎಂದೆಲ್ಲಾ ತೇಪೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೂ ಮುಂದುವರೆದೆ ನಾವಿಬ್ಬರೂ ಗಾಜಿನ ಮನೆಯಲ್ಲಿದ್ದುಕೊಂಡು ಕಲ್ಲು ಹೊಡೆಯುವುದು ಬೇಡ ಎಂದಿದ್ದಾರೆ. ಅಲ್ಲಿಗೆ ಅವರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಂತಾಗಿದೆ ಎಂಬುದು ಹಲವರ ವಾದವಾಗಿದೆ.

ಯಾವಾಗ ಸಾ.ರಾ ಮಹೇಶ್ ಆಡಿಯೋ ಬಿಡುಗಡೆ ಮಾಡಿ, ಚಾಮುಂಡಿ ಬೆಟ್ಟಕ್ಕೆ ದೇವರ ಮುಂದೆ ಆಣೆ ಮಾಡಲು ಕರೆದರೊ ಅಲ್ಲಿಗೆ ವಿಶ್ವನಾಥ್ ರವರ ಜಂಘಾಬಲವೇ ಉಡುಗಿಹೋಗಿದೆ. ಬ್ಲೂ ಫಿಲ್ಮ್ ವಿಚಾರ ತೆಗೆದು ಇಂಗು ತಿಂದ ಮಂಗನಂತಾಗಿದ್ದಾರೆ. ಅಲ್ಲಿಯವರೆಗೂ ಕೇವಲ ಎದುರೇಟನ್ನಷ್ಟೇ ನೀಡುತ್ತಿದ್ದ ಸಾ ರಾ ಮಹೇಶ್ ಕೊನೆಗೆ ಸರಿಯಾದ ಬಾಂಬ್ ಇಟ್ಟಿದ್ದಾರೆ. ಅಲ್ಲಿಗೆ ಎಚ್.ವಿಶ್ವನಾಥ್‌ಗೆ ಬೇರೆ ದಾರಿ ಕಾಣದಾಗಿದೆ.

ಹಾಗಾಗಿ ಉಳಿದ ದಾರಿಯೆಂದರೆ ಶರಣಾಗುವುದಾಗಿದೆ. ಹಾಗಾಗಿಯೇ ಅವರು ಗಾಜಿನ ಮನೆಯಲ್ಲಿದ್ದೇವೆ ಎಂಬ ವಾಕ್ಯ ಬಳಸಿದ್ದಾರೆ. ನೀವಿನ್ನು ರಾಜಕೀಯದಲ್ಲಿ ಬೆಳೆಯಬೇಕಾಗಿರುವವರು ಎಂದು ಹೇಳಿದ್ದಾರೆ. ತನ್ನ ಬಂಡವಾಳ ಬಯಲಾದರೆ ಇಷ್ಟು ದಿನ ಇಟ್ಟುಕೊಂಡಿದ್ದ ಸಂತನ ಮುಖವಾಡ ಬಯಲಾಗುತ್ತದೆ ಎಂಬ ಭಯದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಮೂರು ತಿಂಗಳಿನಿಂದ ದಿನಕ್ಕೊಬ್ಬರಂತೆ ಪತ್ರಿಕಾಗೋಷ್ಠಿ ನಡೆಸಿ ಸಾಕಷ್ಟು ಮನರಂಜನೆಯನ್ನು, ಪತ್ರಕರ್ತರಿಗೆ ಸುದ್ದಿಯನ್ನು ಕೊಡುತ್ತಿದ್ದ ಇವರಿಬ್ಬರ ವಾದ-ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಸಾರ್ವಜನಿಕವಾಗಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ, ನಾವು ಹೀಗೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿದೆ, ನನ್ನಿಂದಲೇ ಎಲ್ಲೋ ತಪ್ಪಾಗಿದೆ ಎಂದು ವಿಶ್ವನಾಥ್ ಹೇಳಿದಾಗ ’ಮುತ್ಸದ್ದಿಯ ಮಾತುಗಳು’ ಎಂದು ಜನರಿಗೆ ಅನಿಸುತ್ತಿಲ್ಲ. ಸಾ.ರಾ.ಮಹೇಶ್ ಸತ್ಯವಂತ ಎಂದೂ ಯಾರಿಗೂ ಅನಿಸಿರಲಿಲ್ಲ. ಆದರೆ, ಈ ಬೆಳವಣಿಗೆಯಿಂದ ಮಹೇಶ್ ವಿಶ್ವನಾಥ್ ಬಗ್ಗೆ ಹೇಳುತ್ತಿರುವುದರಲ್ಲಿ ಏನೋ ಸತ್ಯ ಇರಬೇಕು ಎನಿಸಿದೆ.

ಕರ್ನಾಟಕದಲ್ಲಿ ಮುತ್ಸದ್ದಿ ರಾಜಕಾರಣಿ ಎಂಬಂತೆ ವರ್ತಿಸುತ್ತಿದ್ದ ವಿಶ್ವನಾಥ್ ಅವರು ಇಂತಹ ದುರಂತ ತಲುಪಿದ್ದು ಸಮಕಾಲೀನ ರಾಜಕಾರಣದ ವಿಪರ್ಯಾಸದ ಸಂಗತಿಗಳಲ್ಲೊಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...