Homeಮುಖಪುಟಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್, ಸಚಿನ್‌ರನ್ನು ಕೇಳಬಾರದಿತ್ತು.

- Advertisement -
- Advertisement -

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ರಾಜ್‌ ಠಾಕ್ರೆ ದೂರಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್ ಸೇರಿ ಹಲವರು ಟ್ವೀಟ್ ಮಾಡಿದ್ದರು. ಇದರಿಂದ ಕೆರಳಿದ ಲಕ್ಷಾಂತರ ಜಾಲತಾಣಿಗರು ಅಷ್ಟು ದಿನ ರೈತ ಹೋರಾಟ ಇವರಿಗೆ ಕಾಣುವುದಿಲ್ಲವೇ ಎಂದು ಈ ತಾರೆಯರನ್ನು ವಿರೋಧಿಸಿ ದೊಡ್ಡ ಮಟ್ಟದ ಟ್ರೋಲ್ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್‌ಠಾಕ್ರೆ “ಈ ರೈತ ಹೋರಾಟವನ್ನು ಹತ್ತಿಕ್ಕುತ್ತಿರುವುದಕ್ಕೆ ಬರುತ್ತಿರುವ ಅಂತರಾಷ್ಟ್ರೀಯ ಪ್ರತಿಕ್ರಿಯೆಯು ಸರ್ಕಾರಕ್ಕೆ ಸಂಬಂಧಿಸಿದ ವಿಷಯವೇ ಹೊರತು ಇಡೀ ರಾಷ್ಟ್ರಕ್ಕೆ ಸಂಬಂಧಿಸಿಲ್ಲ. ಇದು ಚೀನಾ ಅಥವಾ ಪಾಕಿಸ್ತಾನದಿಂದ ರಾಷ್ಟ್ರವು ಅಪಾಯವನ್ನು ಎದುರಿಸುತ್ತಿರುವುದಲ್ಲ” ಎಂದು ತಿಳಿಸಿದ್ದಾರೆ. ಹಾಗಾಗಿ ಇದನ್ನು ಸರ್ಕಾರವೇ ಎದುರಿಸಬೇಕೆ ಹೊರತು ಇಡೀ ರಾಷ್ಟ್ರಕ್ಕೆ ಅವಮಾನ ಎಂಬಂತೆ ಬಿಂಬಿಸಿ ದೊಡ್ಡ ದೊಡ್ಡ ವ್ಯಕ್ತಿಗಳು ಸರ್ಕಾರದ ಪರ ಟ್ವೀಟ್ ಮಾಡುವಂತೆ ಕೇಳಿಕೊಳ್ಳುವುದು ಸರಿಯಲ್ಲ, ವಿಶೇಷವಾಗಿ ಸಚಿನ್, ಲತಾ ಮಂಗೇಶ್ಕರ್‌ರವರನ್ನು ಕೇಳಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ್ ಗಾಯಕಿ ರಿಯಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್ ಮತ್ತು ಚಲನಚಿತ್ರ ನಟಿ ಮಿಯಾ ಖಲೀಫರವರು ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್‌ಗಳಿಗೆ ಪ್ರತಿಯಾಗಿ ಭಾರತದ ಚಿತ್ರನಟರು ಮತ್ತು ಕ್ರೀಡಾಪಟುಗಳು ಯೋಜಿತ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದರಿಂದ ಅವರ ವ್ಯಕ್ತಿತ್ವಕ್ಕೂ ಹಾನಿ ಉಂಟಾಗಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಭಾರತ್ ರತ್ನ ಪಡೆದಿರುವವರು. ಅಂತಹ ಸರಳ ಜನರು ಟ್ವೀಟ್ ಮಾಡುವಂತೆ ಸರ್ಕಾರ ಕೇಳಿದೆ ಮತ್ತು ಅವರೀಗ ಟ್ರೋಲ್‌ಗೊಳಗಾಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆಟ್ರಾಕ್ಟರ್‌ ಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...