Homeಮುಖಪುಟಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್, ಸಚಿನ್‌ರನ್ನು ಕೇಳಬಾರದಿತ್ತು.

- Advertisement -
- Advertisement -

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ರಾಜ್‌ ಠಾಕ್ರೆ ದೂರಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್ ಸೇರಿ ಹಲವರು ಟ್ವೀಟ್ ಮಾಡಿದ್ದರು. ಇದರಿಂದ ಕೆರಳಿದ ಲಕ್ಷಾಂತರ ಜಾಲತಾಣಿಗರು ಅಷ್ಟು ದಿನ ರೈತ ಹೋರಾಟ ಇವರಿಗೆ ಕಾಣುವುದಿಲ್ಲವೇ ಎಂದು ಈ ತಾರೆಯರನ್ನು ವಿರೋಧಿಸಿ ದೊಡ್ಡ ಮಟ್ಟದ ಟ್ರೋಲ್ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್‌ಠಾಕ್ರೆ “ಈ ರೈತ ಹೋರಾಟವನ್ನು ಹತ್ತಿಕ್ಕುತ್ತಿರುವುದಕ್ಕೆ ಬರುತ್ತಿರುವ ಅಂತರಾಷ್ಟ್ರೀಯ ಪ್ರತಿಕ್ರಿಯೆಯು ಸರ್ಕಾರಕ್ಕೆ ಸಂಬಂಧಿಸಿದ ವಿಷಯವೇ ಹೊರತು ಇಡೀ ರಾಷ್ಟ್ರಕ್ಕೆ ಸಂಬಂಧಿಸಿಲ್ಲ. ಇದು ಚೀನಾ ಅಥವಾ ಪಾಕಿಸ್ತಾನದಿಂದ ರಾಷ್ಟ್ರವು ಅಪಾಯವನ್ನು ಎದುರಿಸುತ್ತಿರುವುದಲ್ಲ” ಎಂದು ತಿಳಿಸಿದ್ದಾರೆ. ಹಾಗಾಗಿ ಇದನ್ನು ಸರ್ಕಾರವೇ ಎದುರಿಸಬೇಕೆ ಹೊರತು ಇಡೀ ರಾಷ್ಟ್ರಕ್ಕೆ ಅವಮಾನ ಎಂಬಂತೆ ಬಿಂಬಿಸಿ ದೊಡ್ಡ ದೊಡ್ಡ ವ್ಯಕ್ತಿಗಳು ಸರ್ಕಾರದ ಪರ ಟ್ವೀಟ್ ಮಾಡುವಂತೆ ಕೇಳಿಕೊಳ್ಳುವುದು ಸರಿಯಲ್ಲ, ವಿಶೇಷವಾಗಿ ಸಚಿನ್, ಲತಾ ಮಂಗೇಶ್ಕರ್‌ರವರನ್ನು ಕೇಳಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ್ ಗಾಯಕಿ ರಿಯಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್ ಮತ್ತು ಚಲನಚಿತ್ರ ನಟಿ ಮಿಯಾ ಖಲೀಫರವರು ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್‌ಗಳಿಗೆ ಪ್ರತಿಯಾಗಿ ಭಾರತದ ಚಿತ್ರನಟರು ಮತ್ತು ಕ್ರೀಡಾಪಟುಗಳು ಯೋಜಿತ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದರಿಂದ ಅವರ ವ್ಯಕ್ತಿತ್ವಕ್ಕೂ ಹಾನಿ ಉಂಟಾಗಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಭಾರತ್ ರತ್ನ ಪಡೆದಿರುವವರು. ಅಂತಹ ಸರಳ ಜನರು ಟ್ವೀಟ್ ಮಾಡುವಂತೆ ಸರ್ಕಾರ ಕೇಳಿದೆ ಮತ್ತು ಅವರೀಗ ಟ್ರೋಲ್‌ಗೊಳಗಾಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆಟ್ರಾಕ್ಟರ್‌ ಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...