Homeಮುಖಪುಟಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳದ ತಿರುವಾಂಕೂರು ದೇವಸ್ಥಾನ ಮಂಡಳಿ ನಕಲಿ ರಶೀದಿ ಸಲ್ಲಿಸುವ ಮೂಲಕ ದೊಡ್ಡ ಪ್ರಮಾಣದ ಭ್ರಷ್ಟಾಚಾರವಾಗಿರುವುದರಿಂದ ದೇವಸ್ಥಾನದ ವಿಚಕ್ಷಣಾ ದಳ ರದ್ದುಪಡಿಸಿರುವ ಕುರಿತು ಮಾಧ್ಯಮ ವರದಿಯನ್ನು ಆಧರಿಸಿ ಮಂಗಳವಾರ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ದೇವಸ್ಥಾನ ಮಂಡಳಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಹಿರಿಯ ಅಧಿಕಾರಿಗಳು ದೇವಸ್ಥಾನದ ವಿಚಕ್ಷಣಾ ದಳವನ್ನು ರದ್ದುಪಡಿಸಿದ್ದಾರೆ. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಲೆಯಾಳಂನ ದೈನಿಕ ಮಾತೃಭೂಮಿ ಮಾಡಿದ ವರದಿಯನ್ನು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗಂಭೀರವಾಗಿ ಪರಿಗಣಿಸಿದೆ.

ಶಬರಿಮಲೆಯ ಅತಿಥಿ ಗೃಹಕ್ಕೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ನಕಲಿ ರಶೀದಿಗಳು ಮತ್ತು ಶೌಚಗೃಹ ನಿರ್ಮಿಸುವ ವಿಚಾರದಲ್ಲಿ ಎಸಗಿರುವ ಅಕ್ರಮಗಳು ಬೆಳಕಿಗೆ ಬಂದರೆ ಸಮಸ್ಯೆಯಾಗುತ್ತದೆ, ಬಂಧನಕ್ಕೆ ಒಳಗಾಗಬೇಕಾಗುತ್ತದೆ ಎಂದು ವಿಚಕ್ಷಣಾ ದಳ ರದ್ದುಪಡಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ದೇವಸ್ಥಾನದ ವಿಚಕ್ಷಣಾ ದಳದಿಂದ ಇಬ್ಬರು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ತೆಗೆದುಹಾಕಲಾಯಿತು. ಶೀಘ್ರದಲ್ಲೇ ನಿವೃತ್ತರಾಗಲಿರುವ ಪೊಲೀಸ್ ವರಿಷ್ಠಾಧಿಕಾರಿಯನ್ನಷ್ಟೇ ಉಳಿಸಿಕೊಂಡು ಉಳಿದವರನ್ನು ಪೊಲೀಸ್ ಇಲಾಖೆಗೆ ಕಳುಹಿಸಲಾಗಿದೆ. ಅತಿಥಿಗೃಹದಲ್ಲಿ ನೆಲೆಸಿದ್ದ ಗಣ್ಯರು ಮತ್ತು ಉನ್ನತಮಟ್ಟದ ಅಧಿಕಾರಿಗಳಿಗೆ ಪೂರೈಸಲಾದ ಆಹಾರಕ್ಕೆ ಸಂಬಂಧಿಸಿದಂತೆ ಅಪಾರ ಖರ್ಚು ಮಾಡಿರುವ ರಶೀದಿಗಳು ವಿಚಕ್ಷಣಾ ದಳಕ್ಕೆ ಸಿಕ್ಕ ಬಗ್ಗೆ ವರದಿಯಲ್ಲಿ ನೀಡಿದ ಮಾಹಿತಿಯನ್ನು ಪೀಠ ಗಣನೆಗೆ ತೆಗೆದುಕೊಂಡಿದೆ.

ವಿಜಿಲೆನ್ಸ್ ವಿಭಾಗದ ವರದಿಯ ಪ್ರಕಾರ, ತಿರುವಾಂಕೂರು ದೇವಸ್ವಂ ಮಂಡಳಿಯು ಈ ವಿಷಯವನ್ನು ರಾಜ್ಯ ವಿಜಿಲೆನ್ಸ್‌ಗೆ ರವಾನಿಸಿತು. ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ಬ್ಯೂರೋದಿಂದ ಅಪರಾಧವನ್ನು ಐಪಿಸಿ ಸೆಕ್ಷನ್ 420, 468 ಮತ್ತು 471 ಮತ್ತು ಸೆಕ್ಷನ್ 13(2) ಅಡಿ ದಾಖಲಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1) (ಎ) ನಡಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ವಿಜಿಲೆನ್ಸ್ ವಿಭಾಗವು ಹಲವು ಅವ್ಯವಹಾರಗಳ ನಿದರ್ಶನಗಳನ್ನು ಪತ್ತೆಹಚ್ಚಿದೆ ಎಂದು ನ್ಯಾಯಾಲಯ ಗಮನಿಸಿದೆ.

ಪ್ರಸ್ತುತ, ಮಂಡಳಿಯ ವಿಚಕ್ಷಣ ದಳದ ಮುಖ್ಯ ವಿಚಕ್ಷಣ ದಳ ಅಧಿಕಾರಿ ಮತ್ತು ಸಬ್ ಇನ್ಸ್‌ಪೆಕ್ಟರ್ ಕೇಡರ್‌ನಲ್ಲಿ ಒಬ್ಬ ಅಧಿಕಾರಿಯನ್ನು ಒಳಗೊಂಡಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಸ್ಥಾಯಿ ವಕೀಲರು ಸೂಚಿಸಿದ್ದಾರೆ. ಶಬರಿಮಲೆಯ ವಿಶೇಷ ಆಯುಕ್ತರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಚನೆಗಳನ್ನು ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ.

ದೇವಸ್ಥಾನ ವಿಚಕ್ಷಣಾ ತನಿಖೆಯಿಂದ ಹಿರಿಯ ಅಧಿಕಾರಿಗಳಿಗೆ ಎದುರಾಗಬಹುದಾದ ಸಂಕಷ್ಟದಿಂದ ಅಳುಕುಗೊಂಡು ರಾಜ್ಯ ವಿಚಕ್ಷಣಾ ದಳಕ್ಕೆ ಪ್ರಕರಣವನ್ನು ವಹಿಸಲಾಗಿದೆ ಎಂಬುದನ್ನು ಪೀಠವು ಗಂಭೀರವಾಗಿ ಪರಿಗಣಿಸಿದೆ. ಫೆಬ್ರವರಿ 3ಕ್ಕೆ ವಿಚಾರಣೆ ಮುಂದೂಡಲಾಗಿದೆ.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...