Homeಮುಖಪುಟಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳದ ತಿರುವಾಂಕೂರು ದೇವಸ್ಥಾನ ಮಂಡಳಿ ನಕಲಿ ರಶೀದಿ ಸಲ್ಲಿಸುವ ಮೂಲಕ ದೊಡ್ಡ ಪ್ರಮಾಣದ ಭ್ರಷ್ಟಾಚಾರವಾಗಿರುವುದರಿಂದ ದೇವಸ್ಥಾನದ ವಿಚಕ್ಷಣಾ ದಳ ರದ್ದುಪಡಿಸಿರುವ ಕುರಿತು ಮಾಧ್ಯಮ ವರದಿಯನ್ನು ಆಧರಿಸಿ ಮಂಗಳವಾರ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ದೇವಸ್ಥಾನ ಮಂಡಳಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಹಿರಿಯ ಅಧಿಕಾರಿಗಳು ದೇವಸ್ಥಾನದ ವಿಚಕ್ಷಣಾ ದಳವನ್ನು ರದ್ದುಪಡಿಸಿದ್ದಾರೆ. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಲೆಯಾಳಂನ ದೈನಿಕ ಮಾತೃಭೂಮಿ ಮಾಡಿದ ವರದಿಯನ್ನು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗಂಭೀರವಾಗಿ ಪರಿಗಣಿಸಿದೆ.

ಶಬರಿಮಲೆಯ ಅತಿಥಿ ಗೃಹಕ್ಕೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ನಕಲಿ ರಶೀದಿಗಳು ಮತ್ತು ಶೌಚಗೃಹ ನಿರ್ಮಿಸುವ ವಿಚಾರದಲ್ಲಿ ಎಸಗಿರುವ ಅಕ್ರಮಗಳು ಬೆಳಕಿಗೆ ಬಂದರೆ ಸಮಸ್ಯೆಯಾಗುತ್ತದೆ, ಬಂಧನಕ್ಕೆ ಒಳಗಾಗಬೇಕಾಗುತ್ತದೆ ಎಂದು ವಿಚಕ್ಷಣಾ ದಳ ರದ್ದುಪಡಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ದೇವಸ್ಥಾನದ ವಿಚಕ್ಷಣಾ ದಳದಿಂದ ಇಬ್ಬರು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ತೆಗೆದುಹಾಕಲಾಯಿತು. ಶೀಘ್ರದಲ್ಲೇ ನಿವೃತ್ತರಾಗಲಿರುವ ಪೊಲೀಸ್ ವರಿಷ್ಠಾಧಿಕಾರಿಯನ್ನಷ್ಟೇ ಉಳಿಸಿಕೊಂಡು ಉಳಿದವರನ್ನು ಪೊಲೀಸ್ ಇಲಾಖೆಗೆ ಕಳುಹಿಸಲಾಗಿದೆ. ಅತಿಥಿಗೃಹದಲ್ಲಿ ನೆಲೆಸಿದ್ದ ಗಣ್ಯರು ಮತ್ತು ಉನ್ನತಮಟ್ಟದ ಅಧಿಕಾರಿಗಳಿಗೆ ಪೂರೈಸಲಾದ ಆಹಾರಕ್ಕೆ ಸಂಬಂಧಿಸಿದಂತೆ ಅಪಾರ ಖರ್ಚು ಮಾಡಿರುವ ರಶೀದಿಗಳು ವಿಚಕ್ಷಣಾ ದಳಕ್ಕೆ ಸಿಕ್ಕ ಬಗ್ಗೆ ವರದಿಯಲ್ಲಿ ನೀಡಿದ ಮಾಹಿತಿಯನ್ನು ಪೀಠ ಗಣನೆಗೆ ತೆಗೆದುಕೊಂಡಿದೆ.

ವಿಜಿಲೆನ್ಸ್ ವಿಭಾಗದ ವರದಿಯ ಪ್ರಕಾರ, ತಿರುವಾಂಕೂರು ದೇವಸ್ವಂ ಮಂಡಳಿಯು ಈ ವಿಷಯವನ್ನು ರಾಜ್ಯ ವಿಜಿಲೆನ್ಸ್‌ಗೆ ರವಾನಿಸಿತು. ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ಬ್ಯೂರೋದಿಂದ ಅಪರಾಧವನ್ನು ಐಪಿಸಿ ಸೆಕ್ಷನ್ 420, 468 ಮತ್ತು 471 ಮತ್ತು ಸೆಕ್ಷನ್ 13(2) ಅಡಿ ದಾಖಲಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1) (ಎ) ನಡಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ವಿಜಿಲೆನ್ಸ್ ವಿಭಾಗವು ಹಲವು ಅವ್ಯವಹಾರಗಳ ನಿದರ್ಶನಗಳನ್ನು ಪತ್ತೆಹಚ್ಚಿದೆ ಎಂದು ನ್ಯಾಯಾಲಯ ಗಮನಿಸಿದೆ.

ಪ್ರಸ್ತುತ, ಮಂಡಳಿಯ ವಿಚಕ್ಷಣ ದಳದ ಮುಖ್ಯ ವಿಚಕ್ಷಣ ದಳ ಅಧಿಕಾರಿ ಮತ್ತು ಸಬ್ ಇನ್ಸ್‌ಪೆಕ್ಟರ್ ಕೇಡರ್‌ನಲ್ಲಿ ಒಬ್ಬ ಅಧಿಕಾರಿಯನ್ನು ಒಳಗೊಂಡಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಸ್ಥಾಯಿ ವಕೀಲರು ಸೂಚಿಸಿದ್ದಾರೆ. ಶಬರಿಮಲೆಯ ವಿಶೇಷ ಆಯುಕ್ತರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಚನೆಗಳನ್ನು ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ.

ದೇವಸ್ಥಾನ ವಿಚಕ್ಷಣಾ ತನಿಖೆಯಿಂದ ಹಿರಿಯ ಅಧಿಕಾರಿಗಳಿಗೆ ಎದುರಾಗಬಹುದಾದ ಸಂಕಷ್ಟದಿಂದ ಅಳುಕುಗೊಂಡು ರಾಜ್ಯ ವಿಚಕ್ಷಣಾ ದಳಕ್ಕೆ ಪ್ರಕರಣವನ್ನು ವಹಿಸಲಾಗಿದೆ ಎಂಬುದನ್ನು ಪೀಠವು ಗಂಭೀರವಾಗಿ ಪರಿಗಣಿಸಿದೆ. ಫೆಬ್ರವರಿ 3ಕ್ಕೆ ವಿಚಾರಣೆ ಮುಂದೂಡಲಾಗಿದೆ.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....