Homeಮುಖಪುಟಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳದ ತಿರುವಾಂಕೂರು ದೇವಸ್ಥಾನ ಮಂಡಳಿ ನಕಲಿ ರಶೀದಿ ಸಲ್ಲಿಸುವ ಮೂಲಕ ದೊಡ್ಡ ಪ್ರಮಾಣದ ಭ್ರಷ್ಟಾಚಾರವಾಗಿರುವುದರಿಂದ ದೇವಸ್ಥಾನದ ವಿಚಕ್ಷಣಾ ದಳ ರದ್ದುಪಡಿಸಿರುವ ಕುರಿತು ಮಾಧ್ಯಮ ವರದಿಯನ್ನು ಆಧರಿಸಿ ಮಂಗಳವಾರ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ದೇವಸ್ಥಾನ ಮಂಡಳಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಹಿರಿಯ ಅಧಿಕಾರಿಗಳು ದೇವಸ್ಥಾನದ ವಿಚಕ್ಷಣಾ ದಳವನ್ನು ರದ್ದುಪಡಿಸಿದ್ದಾರೆ. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಲೆಯಾಳಂನ ದೈನಿಕ ಮಾತೃಭೂಮಿ ಮಾಡಿದ ವರದಿಯನ್ನು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗಂಭೀರವಾಗಿ ಪರಿಗಣಿಸಿದೆ.

ಶಬರಿಮಲೆಯ ಅತಿಥಿ ಗೃಹಕ್ಕೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ನಕಲಿ ರಶೀದಿಗಳು ಮತ್ತು ಶೌಚಗೃಹ ನಿರ್ಮಿಸುವ ವಿಚಾರದಲ್ಲಿ ಎಸಗಿರುವ ಅಕ್ರಮಗಳು ಬೆಳಕಿಗೆ ಬಂದರೆ ಸಮಸ್ಯೆಯಾಗುತ್ತದೆ, ಬಂಧನಕ್ಕೆ ಒಳಗಾಗಬೇಕಾಗುತ್ತದೆ ಎಂದು ವಿಚಕ್ಷಣಾ ದಳ ರದ್ದುಪಡಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ದೇವಸ್ಥಾನದ ವಿಚಕ್ಷಣಾ ದಳದಿಂದ ಇಬ್ಬರು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ತೆಗೆದುಹಾಕಲಾಯಿತು. ಶೀಘ್ರದಲ್ಲೇ ನಿವೃತ್ತರಾಗಲಿರುವ ಪೊಲೀಸ್ ವರಿಷ್ಠಾಧಿಕಾರಿಯನ್ನಷ್ಟೇ ಉಳಿಸಿಕೊಂಡು ಉಳಿದವರನ್ನು ಪೊಲೀಸ್ ಇಲಾಖೆಗೆ ಕಳುಹಿಸಲಾಗಿದೆ. ಅತಿಥಿಗೃಹದಲ್ಲಿ ನೆಲೆಸಿದ್ದ ಗಣ್ಯರು ಮತ್ತು ಉನ್ನತಮಟ್ಟದ ಅಧಿಕಾರಿಗಳಿಗೆ ಪೂರೈಸಲಾದ ಆಹಾರಕ್ಕೆ ಸಂಬಂಧಿಸಿದಂತೆ ಅಪಾರ ಖರ್ಚು ಮಾಡಿರುವ ರಶೀದಿಗಳು ವಿಚಕ್ಷಣಾ ದಳಕ್ಕೆ ಸಿಕ್ಕ ಬಗ್ಗೆ ವರದಿಯಲ್ಲಿ ನೀಡಿದ ಮಾಹಿತಿಯನ್ನು ಪೀಠ ಗಣನೆಗೆ ತೆಗೆದುಕೊಂಡಿದೆ.

ವಿಜಿಲೆನ್ಸ್ ವಿಭಾಗದ ವರದಿಯ ಪ್ರಕಾರ, ತಿರುವಾಂಕೂರು ದೇವಸ್ವಂ ಮಂಡಳಿಯು ಈ ವಿಷಯವನ್ನು ರಾಜ್ಯ ವಿಜಿಲೆನ್ಸ್‌ಗೆ ರವಾನಿಸಿತು. ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ಬ್ಯೂರೋದಿಂದ ಅಪರಾಧವನ್ನು ಐಪಿಸಿ ಸೆಕ್ಷನ್ 420, 468 ಮತ್ತು 471 ಮತ್ತು ಸೆಕ್ಷನ್ 13(2) ಅಡಿ ದಾಖಲಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1) (ಎ) ನಡಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ವಿಜಿಲೆನ್ಸ್ ವಿಭಾಗವು ಹಲವು ಅವ್ಯವಹಾರಗಳ ನಿದರ್ಶನಗಳನ್ನು ಪತ್ತೆಹಚ್ಚಿದೆ ಎಂದು ನ್ಯಾಯಾಲಯ ಗಮನಿಸಿದೆ.

ಪ್ರಸ್ತುತ, ಮಂಡಳಿಯ ವಿಚಕ್ಷಣ ದಳದ ಮುಖ್ಯ ವಿಚಕ್ಷಣ ದಳ ಅಧಿಕಾರಿ ಮತ್ತು ಸಬ್ ಇನ್ಸ್‌ಪೆಕ್ಟರ್ ಕೇಡರ್‌ನಲ್ಲಿ ಒಬ್ಬ ಅಧಿಕಾರಿಯನ್ನು ಒಳಗೊಂಡಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಸ್ಥಾಯಿ ವಕೀಲರು ಸೂಚಿಸಿದ್ದಾರೆ. ಶಬರಿಮಲೆಯ ವಿಶೇಷ ಆಯುಕ್ತರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಚನೆಗಳನ್ನು ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ.

ದೇವಸ್ಥಾನ ವಿಚಕ್ಷಣಾ ತನಿಖೆಯಿಂದ ಹಿರಿಯ ಅಧಿಕಾರಿಗಳಿಗೆ ಎದುರಾಗಬಹುದಾದ ಸಂಕಷ್ಟದಿಂದ ಅಳುಕುಗೊಂಡು ರಾಜ್ಯ ವಿಚಕ್ಷಣಾ ದಳಕ್ಕೆ ಪ್ರಕರಣವನ್ನು ವಹಿಸಲಾಗಿದೆ ಎಂಬುದನ್ನು ಪೀಠವು ಗಂಭೀರವಾಗಿ ಪರಿಗಣಿಸಿದೆ. ಫೆಬ್ರವರಿ 3ಕ್ಕೆ ವಿಚಾರಣೆ ಮುಂದೂಡಲಾಗಿದೆ.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...