Homeಮುಖಪುಟಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್, ಸಚಿನ್‌ರನ್ನು ಕೇಳಬಾರದಿತ್ತು.

- Advertisement -
- Advertisement -

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ರಾಜ್‌ ಠಾಕ್ರೆ ದೂರಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್ ಸೇರಿ ಹಲವರು ಟ್ವೀಟ್ ಮಾಡಿದ್ದರು. ಇದರಿಂದ ಕೆರಳಿದ ಲಕ್ಷಾಂತರ ಜಾಲತಾಣಿಗರು ಅಷ್ಟು ದಿನ ರೈತ ಹೋರಾಟ ಇವರಿಗೆ ಕಾಣುವುದಿಲ್ಲವೇ ಎಂದು ಈ ತಾರೆಯರನ್ನು ವಿರೋಧಿಸಿ ದೊಡ್ಡ ಮಟ್ಟದ ಟ್ರೋಲ್ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್‌ಠಾಕ್ರೆ “ಈ ರೈತ ಹೋರಾಟವನ್ನು ಹತ್ತಿಕ್ಕುತ್ತಿರುವುದಕ್ಕೆ ಬರುತ್ತಿರುವ ಅಂತರಾಷ್ಟ್ರೀಯ ಪ್ರತಿಕ್ರಿಯೆಯು ಸರ್ಕಾರಕ್ಕೆ ಸಂಬಂಧಿಸಿದ ವಿಷಯವೇ ಹೊರತು ಇಡೀ ರಾಷ್ಟ್ರಕ್ಕೆ ಸಂಬಂಧಿಸಿಲ್ಲ. ಇದು ಚೀನಾ ಅಥವಾ ಪಾಕಿಸ್ತಾನದಿಂದ ರಾಷ್ಟ್ರವು ಅಪಾಯವನ್ನು ಎದುರಿಸುತ್ತಿರುವುದಲ್ಲ” ಎಂದು ತಿಳಿಸಿದ್ದಾರೆ. ಹಾಗಾಗಿ ಇದನ್ನು ಸರ್ಕಾರವೇ ಎದುರಿಸಬೇಕೆ ಹೊರತು ಇಡೀ ರಾಷ್ಟ್ರಕ್ಕೆ ಅವಮಾನ ಎಂಬಂತೆ ಬಿಂಬಿಸಿ ದೊಡ್ಡ ದೊಡ್ಡ ವ್ಯಕ್ತಿಗಳು ಸರ್ಕಾರದ ಪರ ಟ್ವೀಟ್ ಮಾಡುವಂತೆ ಕೇಳಿಕೊಳ್ಳುವುದು ಸರಿಯಲ್ಲ, ವಿಶೇಷವಾಗಿ ಸಚಿನ್, ಲತಾ ಮಂಗೇಶ್ಕರ್‌ರವರನ್ನು ಕೇಳಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ್ ಗಾಯಕಿ ರಿಯಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್ ಮತ್ತು ಚಲನಚಿತ್ರ ನಟಿ ಮಿಯಾ ಖಲೀಫರವರು ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್‌ಗಳಿಗೆ ಪ್ರತಿಯಾಗಿ ಭಾರತದ ಚಿತ್ರನಟರು ಮತ್ತು ಕ್ರೀಡಾಪಟುಗಳು ಯೋಜಿತ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದರಿಂದ ಅವರ ವ್ಯಕ್ತಿತ್ವಕ್ಕೂ ಹಾನಿ ಉಂಟಾಗಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಭಾರತ್ ರತ್ನ ಪಡೆದಿರುವವರು. ಅಂತಹ ಸರಳ ಜನರು ಟ್ವೀಟ್ ಮಾಡುವಂತೆ ಸರ್ಕಾರ ಕೇಳಿದೆ ಮತ್ತು ಅವರೀಗ ಟ್ರೋಲ್‌ಗೊಳಗಾಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆಟ್ರಾಕ್ಟರ್‌ ಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....