Homeಮುಖಪುಟಸಚಿನ್‌ ಪೈಲಟ್‌ ಕಾಂಗ್ರೆಸ್‌ ವರಿಷ್ಠರ ಭೇಟಿ: ಪಂಜಾಬ್‌ ಬಳಿಕ ರಾಜಸ್ತಾನದಲ್ಲಿ ನಾಯಕತ್ವ ಬದಲಾವಣೆ?

ಸಚಿನ್‌ ಪೈಲಟ್‌ ಕಾಂಗ್ರೆಸ್‌ ವರಿಷ್ಠರ ಭೇಟಿ: ಪಂಜಾಬ್‌ ಬಳಿಕ ರಾಜಸ್ತಾನದಲ್ಲಿ ನಾಯಕತ್ವ ಬದಲಾವಣೆ?

- Advertisement -
- Advertisement -

ಹತ್ತು ದಿನಗಳ ಒಳಗೆ ಎರಡು ಭಾರಿ ಕಾಂಗ್ರೆಸ್ ವರಿಷ್ಠರನ್ನು ರಾಜಸ್ತಾನದ ಯುವ ಕಾಂಗ್ರೆಸ್ ನಾಯಕ ಸಚಿನ್‌ ಪೈಲಟ್‌ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಪಂಜಾಬ್‌ನಲ್ಲಿ ಅಮರಿಂದರ್‌ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ವ್ಯಕ್ತಿ ಚರಣಜಿತ್‌‌ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಪಂಜಾಬ್‌ನಲ್ಲಿ 2022ರಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಮಹತ್ವ ಪಡೆದಿದೆ. ಈ ಹಿನ್ನೆಲೆಯಲ್ಲಿ ಸಚಿನ್‌ ಪೈಲಟ್‌‌ ರಾಜಸ್ತಾನದ ನಾಯಕತ್ವ ಬದಲಾವಣೆಗೂ ಯತ್ನಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೂ ಆಗಿರುವ ಸಚಿನ್‌, ಈ ಹಿಂದೆಯೂ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರು. ಕಾಂಗ್ರೆಸ್ ಜರುಗಿಸಿದ ಕ್ರಮಗಳಿಂದ ನಂತರ ತಣ್ಣಗಾಗಿದ್ದರು. ಪಂಜಾಬ್‌ನಲ್ಲಿ ನಾಯಕತ್ವ ಬದಲಾವಣೆಯ ಬೆನ್ನಲ್ಲೇ ಕಾಂಗ್ರೆಸ್ ವರಿಷ್ಠರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರನ್ನು ಸಚಿನ್‌ ಭೇಟಿಯಾಗಿದ್ದಾರೆ. ಹತ್ತು ದಿನಗಳ ಒಳಗೆ ಎರಡು ಭಾರಿ ಭೇಟಿಯಾಗಿರುವುದು ರಾಜಕೀಯ ಚರ್ಚೆಗೆ ಅವಕಾಶ ನೀಡಿದೆ.

ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...