Homeಮುಖಪುಟಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್, ಸಚಿನ್‌ರನ್ನು ಕೇಳಬಾರದಿತ್ತು.

- Advertisement -
- Advertisement -

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ರಾಜ್‌ ಠಾಕ್ರೆ ದೂರಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್ ಸೇರಿ ಹಲವರು ಟ್ವೀಟ್ ಮಾಡಿದ್ದರು. ಇದರಿಂದ ಕೆರಳಿದ ಲಕ್ಷಾಂತರ ಜಾಲತಾಣಿಗರು ಅಷ್ಟು ದಿನ ರೈತ ಹೋರಾಟ ಇವರಿಗೆ ಕಾಣುವುದಿಲ್ಲವೇ ಎಂದು ಈ ತಾರೆಯರನ್ನು ವಿರೋಧಿಸಿ ದೊಡ್ಡ ಮಟ್ಟದ ಟ್ರೋಲ್ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್‌ಠಾಕ್ರೆ “ಈ ರೈತ ಹೋರಾಟವನ್ನು ಹತ್ತಿಕ್ಕುತ್ತಿರುವುದಕ್ಕೆ ಬರುತ್ತಿರುವ ಅಂತರಾಷ್ಟ್ರೀಯ ಪ್ರತಿಕ್ರಿಯೆಯು ಸರ್ಕಾರಕ್ಕೆ ಸಂಬಂಧಿಸಿದ ವಿಷಯವೇ ಹೊರತು ಇಡೀ ರಾಷ್ಟ್ರಕ್ಕೆ ಸಂಬಂಧಿಸಿಲ್ಲ. ಇದು ಚೀನಾ ಅಥವಾ ಪಾಕಿಸ್ತಾನದಿಂದ ರಾಷ್ಟ್ರವು ಅಪಾಯವನ್ನು ಎದುರಿಸುತ್ತಿರುವುದಲ್ಲ” ಎಂದು ತಿಳಿಸಿದ್ದಾರೆ. ಹಾಗಾಗಿ ಇದನ್ನು ಸರ್ಕಾರವೇ ಎದುರಿಸಬೇಕೆ ಹೊರತು ಇಡೀ ರಾಷ್ಟ್ರಕ್ಕೆ ಅವಮಾನ ಎಂಬಂತೆ ಬಿಂಬಿಸಿ ದೊಡ್ಡ ದೊಡ್ಡ ವ್ಯಕ್ತಿಗಳು ಸರ್ಕಾರದ ಪರ ಟ್ವೀಟ್ ಮಾಡುವಂತೆ ಕೇಳಿಕೊಳ್ಳುವುದು ಸರಿಯಲ್ಲ, ವಿಶೇಷವಾಗಿ ಸಚಿನ್, ಲತಾ ಮಂಗೇಶ್ಕರ್‌ರವರನ್ನು ಕೇಳಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ್ ಗಾಯಕಿ ರಿಯಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್ ಮತ್ತು ಚಲನಚಿತ್ರ ನಟಿ ಮಿಯಾ ಖಲೀಫರವರು ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್‌ಗಳಿಗೆ ಪ್ರತಿಯಾಗಿ ಭಾರತದ ಚಿತ್ರನಟರು ಮತ್ತು ಕ್ರೀಡಾಪಟುಗಳು ಯೋಜಿತ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದರಿಂದ ಅವರ ವ್ಯಕ್ತಿತ್ವಕ್ಕೂ ಹಾನಿ ಉಂಟಾಗಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಭಾರತ್ ರತ್ನ ಪಡೆದಿರುವವರು. ಅಂತಹ ಸರಳ ಜನರು ಟ್ವೀಟ್ ಮಾಡುವಂತೆ ಸರ್ಕಾರ ಕೇಳಿದೆ ಮತ್ತು ಅವರೀಗ ಟ್ರೋಲ್‌ಗೊಳಗಾಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆಟ್ರಾಕ್ಟರ್‌ ಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...